Homeಕರೋನಾ ತಲ್ಲಣಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸೂರತ್‌ನ‌ ವಿದ್ಯುತ್‌ ಚಿತಾಗಾರದಲ್ಲಿ ಕರಗಿ ಹೋಗುತ್ತಿವೆ ಲೋಹದ ಯಂತ್ರಗಳು!

ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗದ ಎರಡನೇ ಅಲೆ ಕೇವಲ ರೋಗ ತರುವುದಕ್ಕೆ ಸೀಮಿತವಾಗಿಲ್ಲ. ಕಳೆದ ಬಾರಿಗಿಂತ ಈ ಬಾರಿ ಕೊರೊನಾ ಸಾವುಗಳು ಕೂಡ ಅಧಿಕವಾಗುತ್ತಿದೆ. ಹಲವು ರಾಜ್ಯಗಳು ಕೊರೊನಾ ಪ್ರಕರಣಗಳು, ಸಾವುಗಳ ಸಂಖ್ಯೆಯನ್ನು ಮರೆ ಮಾಚುತ್ತಿವೆ. ಉತ್ತರ ಪ್ರದೇಶ ಮತ್ತು ಗುಜರಾತ್ ಇದಕ್ಕೆ ಜೀವಂತ ಸಾಕ್ಷಿಯಾಗಿವೆ. ಇನ್ನು ಸತತ ಅಂತ್ಯಕ್ರಿಯೆ ನಡೆಸುತ್ತಿರುವ ಸ್ಮಶಾನಗಳ ಸಮಸ್ಯೆ ಕೂಡ ಮತ್ತೊಂದು ತರಹದ್ದು.

ಗುಜರಾತ್‌ನ ಸೂರತ್‌ನಲ್ಲಿ ಕೊರೊನಾ ಪ್ರಕರಣಗಳು, ಕೊರೊನಾ ಸಾವುಗಳು ಹೆಚ್ಚಾಗಿ ಪರಿಸ್ಥಿತಿ ಮೀತಿ ಮೀರಿದೆ. ಕೊರೊನಾದಿಂದ ಮೃತಪಟ್ಟವರ ಅಂತ್ಯಕ್ರಿಯೆ ನಡೆಸುತ್ತಿರುವ ವಿದ್ಯುತ್‌ ಚಿತಾಗಾರದಲ್ಲಿ ಲೋಹದ ಯಂತ್ರಗಳು ಕೂಡ ಕರಗಿ ಹೋಗುತ್ತಿವೆ.

ಸೂರತ್‌ನಲ್ಲಿ ಕೊರೊನಾ ರೋಗಿಗಳಿಗೆ ಗೊತ್ತುಪಡಿಸಿದ ಆಸ್ಪತ್ರೆಗಳಲ್ಲಿ ಮಾತ್ರವಲ್ಲದೆ ಶ್ಮಶಾನದಲ್ಲಿಯೂ ಸಹ ಸಾಲುಗಳಲ್ಲಿ ನಿಲ್ಲಬೇಕಾಗಿದೆ. ಅಲ್ಲಿಯೂ ವಿಪರೀತ ಜನಸಂದಣಿ ಇರುವ ಕಾರಣ ಕಾಯುವ ಟೋಕನ್‌ಗಳನ್ನು ನೀಡಲಾಗುತ್ತಿದೆ.

ಸೂತರ್‌ ನಗರದ ಮೂರು ಮುಖ್ಯ ಸ್ಮಶಾನಗಳಲ್ಲಿ ಪ್ರತಿದಿನ ಸರಾಸರಿ 300 ಶವಗಳ ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಆದರರೂ ಕೂಡ ಸ್ಮಶಾನಕ್ಕೆ ಅಂತ್ಯಕ್ರಿಯೆಗಾಗಿ ಬರುವ ಸಂಬಂಧಿಕರು, ಮನೆಯವರು ಕನಿಷ್ಠ 6 ಗಂಟೆಯಿಂದ 10 ಗಂಟೆಗಳವರೆಗೆ ಕಾಯಬೇಕಾಗಿರುವ ಪರಿಸ್ಥಿತಿ ಇದೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಈ 300 ಮೃತದೇಹಗಳಲ್ಲಿ, ಕೊರೊನಾ ಮಾರ್ಗಸೂಚಿಗಳ ಪ್ರಕಾರ ಅಂದಾಜು 100 ರಿಂದ 120 ಶವಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಅಶ್ವಿನಿ ಕುಮಾರ್ ಸ್ಮಶಾನದಲ್ಲಿ ದಿನಕ್ಕೆ 125 ಕ್ಕೂ ಹೆಚ್ಚು ಶವಗಳು, ಜಹಾಂಗೀರ್‌ಪುರದ ಕುರುಕ್ಷೇತ್ರ ಶ್ಮಶಾನದಲ್ಲಿ ಸುಮಾರು 100 ಶವಗಳು ಮತ್ತು ಉಮ್ರಾದಲ್ಲಿರುವ ರಾಮನಾಥ ಘೇಲಾ ಸ್ಮಶಾನದಲ್ಲಿ ಸರಾಸರಿ 90 ಮೃತದೇಹಗಳನ್ನು ಅಂತ್ಯಕ್ರಿಯೆ ಮಾಡಲಾಗುತ್ತಿದೆ. ಜೊತೆಗೆ ಸೂರತ್‌ನಿಂದ ಮೃತದೇಹಗಳನ್ನು ಶವಸಂಸ್ಕಾರಕ್ಕಾಗಿ ಹತ್ತಿರದ ಪಟ್ಟಣಗಳಾದ ಬಾರ್ಡೋಲಿ ಮತ್ತು ನವಸಾರಿಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಮೂರು ಶ್ಮಶಾನಗಳ ಟ್ರಸ್ಟಿಯೊಬ್ಬರು ಮಾಹಿತಿ ನೀಡಿದ್ದಾರೆ.

