Homeಚಳವಳಿಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಮಹಿಳೆಯರು ಕೆಲಸಕ್ಕೆ ಹೋಗಿದ್ದರಿಂದ METOO ಆರಂಭ: ಮುಖೇಶ್ ಖನ್ನಾ ಹೇಳಿಕೆಗೆ ತೀವ್ರ ವಿರೋಧ

ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ - ಮುಖೇಶ್​ ಖನ್ನಾ

- Advertisement -
- Advertisement -

ಹಿಂದಿ ಕಿರುತೆರೆಯ ಶಕ್ತಿಮಾನ್ ಮತ್ತು ಮಹಾಭಾರತ ಧಾರವಾಹಿಗಳಿಂದ ಹೆಸರುವಾಸಿಯಾದ ನಟ ಮುಖೇಶ್ ಖನ್ನಾ, ಮಹಿಳೆಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.

“#MeToo ಚಳುವಳಿ ಪ್ರಾರಂಭವಾಗಲು ಕಾರಣ ಮಹಿಳೆಯರು ತಮ್ಮನ್ನು ಪುರುಷರಿಗೆ ಸಮಾನರು ಎಂದು ಭಾವಿಸಲು ಪ್ರಾರಂಭಿಸಿ ಕೆಲಸಕ್ಕೆ ಹೋಗಲು ಶುರು ಮಾಡಿದ್ದು ಎಂದಿದ್ದಾರೆ. ಮಹಿಳೆಯ ಕೆಲಸ ಮನೆ ನಿಭಾಯಿಸುವುದು. ಮಹಿಳೆಯೇ ಬೇರೆ, ಪುರುಷರೇ ಬೇರೆ ಎಂದಿದ್ದಾರೆ.

ಫಿಲ್ಮಿ ಚಾರ್ಚಾಗೆ ನೀಡಿದ ಇತ್ತೀಚಿನ ಸಂದರ್ಶನವೊಂದರ ಅವರ ಮಾತುಗಳಿರುವ ವೀಡಿಯೊವನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದೆ. ವೀಡಿಯೊದಲ್ಲಿ, “ಮಹಿಳೆಯರು ಕೆಲಸ ಮಾಡಲು ಪ್ರಾರಂಭಿಸಿದಾಗ #MeToo ಸಮಸ್ಯೆ ಪ್ರಾರಂಭವಾಯಿತು” ಎಂದು ನಟ ಮುಖೇಶ್ ಖನ್ನಾ ಹೇಳುತ್ತಾರೆ.

ಇದನ್ನೂ ಓದಿ: ತನ್ನ ಮೇಲಿನ METOO ಆರೋಪ ಸುಳ್ಳು ಮತ್ತು ದುರುದ್ದೇಶಪೂರಿತ ಎಂದ ಅನುರಾಗ್ ಕಶ್ಯಪ್

“ಮನೆಯಲ್ಲಿ ತಾಯಿ ಇಲ್ಲದೆ ಮಕ್ಕಳು ಕಷ್ಟಪಡುತ್ತಾರೆ. ಪುರುಷ ಮಾಡಿದ್ದನ್ನೆಲ್ಲಾ ನಾನೂ ಮಾಡುತ್ತೇನೆ ಎಂದು ಮಹಿಳೆ ಹೇಳಲು ಶುರು ಮಾಡಿದ್ದರಿಂದಲೇ ಸಮಸ್ಯೆ ಶುರುವಾಗಿದೆ. ಆದರೆ ಹಾಗಾಗಲ್ಲ. ಮಹಿಳೆ ಮಹಿಳೆಯೇ, ಪುರುಷ ಪುರುಷನೇ ಎಂದು ಮುಖೇಶ್​ ಖನ್ನಾ ಮಾತಾಡಿದ್ದಾರೆ. ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆ ವ್ಯಕ್ತವಾಗಿದೆ.

