Homeಮುಖಪುಟಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

- Advertisement -
- Advertisement -

ಲೋಹದ ಕೈಗವಸು ಮತ್ತು ಲೋಹದ ಲಾಠಿ ಹಿಡಿದಿರುವ ಫೋಟೊ ನಿನ್ನೆ ವೈರಲ್ ಆದ ನಂತರ ಇಂದು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸ್ ಇಲಾಖೆಯ ವಕ್ತಾರರು, ಅಂತಹ ಯಾವ ಉದ್ದೇಶವೂ ಇಲಾಖೆಗಿಲ್ಲ ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಫೋಟೊ ಬಿಡುಗಡೆಗೆ ಸಂಬಂಧಿಸಿದಂತೆ ಫೋಟೊದಲ್ಲಿರುವವರಿಗೆ ವಿವರಣೆ ಕೇಳಲಾಗಿದೆ. ಫೋಟೊದಲ್ಲಿರುವ ಪೊಲೀಸರು ದೆಹಲಿಯ ಒಂದು ಭಾಗಕ್ಕೆ ಸೇರಿದವರು ಮತ್ತು ಅವರು ತಾವೆ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಇಲಾಖೆಯಲ್ಲಿ ಅದಕ್ಕೆ ಸಂಬಂಧಿಸಿ ಯಾವುದೇ ಔಪಚಾರಿಕ ಆದೇಶ ಹೊರಡಿಸಿಲ್ಲ ಎಂದು ದೆಹಲಿ ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಫೋಟೊದಲ್ಲಿರುವುದು ಶಹದಾರಾ ಘಟಕವಾಗಿದ್ದು, ಅವರಿಂದ ವಿವರಣೆ ಕೇಳಲಾಗಿದೆ ಎಂದು ವಕ್ತಾರ ತಿಳಿಸಿದ್ದಾರೆ. ’ಈ ಫೋಟೊಗಳು ದೆಕಲಿಯ ಶಹದಾರಾ ಜಿಲ್ಲೆಗೆ ಸಂಬಂಧಿಸಿವೆ. ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿ ಇಲ್ಲದೇ ಒಬ್ಬ ಸ್ಥಳೀಯ ಅಧಿಕಾರಿ ಈ ಲೋಹದ ಲಾಠಿಗಳಿದೆ ಆರ್ಡರ್ ಮಾಡಿದ್ದರು. ಫೋಟೊದಲ್ಲಿರುವುದು ಅವೇ ಲಾಠಿಗಳು’ ಎಂದು ವಕ್ತಾರ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

’ಈ ಫೋಟೊ ನೋಡಿದ ಕೂಡಲೇ ಆ ಆಯುಧಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇಲಾಖೆಗೆ ಇಂತಹ ಆಯುಧಗಳನ್ನು ಪೂರೈಸುವ ಯಾವ ಉದ್ದೇಶವು ಇಲ್ಲ’ ಎಂದು ಅವರು ಹೇಳಿದ್ದಾರೆ.

ನಿನ್ನೆ ಎನ್‌ಡಿಟಿವಿ ವರದಿ ಆಧರಿಸಿ ನಾನುಗೌರಿ.ಕಾಂ ಕೂಡ ಈ ಫೋಟೊ ಪ್ರಕಟಿಸಿ ಇಂತಹ ಆಯುಧಗಳ ಅಗತ್ಯವಿದೆಯೇ ಎಂದು ಪ್ರಶ್ನಿಸಿತ್ತು. ಪೊಲೀಸ್ ಮೂಲಗಳು ಹಂಚಿಕೊಂಡಿದ್ದ ಆ ಫೋಟೋದಲ್ಲಿ, ಪೊಲೀಸರ ಗುಂಪೊಂದು ರಾಷ್ಟ್ರ ರಾಜಧಾನಿಯಲ್ಲಿ ರಸ್ತೆಯ ಪಕ್ಕದಲ್ಲಿ ನಿಂತಿದ್ದು, ಅವರ ಮುಂಗೈ-ಮಣಿಕಟ್ಟಿನಿಂದ ಮೊಣಕೈಗೆ ಹೊದಿಸುವ ಲೋಹದ ಕೈಗವಸುಗಳಿದ್ದವು.

ದೊಡ್ಡ ರಕ್ಷಣಾತ್ಮಕ ಹೊದಿಕೆ ಅಥವಾ ’ಗಾರ್ಡ್’ ಹೊಂದಿರುವ ಲೋಹದ ಲಾಠಿಯನ್ನೂ ಅವರು ಹಿಡಿದಿದ್ದಾರೆ. ಎದುರಾಳಿಯ ಮೇಲೆ ಸ್ವಿಂಗ್ ಮಾಡುವಾಗ ಎರಡೂ ಮಣಿಕಟ್ಟುಗಳನ್ನು ರಕ್ಷಿಸುವಂತಹ ದೊಡ್ಡದಾದ ಹಿಡಿಕೆಯೂ ಇತ್ತು. ಈ ಆಯುಧಗಳ ವಿವರಗಳ ಬಗ್ಗೆ ದೆಹಲಿ ಪೊಲೀಸರಿಂದ ನಿನ್ನೆಯವರೆಗೆ ಯಾವುದೇ ಅಧಿಕೃತ ದೃಢೀಕರಣವಿರಲಿಲ್ಲ. ಇಂದು ದೆಹಲಿ ಪೊಲೀಸ್ ಇಲಾಖೆ ಇಂತಹ ಆಯುಧಗಳನ್ನು ಬಳಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? 

ವಿಧಾನಸಭಾ ಅಧಿವೇಶನದ ಲೈವ್ ನೋಡಿ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...