Homeಚಳವಳಿಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ - ಮುಖೇಶ್​ ಖನ್ನಾ

- Advertisement -
- Advertisement -

ಹಿಂದಿ ಕಿರುತೆರೆಯ ಶಕ್ತಿಮಾನ್ ಮತ್ತು ಮಹಾಭಾರತ ಧಾರವಾಹಿಗಳಿಂದ ಹೆಸರುವಾಸಿಯಾದ ನಟ ಮುಖೇಶ್ ಖನ್ನಾ, ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.

“#MeToo ಚಳುವಳಿ ಪ್ರಾರಂಭವಾಗಲು ಕಾರಣ ಮಹಿಳೆಯರು ತಮ್ಮನ್ನು ಪುರುಷರಿಗೆ ಸಮಾನರು ಎಂದು ಭಾವಿಸಲು ಪ್ರಾರಂಭಿಸಿ ಕೆಲಸಕ್ಕೆ ಹೋಗಲು ಶುರು ಮಾಡಿದ್ದು ಎಂದಿದ್ದಾರೆ. ಮಹಿಳೆಯ ಕೆಲಸ ಮನೆ ನಿಭಾಯಿಸುವುದು. ಮಹಿಳೆಯೇ ಬೇರೆ, ಪುರುಷರೇ ಬೇರೆ ಎಂದಿದ್ದಾರೆ.

ಫಿಲ್ಮಿ ಚಾರ್ಚಾಗೆ ನೀಡಿದ ಇತ್ತೀಚಿನ ಸಂದರ್ಶನವೊಂದರ ಅವರ ಮಾತುಗಳಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, “ಮಹಿಳೆಯರು ಕೆಲಸ ಮಾಡಲು ಪ್ರಾರಂಭಿಸಿದಾಗ #MeToo ಸಮಸ್ಯೆ ಪ್ರಾರಂಭವಾಯಿತು” ಎಂದು ನಟ ಮುಖೇಶ್ ಖನ್ನಾ ಹೇಳುತ್ತಾರೆ.

ಇದನ್ನೂ ಓದಿ: ತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

“ಮನೆಯಲ್ಲಿ ತಾಯಿ ಇಲ್ಲದೆ ಮಕ್ಕಳು ಕಷ್ಟಪಡುತ್ತಾರೆ. ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ ಎಂದು ಮುಖೇಶ್​ ಖನ್ನಾ ಮಾತಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ.

ಟ್ವಿಟರ್ ಬಳಕೆದಾರರೊಬ್ಬರು, “ಶಕ್ತಿಮಾನ್‌ನ ದೊಡ್ಡ ದೌರ್ಬಲ್ಯ ಅವನ ಮನೋಧರ್ಮ ಎಂದು ತಿಳಿದಿರಲಿಲ್ಲ” ಎಂದಿದ್ದಾರೆ.

ಬಾಲ್ಯದಲ್ಲಿ ಆರಾಧಿಸುತ್ತಿದ್ದ ಸೂಪರ್​ಹೀರೋ ಮುಖೇಶ್ ಖನ್ನಾ ಈ ರೀತಿಯ ಆಲೋಚನೆಗಳನ್ನ ಹೊಂದಿದ್ದಾರಾ? ಅಂತ ಕಮೆಂಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನೆಟ್ಟಿಗರು ’ ನನ್ನ ಬಾಲ್ಯದ ಅನೇಕ ಅಮೂಲ್ಯ ಸಮಯಗಳು ಶಕ್ತಿಮಾನ್ ವೀಕ್ಷಣೆಯಲ್ಲಿ ವ್ಯರ್ಥವಾಯಿತು ಎಂಬ ಅಂಶವನ್ನು ಈಗ ನೋವಿನಿಂದ ಅರಿತುಕೊಂಡೆ” ಎಂದಿದ್ದಾರೆ.

ಇದನ್ನೂ ಓದಿ: #Metoo ಅಭಿಯಾನ: ದಿಟ್ಟದನಿಗಳಿಗೆ ಬೆಂಬಲ ಇನ್ನಷ್ಟು ಆಳ, ಅಗಲ ವಿಸ್ತಾರಗೊಳ್ಳಲಿ ಎಂಬ ಆಶಯ!

ಮುಖೇಶ್ ಖನ್ನಾ ವಿವಾದಾತ್ಮಕ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಿಳೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಮೂಲಕ ಮೀ ಟೂ ಅಭಿಯಾನದ ಬಗ್ಗೆ ಇಂತಹ ಹೇಳಿಕೆ ನೀಡಿರುವ ನಟನ ಹೇಳಿಕೆ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಇತ್ತೀಚೆಗೆ, ಮುಖೇಶ್ ಖನ್ನಾ ಕಪಿಲ್ ಶರ್ಮಾ ಶೋ ಬಗ್ಗೆ ಟೀಕೆ ಮಾಡಿ ವಿವಾದದ ಕೇಂದ್ರ ಬಿಂದುವಾಗಿದ್ದರು. ಶೋನಲ್ಲಿ ಭಾಗವಹಿಸಲು ನಿರಾಕರಿಸಿ, ಶೋ ಡಬಲ್ ಮೀನಿಂಗ್ ಪದಗಳಿಂದ ಕೂಡಿದೆ, ಪ್ರತಿ ಕ್ಷಣದಲ್ಲೂ ಅಶ್ಲೀಲತೆಯತ್ತ ತಿರುಗುತ್ತದೆ ಎಂದೆಲ್ಲಾ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...