Homeಅಂಕಣಗಳು`#ಮೀಟೂ ಆಂದೋಲನವು ಭಾರತದಲ್ಲಿ ಮಹಿಳೆಯರ ಕುರಿತಾದ ನಮ್ಮ ದೃಷ್ಟಿಕೋನವನ್ನು ಬದಲಿಸಬಲ್ಲುದು’

`#ಮೀಟೂ ಆಂದೋಲನವು ಭಾರತದಲ್ಲಿ ಮಹಿಳೆಯರ ಕುರಿತಾದ ನಮ್ಮ ದೃಷ್ಟಿಕೋನವನ್ನು ಬದಲಿಸಬಲ್ಲುದು’

- Advertisement -
- Advertisement -

ಯಾವುದೇ ಒಂದು ಆರೋಪ ಕೇಳಿಬಂದಾಗ ಅದರ ಸತ್ಯಾಸತ್ಯತೆಯನ್ನು ಪರಾಮರ್ಶಿಸಿಯೇ ನೋಡಬೇಕು ಎಂಬುದು ಸಾರ್ವಜನಿಕ ಜೀವನದಿಂದ ನಾವು ಕಲಿತಿರುವ ಮೊದಲ ಪಾಠ. ಗಂಭೀರ ಆರೋಪಗಳು ನಮ್ಮ ಸಾರ್ವಜನಿಕ ಜೀವನದ, ಅದಕ್ಕೂ ಮಿಗಿಲಾಗಿ ರಾಜಕೀಯ ಜೀವನದ ಅವಿಭಾಜ್ಯ ಅಂಗದಂತಾಗಿ ಹೋಗಿವೆ. ನಮ್ಮ ಸುತ್ತಮುತ್ತಲ ಜನರೊಂದಿಗೆ ಒಡನಾಡುವಾಗಲೇ ಇಂಥ ಆರೋಪಗಳ ಸುಳಿದುಬಿಡುತ್ತವೆ.
ಆರೋಪಗಳಿಗೆ ಗುರಿಯಾದವನು ಗಂಡಸಾಗಿದ್ದರೆ ‘ಅವನು ಹಣ ಕಬಳಿಸಿದ್ದಾನೆ’ ಎಂದು ಹಾಗೂ ಹೆಣ್ಣಾಗಿದ್ದರೆ ‘ಅವಳು ನಡತೆಗೆಟ್ಟವಳು’ ಎಂದು ಹೇಳುವುದು ಸಾಮಾನ್ಯ. ಇದರ ಪ್ರತಿಕ್ರಿಯೆಯಾಗಿ ‘ಮೊದಲು ಸಾಕ್ಷಿ ತೋರಿಸಿ’ ಎನ್ನುವುದು ಕೂಡ ಸಹಜವಾಗಿಬಿಟ್ಟಿದೆ. ಆದುದರಿಂದ ಜಾಗತಿಕ ಮಟ್ಟದಲ್ಲಿ ಶೋಷಕರು ಬಹಿರಂಗಗೊಳ್ಳುತ್ತಿರುವಾಗೆಲ್ಲ ನಾನು ದ್ವಂದ್ವದಲ್ಲಿ ಬೀಳುತ್ತೇನೆ. ಇಲ್ಲಿನ ಎರಡು ನೈತಿಕ ಆದರ್ಶಗಳು ಒಂದಕ್ಕೊಂದು ಡಿಕ್ಕಿ ಹೊಡೆಯುತ್ತವೆ. ಮೊದಲನೆಯದಾಗಿ, ನಮ್ಮ ಸಾರ್ವಜನಿಕ ಜೀವನದಲ್ಲಿ ಹೆಜ್ಜೆಹೆಜ್ಜೆಗೂ ಲೈಂಗಿಕ ಶೋಷಣೆ ವ್ಯಾಪಿಸಿಕೊಂಡಿರುವುದನ್ನು ನೋಡಬೇಕಾದ ದಯನೀಯ ಸ್ಥಿತಿ ನಮ್ಮೆದುರಿಗಿದೆ. ಆದ್ದರಿಂದ ಸಾರ್ವಜನಿಕವಾಗಿ ಇಂಥವು ಬಹಿರಂಗಗೊಳ್ಳುವುದು ಅತ್ಯವಶ್ಯಕ. ಆರೋಪಿಗಳು ಸಿಕ್ಕುಬಿದ್ದಮೇಲೂ ಖುಲ್ಲಂ ಖುಲ್ಲ ತಿರುಗಾಡುತ್ತಿರುವುದು ಯಾವುದೇ ರಾಷ್ಟ್ರೀಯ ಕಳಂಕಕ್ಕೆ ಸಮನಾದ ವಿಚಾರವೇ ಸರಿ. ಹೀಗಾಗಿ, ಈ ಪಿಡುಗು ದೊಡ್ಡ ಪ್ರಮಾಣದಲ್ಲಿ ಬಹಿರಂಗಗೊಂಡು, ಸ್ವಲ್ಪ ನಾಟಕೀಯ ತಿರುವು ಪಡೆದುಕೊಂಡರೆ ಇಂಥಾ ಅನೇಕ ಪ್ರಕರಣಗಳು ಬೆಳಕಿಗೆ ಬರುವಂತಾಗುತ್ತದೆ; ಜನತೆಗೆ ಈ ಕುರಿತು ಪ್ರಜ್ಞೆ ಮೂಡುವಂತಾಗುತ್ತದೆ.