ಎಲ್ಲಾ ಮೂರು ಪ್ರಮುಖ ಸ್ಮಶಾನಗಳ ವ್ಯವಸ್ಥಾಪಕರ ಪ್ರಕಾರ, ’ವಿದ್ಯುತ್‌ ಚಿತಾಗಾರದಲ್ಲಿ ಅತಿಯಾದ ಬಳಕೆಯಿಂದಾಗಿ, ಅನಿಲ ಕುಲುಮೆಗಳ ಚೌಕಟ್ಟುಗಳು ಕರಗಿ ಹೋಗಿವೆ ಮತ್ತು ಬರ್ನರ್‌ಗಳು ಮುಚ್ಚಿಹೋಗಿವೆ. ಅಶ್ವಿನಿ ಕುಮಾರ್ ಚಿತಾಗಾರದಲ್ಲಿ ಎರಡು ಅನಿಲ ಕುಲುಮೆಗಳು ಕೆಲಸ ಮಾಡುವುದನ್ನು ನಿಲ್ಲಿಸಿದ್ದವು. ತಕ್ಷಣ ಅವುಗಳನ್ನು ದುರಸ್ತಿ ಮಾಡಬೇಕಾಯಿತು’ ಎಂದಿದ್ದಾರೆ.

ಇದನ್ನೂ ಓದಿ: ದೆಹಲಿಯಲ್ಲಿ ವಾರಾಂತ್ಯ ಕರ್ಫ್ಯೂ ಹೇರಿಕೆ: ಶವಸಂಸ್ಕಾರವೂ ಸಾಧ್ಯವಾಗದ ಒತ್ತಡ

ಈ ಸ್ಮಶಾನಗಳ ಮೇಲಿನ ಹೊರೆಯನ್ನು ಇಳಿಸುವ ಸಲುವಾಗಿ, ಸೂರತ್ ಆಡಳಿತವು 15 ವರ್ಷಗಳ ಹಿಂದೆ ಮುಚ್ಚಿದ ಪಾಲ್-ಭಟ್ಟ ಪ್ರದೇಶದಲ್ಲಿನ ಸ್ಮಶಾನವನ್ನು ಮತ್ತೆ ತೆರೆದಿದೆ. ಇಲ್ಲಿ ಪ್ರತಿದಿನ ಸರಾಸರಿ 30 ರಿಂದ 40 ಮೃತದೇಹಗಳ ಅಂತ್ಯಕ್ರಿಯೆ ನಡೆಸಬಹುದಾಗಿದೆ. ಮತ್ತೊಂದು ತಾತ್ಕಾಲಿಕ ಸ್ಮಶಾನವನ್ನು ವರಾಚಾ ಪ್ರದೇಶದಲ್ಲಿ ಸ್ಥಾಪಿಸಲಾಗಿದೆ.

ಕೊರೊನಾ ಸೋಂಕು ದೃಢಪಟ್ಟು ಅಸ್ವಸ್ಥರಾಗಿ ಮರಣ ಹೊಂದಿರುವ ರೋಗಿಗಳನ್ನು ಕೊರೊನಾ ಸಾವುಗಳಿಗೆ ಸೇರಿಸದಂತೆ ಸರ್ಕಾರದಿಂದ ಆದೇಶಗಳಿವೆ ಎಂದು ಅಧಿಕೃತ ಮೂಲಗಳು ದೃಢಪಡಿಸಿವೆ. ಸೂರತ್ ಮೂಲದ ಡಾ. ಚಂದ್ರೇಶ್ ಜರ್ದೋಶ್, “ಇದು ಹೊಸ ವಿಷಯವೇನಲ್ಲ. ಲಾಕ್‌ಡೌನ್ ಯಶಸ್ವಿಯಾಗಿದೆ ಎಂದು ಸಾಬೀತುಪಡಿಸಲು ಕಳೆದ ವರ್ಷದಿಂದ ಕೊರೊನಾ ಸಾವುಗಳ ಸಂಖ್ಯೆಗಳನ್ನು ಕಡಿಮೆ ಮಾಡುವುದು ನಡೆಯುತ್ತಿದೆ” ಎಂದು ಹೇಳಿದ್ದಾರೆ.

ಸೂರತ್‌ನ ಚಿತಾಗಾರಗಳಲ್ಲಿ ಸ್ಥಳಾವಕಾಶವಿಲ್ಲದೇ ಜನ ಸಾಲುಗಟ್ಟಿ ನಿಲ್ಲುತ್ತಿದ್ದಾರೆ, ವಿದ್ಯುತ್ ಚಿತಾಗಾರದ ಲೋಹದ ಯಂತ್ರಗಳು ಸತತ ಅಂತ್ಯಕ್ರಿಯೆಯಿಂದ ಕರಗಿ ಹೋಗುತ್ತಿವೆ. ಆದರೆ, ಸರ್ಕಾರ ಮಾತ್ರ ಕೊರೊನಾ ಪ್ರಕರಣಗಳು ಮತ್ತು ಸಾವುಗಳ ಸಂಖ್ಯೆಯಲ್ಲಿ ವ್ಯತ್ಯಾಸ ತೋರಿಸುವ ಅಂಕಿ ಅಂಶಗಳನ್ನು ನೀಡುತ್ತಿದೆ.


ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...