Homeಕರೋನಾ ತಲ್ಲಣಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕೇವಲ ರೋಗ ತರುವುದಕ್ಕೆ ಸೀಮಿತವಾಗಿಲ್ಲ. ಕಳೆದ ಬಾರಿಗಿಂತ ಈ ಬಾರಿ ಕೊರೊನಾ ಸಾವುಗಳು ಕೂಡ ಅಧಿಕವಾಗುತ್ತಿದೆ. ಹಲವು ರಾಜ್ಯಗಳು ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆಯನ್ನು ಮರೆ ಮಾಚುತ್ತಿವೆ. ಉತ್ತರ ಪ್ರದೇಶ ಮತ್ತು ಗುಜರಾತ್ ಇದಕ್ಕೆ ಜೀವಂತ ಸಾಕ್ಷಿಯಾಗಿವೆ. ಇನ್ನು ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸ್ಮಶಾನಗಳ ಸಮಸ್ಯೆ ಕೂಡ ಮತ್ತೊಂದು ತರಹದ್ದು.

ಗುಜರಾತ್‌ನ ಸೂರತ್‌ನಲ್ಲಿ ಕೊರೊನಾ ಪ್ರಕರಣಗಳು, ಕೊರೊನಾ ಸಾವುಗಳು ಹೆಚ್ಚಾಗಿ ಪರಿಸ್ಥಿತಿ ಮೀತಿ ಮೀರಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ವಿದ್ಯುತ್‌ ಚಿತಾಗಾರದಲ್ಲಿ ಲೋಹದ ಯಂತ್ರಗಳು ಕೂಡ ಕರಗಿ ಹೋಗುತ್ತಿವೆ.

ಸೂರತ್‌ನಲ್ಲಿ ಕೊರೊನಾ ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಶ್ಮಶಾನದಲ್ಲಿಯೂ ಸಹ ಸಾಲುಗಳಲ್ಲಿ ನಿಲ್ಲಬೇಕಾಗಿದೆ. ಅಲ್ಲಿಯೂ ವಿಪರೀತ ಜನಸಂದಣಿ ಇರುವ ಕಾರಣ ಕಾಯುವ ಟೋಕನ್‌ಗಳನ್ನು ನೀಡಲಾಗುತ್ತಿದೆ.

ಸೂತರ್‌ ನಗರದ ಮೂರು ಮುಖ್ಯ ಸ್ಮಶಾನಗಳಲ್ಲಿ ಪ್ರತಿದಿನ ಸರಾಸರಿ 300 ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದರರೂ ಕೂಡ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬರುವ ಸಂಬಂಧಿಕರು, ಮನೆಯವರು ಕನಿಷ್ಠ 6 ಗಂಟೆಯಿಂದ 10 ಗಂಟೆಗಳವರೆಗೆ ಕಾಯಬೇಕಾಗಿರುವ ಪರಿಸ್ಥಿತಿ ಇದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಈ 300 ಮೃತದೇಹಗಳಲ್ಲಿ, ಕೊರೊನಾ ಮಾರ್ಗಸೂಚಿಗಳ ಪ್ರಕಾರ ಅಂದಾಜು 100 ರಿಂದ 120 ಶವಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಶ್ವಿನಿ ಕುಮಾರ್ ಸ್ಮಶಾನದಲ್ಲಿ ದಿನಕ್ಕೆ 125 ಕ್ಕೂ ಹೆಚ್ಚು ಶವಗಳು, ಜಹಾಂಗೀರ್‌ಪುರದ ಕುರುಕ್ಷೇತ್ರ ಶ್ಮಶಾನದಲ್ಲಿ ಸುಮಾರು 100 ಶವಗಳು ಮತ್ತು ಉಮ್ರಾದಲ್ಲಿರುವ ರಾಮನಾಥ ಘೇಲಾ ಸ್ಮಶಾನದಲ್ಲಿ ಸರಾಸರಿ 90 ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೊತೆಗೆ ಸೂರತ್‌ನಿಂದ ಮೃತದೇಹಗಳನ್ನು ಶವಸಂಸ್ಕಾರಕ್ಕಾಗಿ ಹತ್ತಿರದ ಪಟ್ಟಣಗಳಾದ ಬಾರ್ಡೋಲಿ ಮತ್ತು ನವಸಾರಿಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮೂರು ಶ್ಮಶಾನಗಳ ಟ್ರಸ್ಟಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎಲ್ಲಾ ಮೂರು ಪ್ರಮುಖ ಸ್ಮಶಾನಗಳ ವ್ಯವಸ್ಥಾಪಕರ ಪ್ರಕಾರ, ’ವಿದ್ಯುತ್‌ ಚಿತಾಗಾರದಲ್ಲಿ ಅತಿಯಾದ ಬಳಕೆಯಿಂದಾಗಿ, ಅನಿಲ ಕುಲುಮೆಗಳ ಚೌಕಟ್ಟುಗಳು ಕರಗಿ ಹೋಗಿವೆ ಮತ್ತು ಬರ್ನರ್‌ಗಳು ಮುಚ್ಚಿಹೋಗಿವೆ. ಅಶ್ವಿನಿ ಕುಮಾರ್ ಚಿತಾಗಾರದಲ್ಲಿ ಎರಡು ಅನಿಲ ಕುಲುಮೆಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದವು. ತಕ್ಷಣ ಅವುಗಳನ್ನು ದುರಸ್ತಿ ಮಾಡಬೇಕಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ಈ ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ. ಇಲ್ಲಿ ಪ್ರತಿದಿನ ಸರಾಸರಿ 30 ರಿಂದ 40 ಮೃತದೇಹಗಳ ಅಂತ್ಯಕ್ರಿಯೆ ನಡೆಸಬಹುದಾಗಿದೆ. ಮತ್ತೊಂದು ತಾತ್ಕಾಲಿಕ ಸ್ಮಶಾನವನ್ನು ವರಾಚಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...