ಎರಡನೆಯದು, ನಿಷ್ಪಕ್ಷಪಾತ ತನಿಖೆಯ ಅವಶ್ಯಕತೆಯಿದೆ ಎನ್ನುವುದು. ಘಟನೆ ಜರುಗಿ ಎಷ್ಟೋ ವರ್ಷಗಳ ಬಳಿಕ ಯಾವುದೇ ವ್ಯಕ್ತಿಯ ವಿರುದ್ಧ ಗಂಭೀರ ಆರೋಪ ಮಾಡಿದರೆ ಅದಕ್ಕೆ ಗಟ್ಟಿ ಸಾಕ್ಷಿ ಇಲ್ಲದ ಸ್ಥಿತಿ ಉಂಟಾಗಿ ನಿಷ್ಪಕ್ಷಪಾತತೆ ಮತ್ತು ನ್ಯಾಯದ ಮೂಲ ಸಿದ್ಧಾಂತದ ಉಲ್ಲಂಘನೆಯಾಗುತ್ತದೆ. ಇದರ ದುರುಪಯೋಗ ಮಾಡುವ ಸಾಧ್ಯತೆಯಿರುತ್ತದೆ ಮತ್ತು ಇದನ್ನೇ ಮಾಡಲಾಗುತ್ತಿದೆ. ಆದ್ದರಿಂದ ಕಳೆದ ವರ್ಷ ಕೆಲ ಅಕಾಡೆಮಿಕ್ ಅಪರಾಧಿಗಳ ಹೆಸರುಗಳನ್ನು ಒಗ್ಗೂಡಿಸಿ ಸಾರ್ವತ್ರಿಕಗೊಳಿಸಿದಾಗ, ನಾನು ಇದರೊಂದಿಗೆ ನಿಲ್ಲುವುದು ಸಾಧ್ಯವಾಗಿರಲಿಲ್ಲ. ಮುಂದೆ, ಕೆಲವು ಸ್ತ್ರೀವಾದಿಗಳು ಇಂಥಾ ವಿಚಾರದಲ್ಲಿ ಗಂಭೀರವಾಗಿ ಉತ್ತರಿಸುವ ಬೇಡಿಕೆಯಿಟ್ಟಾಗಷ್ಟೇ ನನಗೆ ಈ ಹೊಯ್ದಾಟದಿಂದ ಹೊರ ಬರುವುದು ಸಾಧ್ಯವಾಯಿತು.
ಆದರೆ ಸಾರ್ವಜನಿಕವಾಗಿ ಬಹಿರಂಗಗೊಳಿಸುವ ಸದ್ಯದ ಅಲೆ ಈ ವಿಚಾರಕ್ಕಿಂತ ಕೊಂಚ ಬೇರೆಯಾಗಿದೆ. ಅದು ಉನ್ನತ ಪದವಿಗಳಲ್ಲಿ ಕುಳಿತವರು, ಮಾಧ್ಯಮಗಳ ಗೌರವಾನ್ವಿತ ವ್ಯಕ್ತಿಗಳೂ ತಮ್ಮ ಸ್ಥಾನದ ದುರುಪಯೋಗ ಮಾಡಿ ಮಹಿಳೆಯರನ್ನು ಪೀಡಿಸಿದ್ದಾರೆ, ಅವರನ್ನು ಕೀಳಾಗಿ ಕಾಣಲಾಗಿದೆ ಮತ್ತು ಅವರ ಘನತೆಯನ್ನು ಉಲ್ಲಂಘಿಸಲಾಗಿದೆ ಎನ್ನುವುದು.
