Homeಮುಖಪುಟಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

ಮೆಟಾ v/s ವೈರ್‌: ಆದಿತ್ಯನಾಥ್ ಕುರಿತ ಪೋಸ್ಟ್‌ ಮರುಸ್ಥಾಪಿಸಿದ ಇನ್‌ಸ್ಟಾಗ್ರಾಮ್‌

- Advertisement -
- Advertisement -

ಬಿಜೆಪಿಯ ಐಟಿ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಯೋಗಿ ಆದಿತ್ಯನಾಥ್‌ ಕುರಿತ ಇನ್‌ಸ್ಟಾಗ್ರಾಮ್‌ ಪೋಸ್ಟ್‌ಅನ್ನು ತೆಗೆದುಹಾಕಲಾಗಿದೆ ಎಂದು ‘ದಿ ವೈರ್‌’ ವರದಿ ಮಾಡಿದ ಬಳಿಕ, ಮೆಟಾ ಸಂಸ್ಥೆಯು ಇನ್‌ಸ್ಟಾಗ್ರಾಮ್‌ ಪೋಸ್ಟ್‌ ಅನ್ನು ಮರುಸ್ಥಾಪಿಸಿದೆ.

ಸದರಿ ಖಾತೆದಾರ @cringearchivist ಮಂಗಳವಾರ ಟ್ವಿಟ್ಟರ್‌ನಲ್ಲಿ ಈ ಕುರಿತು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ಪ್ರತಿಮೆಯನ್ನು ಪೂಜಿಸುತ್ತಿರುವ ವ್ಯಕ್ತಿಯನ್ನು ವಿಡಂಬಿಸಿದ ಪೋಸ್ಟ್‌‌ಅನ್ನು ಮೆಟಾ ‘ಮೌನವಾಗಿ ಮರುಸ್ಥಾಪಿಸಿದೆ’ ಎಂದು ಖಾತೆದಾರರು ತಿಳಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಮಾಹಿತಿ ತಂತ್ರಜ್ಞಾನ ಕೋಶದ ಮುಖ್ಯಸ್ಥ ಅಮಿತ್ ಮಾಳವಿಯಾ ವರದಿ ಮಾಡಿದ ನಂತರ ಮೆಟಾ ಸಂಸ್ಥೆಯು ಪೋಸ್ಟ್ ರಿಮೂವ್ ಮಾಡಿದೆ ಎಂಬುದು ದೊಡ್ಡ ಮಟ್ಟದಲ್ಲಿ ಚರ್ಚೆಯನ್ನು ಹುಟ್ಟಿಹಾಕಿತ್ತು.

“ಪೋಸ್ಟ್‌ನಲ್ಲಿ ನ್ಯೂಡಿಟಿ (ನಗ್ನತೆ) ಇದೆ ಎಂದು ಪೋಸ್ಟ್‌ಅನ್ನು ತೆರವು ಮಾಡಲಾಗಿದೆ. ಇಲ್ಲಿ ನಗ್ನತೆ ಮತ್ತು ಲೈಂಗಿಕ ವಿಷಯದ ಮಾರ್ಗಸೂಚಿ ಉಲ್ಲಂಘನೆಯಾಗಿದೆ” ಎಂದು ಸೂಚನೆಯನ್ನು Superhumans of Cringetopia ಖಾತೆಗೆ ನೀಡಿರುವುದಾಗಿ ವೈರ್‌ ಆರೋಪಿಸಿತ್ತು.

ಕೆಲವು ಸ್ವಯಂಚಾಲಿತ ವ್ಯವಸ್ಥೆಯಲ್ಲಿನ ದೋಷದಿಂದಾಗಿ ಪೋಸ್ಟ್ ಅನ್ನು ತೆಗೆದುಹಾಕಲಾಗಿದೆ ಎಂದು ಹಲವರು ಭಾವಿಸಿದರು. ಆದರೆ ಅಕ್ಟೋಬರ್ 10ರಂದು ‘ದಿ ವೈರ್’ ಬೇರೆಯ ಆರೋಪ ಮಾಡಿ, “ಮಾಳವಿಯಾ ಅವರ ನಿರ್ದೇಶನದ ಮೇರೆಗೆ ಮೆಟಾ ಪೋಸ್ಟ್‌ ತೆಗೆದುಹಾಕಿದೆ” ಎಂದಿತ್ತು.

ವಿಡಂಬನಾತ್ಮಕ ಪೋಸ್ಟ್ ಅನ್ನು ಮರುಸ್ಥಾಪಿಸಿರುವ ಕುರಿತು ಮೆಟಾದ ವಕ್ತಾರರು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ ಎಂದು ‘ಎಂಟ್ರಾಕರ್’ ವರದಿ ಮಾಡಿದೆ.

