Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...