ಭಾರತದಲ್ಲಿ #ಮೀಟೂ ಅನಾಮಧೇಯ ಸೆರಗಿನಲ್ಲಿ ಅಡಗಿಕೊಂಡಿಲ್ಲ. ಮಹಿಳೆಯರು ಬಹಿರಂಗವಾಗಿ ಹೊರಬರುತ್ತಿದ್ದಾರೆ, ತಮ್ಮ ಪರಿಚಯವನ್ನು ಸಾರ್ವಜನಿಕಗೊಳಿಸುತ್ತಿದ್ದಾರೆ, ಅಪರಾಧಿಗಳ ಹೆಸರುಗಳನ್ನು ಹೇಳುತ್ತಿದ್ದಾರೆ ಮತ್ತು ಅವರಾಡುತ್ತಿರುವ ಮಾತುಗಳಿಗಾಗಿ ತಲೆದಂಡ ತೆರಲು ಅವರು ತಯಾರಾಗಿದ್ದಾರೆ. ಅವರ ಸಾಹಸಗಳನ್ನು ನೋಡುವಾಗ, ಅವರು ಈ ವಿಚಾರವಾಗಿ ದೃಢನಿಲುವು ತಳೆದಿದ್ದಾರೆ, ಅವರನ್ನು ಗಂಭೀರವಾಗಿ ಪರಿಗಣಿಸಬೇಕಿದೆ. ಅವರ ಕೈಯಲ್ಲಿ ಕೇವಲ ಅವಸರದ ಆರೋಪಗಳಿಲ್ಲ ಎನ್ನುವ ಅಭಿಪ್ರಾಯ ತಳೆಯಬೇಕಾಗುತ್ತದೆ.
ಕಳೆದ ವಾರ ಈ ಕುರಿತು ನಾವು ಓದಿದ ಬಹುತೇಕ ಸುದ್ದಿಗಳು ಸವಿಸ್ತಾರವಾಗಿದ್ದು ಬಹು ಗಂಭೀರ ಸ್ವರೂಪದವುಗಳಾಗಿವೆ, ಮಹಿಳೆಯರು ಹೇಳುತ್ತಿರುವಂತಹ ಸನ್ನಿವೇಶಜನ್ಯ ಸಾಕ್ಷ್ಯಗಳು ಈ ಆರೋಪಗಳನ್ನು ಪುಷ್ಟೀಕರಿಸುತ್ತಿವೆ. ಈ ಸಾಕ್ಷ್ಯಾಧಾರಗಳನ್ನು ನಿಖರ ಸಾಕ್ಷಿಯಾಗಿ ನ್ಯಾಯಾಲಯ ಒಪ್ಪಲಿಕ್ಕಿಲ್ಲ. ಆದರೆ ಇವುಗಳನ್ನು ನಂಬಿಕೆಗೆ ಅರ್ಹವಲ್ಲ ಹಾಗೂ ಪ್ರಾಮಾಣಿಕವಲ್ಲ ಎನ್ನಲು ಸಂವೇದನಾಶೂನ್ಯರಾಗಬೇಕಾಗುತ್ತದೆ. ಈ ಸತ್ಯದ ಜೊತೆಗೆ ಮಹಿಳೆಯರು ಬಲಾಢ್ಯ ವ್ಯಕ್ತಿಗಳ ವಿರುದ್ಧ ನಿಂತಿದ್ದಾರೆ, ಅದು ನಿಮ್ಮ ಮನಸ್ಸನ್ನು ತಟ್ಟಲಾರದು ಎಂದಾದರೆ ನೀವು ದೂಷಣೆಗೆ ಅರ್ಹರೇ ಸರಿ.
ಇಂಥ ನೋವಿನ ಕಥೆಗಳನ್ನು ಸಾರ್ವಜನಿಕ ವೇದಿಕೆಗಳಲ್ಲಿಡುವುದು, ಪ್ರತಿಷ್ಠಿತರ ಹೆಸರುಗಳನ್ನೆತ್ತಿ ಛೀಮಾರಿ ಹಾಕುವುದರಿಂದ ನ್ಯಾಯ ಪಡೆಯಬಹುದೆ? ನನ್ನ ಉತ್ತರ ಹೌದು. ಇವರಲ್ಲಿ ಹೆಚ್ಚಿನ ಮಹಿಳೆಯರು ಜ್ಯೂನಿಯರ್ ಉದ್ಯೋಗಿಗಳಾಗಿದ್ದರು ಮತ್ತು ಅಲ್ಲಿ ತಮ್ಮ ಪುರುಷ ಸಹೋದ್ಯೋಗಿಗಳಿಂದ ಕಿರುಕುಳವನ್ನು ಸಹಿಸಿದ್ದಾರೆಂದರೆ ಅವರಿಗೆ ದುಪ್ಪಟ್ಟು ನಷ್ಟ ಸಹಿಸಬೇಕಾದ ಬಿಕ್ಕಟ್ಟಿನ ಸನ್ನಿವೇಶವಿತ್ತು ಎಂದರ್ಥ.
