Homeಮುಖಪುಟಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

ಲೋಹದ ಲಾಠಿ ಪೋಟೊ ವೈರಲ್: ಇದರ ಬಗ್ಗೆ ದೆಹಲಿ ಪೊಲೀಸರು ಹೇಳಿದ್ದೇನು ಗೊತ್ತೆ?

- Advertisement -
- Advertisement -

ಲೋಹದ ಕೈಗವಸು ಮತ್ತು ಲೋಹದ ಲಾಠಿ ಹಿಡಿದಿರುವ ಫೋಟೊ ನಿನ್ನೆ ವೈರಲ್ ಆದ ನಂತರ ಇಂದು ಸ್ಪಷ್ಟನೆ ನೀಡಿರುವ ದೆಹಲಿ ಪೊಲೀಸ್ ಇಲಾಖೆಯ ವಕ್ತಾರರು, ಅಂತಹ ಯಾವ ಉದ್ದೇಶವೂ ಇಲಾಖೆಗಿಲ್ಲ ಎಂದಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಈ ಫೋಟೊ ಬಿಡುಗಡೆಗೆ ಸಂಬಂಧಿಸಿದಂತೆ ಫೋಟೊದಲ್ಲಿರುವವರಿಗೆ ವಿವರಣೆ ಕೇಳಲಾಗಿದೆ. ಫೋಟೊದಲ್ಲಿರುವ ಪೊಲೀಸರು ದೆಹಲಿಯ ಒಂದು ಭಾಗಕ್ಕೆ ಸೇರಿದವರು ಮತ್ತು ಅವರು ತಾವೆ ಇಂತಹ ಕ್ರಮಕ್ಕೆ ಮುಂದಾಗಿದ್ದಾರೆ. ಇಲಾಖೆಯಲ್ಲಿ ಅದಕ್ಕೆ ಸಂಬಂಧಿಸಿ ಯಾವುದೇ ಔಪಚಾರಿಕ ಆದೇಶ ಹೊರಡಿಸಿಲ್ಲ ಎಂದು ದೆಹಲಿ ಪೊಲೀಸ್ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.

ಫೋಟೊದಲ್ಲಿರುವುದು ಶಹದಾರಾ ಘಟಕವಾಗಿದ್ದು, ಅವರಿಂದ ವಿವರಣೆ ಕೇಳಲಾಗಿದೆ ಎಂದು ವಕ್ತಾರ ತಿಳಿಸಿದ್ದಾರೆ. ’ಈ ಫೋಟೊಗಳು ದೆಕಲಿಯ ಶಹದಾರಾ ಜಿಲ್ಲೆಗೆ ಸಂಬಂಧಿಸಿವೆ. ಹಿರಿಯ ಪೊಲೀಸ್ ಅಧಿಕಾರಿಗಳ ಅನುಮತಿ ಇಲ್ಲದೇ ಒಬ್ಬ ಸ್ಥಳೀಯ ಅಧಿಕಾರಿ ಈ ಲೋಹದ ಲಾಠಿಗಳಿದೆ ಆರ್ಡರ್ ಮಾಡಿದ್ದರು. ಫೋಟೊದಲ್ಲಿರುವುದು ಅವೇ ಲಾಠಿಗಳು’ ಎಂದು ವಕ್ತಾರ ತಿಳಿಸಿದ್ದಾರೆ.

ಇದನ್ನೂ ಓದಿ: ದೆಹಲಿ ಪೊಲೀಸರ ಕೈಗೆ ಲೋಹದ ಲಾಠಿ?: ಇದು ಯಾವುದರ ಸೂಚಕ?

’ಈ ಫೋಟೊ ನೋಡಿದ ಕೂಡಲೇ ಆ ಆಯುಧಗಳನ್ನು ಹಿಂದಕ್ಕೆ ಪಡೆಯಲಾಗಿದೆ. ಇಲಾಖೆಗೆ ಇಂತಹ ಆಯುಧಗಳನ್ನು ಪೂರೈಸುವ ಯಾವ ಉದ್ದೇಶವು ಇಲ್ಲ’ ಎಂದು ಅವರು ಹೇಳಿದ್ದಾರೆ.

ನಿನ್ನೆ ಎನ್‌ಡಿಟಿವಿ ವರದಿ ಆಧರಿಸಿ ನಾನುಗೌರಿ.ಕಾಂ ಕೂಡ ಈ ಫೋಟೊ ಪ್ರಕಟಿಸಿ ಇಂತಹ ಆಯುಧಗಳ ಅಗತ್ಯವಿದೆಯೇ ಎಂದು ಪ್ರಶ್ನಿಸಿತ್ತು. ಪೊಲೀಸ್ ಮೂಲಗಳು ಹಂಚಿಕೊಂಡಿದ್ದ ಆ ಫೋಟೋದಲ್ಲಿ, ಪೊಲೀಸರ ಗುಂಪೊಂದು ರಾಷ್ಟ್ರ ರಾಜಧಾನಿಯಲ್ಲಿ ರಸ್ತೆಯ ಪಕ್ಕದಲ್ಲಿ ನಿಂತಿದ್ದು, ಅವರ ಮುಂಗೈ-ಮಣಿಕಟ್ಟಿನಿಂದ ಮೊಣಕೈಗೆ ಹೊದಿಸುವ ಲೋಹದ ಕೈಗವಸುಗಳಿದ್ದವು.

ದೊಡ್ಡ ರಕ್ಷಣಾತ್ಮಕ ಹೊದಿಕೆ ಅಥವಾ ’ಗಾರ್ಡ್’ ಹೊಂದಿರುವ ಲೋಹದ ಲಾಠಿಯನ್ನೂ ಅವರು ಹಿಡಿದಿದ್ದಾರೆ. ಎದುರಾಳಿಯ ಮೇಲೆ ಸ್ವಿಂಗ್ ಮಾಡುವಾಗ ಎರಡೂ ಮಣಿಕಟ್ಟುಗಳನ್ನು ರಕ್ಷಿಸುವಂತಹ ದೊಡ್ಡದಾದ ಹಿಡಿಕೆಯೂ ಇತ್ತು. ಈ ಆಯುಧಗಳ ವಿವರಗಳ ಬಗ್ಗೆ ದೆಹಲಿ ಪೊಲೀಸರಿಂದ ನಿನ್ನೆಯವರೆಗೆ ಯಾವುದೇ ಅಧಿಕೃತ ದೃಢೀಕರಣವಿರಲಿಲ್ಲ. ಇಂದು ದೆಹಲಿ ಪೊಲೀಸ್ ಇಲಾಖೆ ಇಂತಹ ಆಯುಧಗಳನ್ನು ಬಳಸುವ ಉದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ: ರಾಕೇಶ್ ಟಿಕಾಯತ್ (2013-21)ರನ್ನು ಅರ್ಥ ಮಾಡಿಕೊಳ್ಳುವುದು ಹೇಗೆ? 

ವಿಧಾನಸಭಾ ಅಧಿವೇಶನದ ಲೈವ್ ನೋಡಿ►►

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...