ಟ್ವಿಟರ್ ಬಳಕೆದಾರರೊಬ್ಬರು, “ಶಕ್ತಿಮಾನ್‌ನ ದೊಡ್ಡ ದೌರ್ಬಲ್ಯ ಅವನ ಮನೋಧರ್ಮ ಎಂದು ತಿಳಿದಿರಲಿಲ್ಲ” ಎಂದಿದ್ದಾರೆ.

ಬಾಲ್ಯದಲ್ಲಿ ಆರಾಧಿಸುತ್ತಿದ್ದ ಸೂಪರ್​ಹೀರೋ ಮುಖೇಶ್ ಖನ್ನಾ ಈ ರೀತಿಯ ಆಲೋಚನೆಗಳನ್ನ ಹೊಂದಿದ್ದಾರಾ? ಅಂತ ಕಮೆಂಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನೊಬ್ಬ ನೆಟ್ಟಿಗರು ’ ನನ್ನ ಬಾಲ್ಯದ ಅನೇಕ ಅಮೂಲ್ಯ ಸಮಯಗಳು ಶಕ್ತಿಮಾನ್ ವೀಕ್ಷಣೆಯಲ್ಲಿ ವ್ಯರ್ಥವಾಯಿತು ಎಂಬ ಅಂಶವನ್ನು ಈಗ ನೋವಿನಿಂದ ಅರಿತುಕೊಂಡೆ” ಎಂದಿದ್ದಾರೆ.

ಇದನ್ನೂ ಓದಿ: #Metoo ಅಭಿಯಾನ: ದಿಟ್ಟದನಿಗಳಿಗೆ ಬೆಂಬಲ ಇನ್ನಷ್ಟು ಆಳ, ಅಗಲ ವಿಸ್ತಾರಗೊಳ್ಳಲಿ ಎಂಬ ಆಶಯ!

ಮುಖೇಶ್ ಖನ್ನಾ ವಿವಾದಾತ್ಮಕ ಹೇಳಿಕೆಗೆ ಹಲವು ಮಂದಿ ಆಕ್ರೋಶ ಹೊರ ಹಾಕುತ್ತಿದ್ದಾರೆ. ಮಹಿಳೆಯರು ತಮ್ಮ ಮೇಲಾದ ಲೈಂಗಿಕ ದೌರ್ಜನ್ಯದ ಬಗ್ಗೆ ಬಹಿರಂಗವಾಗಿ ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಳ್ಳುವ ಮೂಲಕ ಮೀ ಟೂ ಅಭಿಯಾನದ ಬಗ್ಗೆ ಇಂತಹ ಹೇಳಿಕೆ ನೀಡಿರುವ ನಟನ ಹೇಳಿಕೆ ವ್ಯಾಪಕ ಖಂಡನೆಗೆ ಗುರಿಯಾಗಿದೆ.

ಇತ್ತೀಚೆಗೆ, ಮುಖೇಶ್ ಖನ್ನಾ ಕಪಿಲ್ ಶರ್ಮಾ ಶೋ ಬಗ್ಗೆ ಟೀಕೆ ಮಾಡಿ ವಿವಾದದ ಕೇಂದ್ರ ಬಿಂದುವಾಗಿದ್ದರು. ಶೋನಲ್ಲಿ ಭಾಗವಹಿಸಲು ನಿರಾಕರಿಸಿ, ಶೋ ಡಬಲ್ ಮೀನಿಂಗ್ ಪದಗಳಿಂದ ಕೂಡಿದೆ, ಪ್ರತಿ ಕ್ಷಣದಲ್ಲೂ ಅಶ್ಲೀಲತೆಯತ್ತ ತಿರುಗುತ್ತದೆ ಎಂದೆಲ್ಲಾ ಹೇಳಿಕೆ ನೀಡಿದ್ದರು.


ಇದನ್ನೂ ಓದಿ: ಸಾಮಾಜಿಕ ಹೋರಾಟದಲ್ಲಿ ಮಹಿಳೆಯ ಪಾತ್ರ ಬಿಂಬಿಸುವ ಚಿತ್ರ ‘ಆಕ್ಟ್- 1978’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...