“ಇನ್‌ಸ್ಟಾಗ್ರಾಮ್‌ನ ಎಕ್ಸ್-ಚೆಕ್ (ಕ್ರಾಸ್‌ಚೆಕ್‌) ಕಾರ್ಯಕ್ರಮದ ಸವಲತ್ತು ಪಡೆಯುವ ಮೂಲಕ ಮಾಳವಿಯಾ ರಿಪೋರ್ಟ್ ಮಾಡಿದ್ದಾರೆ. ಹೀಗಾಗಿ ಅವರು ವರದಿ ಮಾಡುವ ಯಾವುದೇ ಪೋಸ್ಟ್‌ಗಳನ್ನು ತಕ್ಷಣವೇ ಪ್ಲಾಟ್‌ಫಾರ್ಮ್‌ನಿಂದ ತೆಗೆದುಹಾಕಲಾಗುತ್ತದೆ. ಮೆಟಾ ನಿಯಮಗಳನ್ನು ಉಲ್ಲಂಘಿಸದಿದ್ದರೂ ಯಾವುದೇ ಪರಿಶೀಲನೆಯಾಗಿಲ್ಲ” ಎಂದು ವೈರ್‌ ವರದಿ ಆರೋಪಿಸಿತ್ತು.

ಕ್ರಾಸ್‌ಚೆಕ್‌ ಕಾರ್ಯಕ್ರಮದ ಕುರಿತು ಸೆಪ್ಟೆಂಬರ್ 2021ರಲ್ಲಿ ವಾಲ್ ಸ್ಟ್ರೀಟ್ ಜರ್ನಲ್ ಮೊದಲ ಬಾರಿಗೆ ಬೆಳಕು ಚೆಲ್ಲಿತ್ತು. ಕನಿಷ್ಠ 5.8 ಮಿಲಿಯನ್ ಪ್ರಭಾವಿ ಖಾತೆದಾರರು (ಸೆಲೆಬ್ರಿಟಿಗಳು, ರಾಜಕಾರಣಿಗಳು ಮತ್ತು ಪತ್ರಕರ್ತರು) ಈ ಸವಲತ್ತು ಹೊಂದಿದ್ದಾರೆ ಎಂಬ ಚರ್ಚೆ ಮುನ್ನೆಲೆಗೆ ಬಂದಿತ್ತು.

ಮಾಳವಿಯಾಗೆ ಸಂಬಂಧಿಸಿದ ಆರೋಪಗಳನ್ನು ಮೆಟಾ ಸಂಸ್ಥೆ ನಿರಾಕರಿಸಿತು. “ದಿ ವೈರ್‌ನ ವರದಿಯು ಅಸಮರ್ಪಕ ಮತ್ತು ತಪ್ಪುದಾರಿಗೆಳೆಯುವಂತಿದೆ. ಸುಳ್ಳು ದಾಖಲೆಗಳನ್ನು ಆಧರಿಸಿ ವರದಿ ಮಾಡಲಾಗಿದೆ” ಎಂದು ಮೆಟಾ ಹೇಳಿಕೊಂಡಿದೆ. ಎಕ್ಸ್-ಚೆಕ್ ಅಥವಾ ಕ್ರಾಸ್ ಚೆಕ್ ಸವಲತ್ತುಗಳನ್ನು ಹೊಂದಿರುವ ಬಳಕೆದಾರರು ಹೇಳಿದ ತಕ್ಷಣ ಯಾವುದೇ ವಿಷಯವನ್ನು ರಿಮೂವ್‌ ಮಾಡಲು ಸಾಧ್ಯವಿಲ್ಲ. ದಿ ವೈರ್‌ ವರದಿಯು ಸುಳ್ಳು ಎಂದು ಪ್ರತಿಕ್ರಿಯೆ ನೀಡಿತ್ತು.

“ನಾವು ನಮ್ಮ ವಿಷಯದ ನಿರ್ಧಾರಗಳ ಪರಿಶೀಲನೆಯನ್ನು ಸ್ವೀಕರಿಸುತ್ತೇವೆ. ಆದರೆ ಸುಳ್ಳು ಆರೋಪಗಳನ್ನು ತಿರಸ್ಕರಿಸುತ್ತೇವೆ. ದಿ ವೈರ್ ಈ ವಂಚನೆಯ ಬಲಿಪಶು ಎಂದು ನಾವು ಭಾವಿಸುತ್ತೇವೆ, ಆದರೆ ಅಪರಾಧಿ ಅಲ್ಲ” ಎಂದಿತ್ತು.

ಈ ಹಿಂದೆ ಕಂಟೆಂಟ್ ಮಾಡರೇಶನ್ ಕುರಿತು ಮೆಟಾಗೆ ಪ್ರಶ್ನೆಗಳನ್ನು ಕಳುಹಿಸಿದಾಗ ಕಂಪನಿಯು ಹೆಚ್ಚುವರಿ ಇನ್‌ಪುಟ್‌ಗಳನ್ನು ಒದಗಿಸಲು ನಿರಾಕರಿಸಿತು ಎಂದು ಸ್ಕ್ರಾಲ್‌.ಇನ್‌ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...