Homeಕರೋನಾ ತಲ್ಲಣಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕೇವಲ ರೋಗ ತರುವುದಕ್ಕೆ ಸೀಮಿತವಾಗಿಲ್ಲ. ಕಳೆದ ಬಾರಿಗಿಂತ ಈ ಬಾರಿ ಕೊರೊನಾ ಸಾವುಗಳು ಕೂಡ ಅಧಿಕವಾಗುತ್ತಿದೆ. ಹಲವು ರಾಜ್ಯಗಳು ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆಯನ್ನು ಮರೆ ಮಾಚುತ್ತಿವೆ. ಉತ್ತರ ಪ್ರದೇಶ ಮತ್ತು ಗುಜರಾತ್ ಇದಕ್ಕೆ ಜೀವಂತ ಸಾಕ್ಷಿಯಾಗಿವೆ. ಇನ್ನು ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸ್ಮಶಾನಗಳ ಸಮಸ್ಯೆ ಕೂಡ ಮತ್ತೊಂದು ತರಹದ್ದು.

ಗುಜರಾತ್‌ನ ಸೂರತ್‌ನಲ್ಲಿ ಕೊರೊನಾ ಪ್ರಕರಣಗಳು, ಕೊರೊನಾ ಸಾವುಗಳು ಹೆಚ್ಚಾಗಿ ಪರಿಸ್ಥಿತಿ ಮೀತಿ ಮೀರಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ವಿದ್ಯುತ್‌ ಚಿತಾಗಾರದಲ್ಲಿ ಲೋಹದ ಯಂತ್ರಗಳು ಕೂಡ ಕರಗಿ ಹೋಗುತ್ತಿವೆ.

ಸೂರತ್‌ನಲ್ಲಿ ಕೊರೊನಾ ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಶ್ಮಶಾನದಲ್ಲಿಯೂ ಸಹ ಸಾಲುಗಳಲ್ಲಿ ನಿಲ್ಲಬೇಕಾಗಿದೆ. ಅಲ್ಲಿಯೂ ವಿಪರೀತ ಜನಸಂದಣಿ ಇರುವ ಕಾರಣ ಕಾಯುವ ಟೋಕನ್‌ಗಳನ್ನು ನೀಡಲಾಗುತ್ತಿದೆ.

ಸೂತರ್‌ ನಗರದ ಮೂರು ಮುಖ್ಯ ಸ್ಮಶಾನಗಳಲ್ಲಿ ಪ್ರತಿದಿನ ಸರಾಸರಿ 300 ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದರರೂ ಕೂಡ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬರುವ ಸಂಬಂಧಿಕರು, ಮನೆಯವರು ಕನಿಷ್ಠ 6 ಗಂಟೆಯಿಂದ 10 ಗಂಟೆಗಳವರೆಗೆ ಕಾಯಬೇಕಾಗಿರುವ ಪರಿಸ್ಥಿತಿ ಇದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಈ 300 ಮೃತದೇಹಗಳಲ್ಲಿ, ಕೊರೊನಾ ಮಾರ್ಗಸೂಚಿಗಳ ಪ್ರಕಾರ ಅಂದಾಜು 100 ರಿಂದ 120 ಶವಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಶ್ವಿನಿ ಕುಮಾರ್ ಸ್ಮಶಾನದಲ್ಲಿ ದಿನಕ್ಕೆ 125 ಕ್ಕೂ ಹೆಚ್ಚು ಶವಗಳು, ಜಹಾಂಗೀರ್‌ಪುರದ ಕುರುಕ್ಷೇತ್ರ ಶ್ಮಶಾನದಲ್ಲಿ ಸುಮಾರು 100 ಶವಗಳು ಮತ್ತು ಉಮ್ರಾದಲ್ಲಿರುವ ರಾಮನಾಥ ಘೇಲಾ ಸ್ಮಶಾನದಲ್ಲಿ ಸರಾಸರಿ 90 ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೊತೆಗೆ ಸೂರತ್‌ನಿಂದ ಮೃತದೇಹಗಳನ್ನು ಶವಸಂಸ್ಕಾರಕ್ಕಾಗಿ ಹತ್ತಿರದ ಪಟ್ಟಣಗಳಾದ ಬಾರ್ಡೋಲಿ ಮತ್ತು ನವಸಾರಿಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮೂರು ಶ್ಮಶಾನಗಳ ಟ್ರಸ್ಟಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎಲ್ಲಾ ಮೂರು ಪ್ರಮುಖ ಸ್ಮಶಾನಗಳ ವ್ಯವಸ್ಥಾಪಕರ ಪ್ರಕಾರ, ’ವಿದ್ಯುತ್‌ ಚಿತಾಗಾರದಲ್ಲಿ ಅತಿಯಾದ ಬಳಕೆಯಿಂದಾಗಿ, ಅನಿಲ ಕುಲುಮೆಗಳ ಚೌಕಟ್ಟುಗಳು ಕರಗಿ ಹೋಗಿವೆ ಮತ್ತು ಬರ್ನರ್‌ಗಳು ಮುಚ್ಚಿಹೋಗಿವೆ. ಅಶ್ವಿನಿ ಕುಮಾರ್ ಚಿತಾಗಾರದಲ್ಲಿ ಎರಡು ಅನಿಲ ಕುಲುಮೆಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದವು. ತಕ್ಷಣ ಅವುಗಳನ್ನು ದುರಸ್ತಿ ಮಾಡಬೇಕಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ಈ ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ. ಇಲ್ಲಿ ಪ್ರತಿದಿನ ಸರಾಸರಿ 30 ರಿಂದ 40 ಮೃತದೇಹಗಳ ಅಂತ್ಯಕ್ರಿಯೆ ನಡೆಸಬಹುದಾಗಿದೆ. ಮತ್ತೊಂದು ತಾತ್ಕಾಲಿಕ ಸ್ಮಶಾನವನ್ನು ವರಾಚಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...