ಕೆಸರೆರಚುವ ಪರವಾನಗಿ ಸಿಕ್ಕಂತಾಗುತ್ತದೆ ಎಂಬುದು ಇಲ್ಲಿನ ಅಪಾಯ. ಪ್ರತಿಯೊಂದು ಪ್ರೇಮ ಪ್ರಸಂಗ, ವಿಕೃತವಾದ ಪ್ರತಿಯೊಂದು ಸಂಬಂಧ, ಎಲ್ಲಾ ದುಡುಕುತನ, ಮೂರ್ಖತನ, ಕೊನೆಗೆ ಭ್ರಾಂತಿಯೂ ಕೂಡ ಪ್ರಹಾರದ ರೀತಿಯಲ್ಲಿ ಬಳಸುವ ಸಾಧ್ಯತೆಯಿದೆ. ಹೌದು, ಈ ಸಾಮೂಹಿಕ ಮತ್ತು ಸಾರ್ವಜನಿಕ ‘ಸತ್ಯೋದ್ಘಾಟನೆ’ಗೆ ತನ್ನದೇ ಮಾನದಂಡ ಹಾಗೂ ಪ್ರೋಟೋಕಾಲ್ ವಿಕಸಿತಗೊಳಿಸಬೇಕಾಗುತ್ತದೆ, ಯಾರೂ ಇದರ ದುರುಪಯೋಗ ಮಾಡದಂತೆ. ಆದರೆ ಭಾರತದಲ್ಲಿ #ಮೀಟೂ ಸಂದರ್ಭವು ತೆರೆದಿರುವ ಅಪರೂಪದ ಬೆಳಕಿಂಡಿಯನ್ನು ಮುಚ್ಚಲು ಯಾರಿಗೂ ಅಧಿಕಾರವಿಲ್ಲ.
ಇದು ನಮ್ಮ ಜನಪ್ರಿಯ ಸಂಸ್ಕೃತಿಯನ್ನು ಬದಲಿಸುವ ಆಂದೋಲನವಾಗಬಹುದೇ ಎಂಬುದು ಇದು ಇನ್ನಷ್ಟು ಪ್ರೋತ್ಸಾಹ, ಪ್ರಚಾರ ಪಡೆದುಕೊಳ್ಳುತ್ತದೋ ಅಥವಾ ಇದನ್ನು ಹತ್ತಿಕ್ಕಲಾಗುತ್ತದೋ ಎಂಬುದರ ಮೇಲೆ ನಿಂತಿದೆ.
ಆದರೆ ಇಂದು ಮಹಿಳೆಯರು ಸರ್ವವ್ಯಾಪಿಯಾಗಿರುವ ಅಶ್ಲೀಲ ಪ್ರಪಂಚದಲ್ಲಿ ಪ್ರತಿನಿತ್ಯ ಭೀಷಣ ರೂಪದ ಲೈಂಗಿಕ ದೌರ್ಜನ್ಯಗಳಿಗೆ ಈಡಾಗುತ್ತಲೇ ಇದ್ದಾರೆ. ಅವರ ಪರಿಸ್ಥಿತಿಯನ್ನು ಕೇಳುವವರೇ ಇಲ್ಲ. ಈ ಆಂದೋಲನವು ಮಹಾನಗರಗಳಿಂದ ಕುಗ್ರಾಮಗಳವರೆಗೆ ವಿಸ್ತರಿಸಬೇಕು, ಮಾಧ್ಯಮಗಳಿಂದ ಹಿಡಿದು ಬ್ಯುಸಿನೆಸ್ ಕ್ಷೇತ್ರ ಮತ್ತು ರಾಜಕೀಯ ಕ್ಷೇತ್ರದವರೆಗೆ, ಸಂಘಟಿತ ಕ್ಷೇತ್ರದಿಂದ ಅಸಂಘಟಿತ ಕ್ಷೇತ್ರಗಳತನಕ, ಹಾಗೆಯೇ ಸಾರ್ವಜನಿಕ ಜೀವನದಿಂದ ಬಿಡಿಬಿಡಿ ಕೌಟುಂಬಿಕ ಲೈಂಗಿಕ ದೌರ್ಜನ್ಯಗಳ ತನಕ ವ್ಯಾಪಿಸಬೇಕಿದೆ. ಹೀಗಾದಲ್ಲಿ ಭಾರತದಲ್ಲಿ #ಮೀಟೂ ಚಳವಳಿ ನಮ್ಮ ಲೈಂಗಿಕ ಸಂವೇದನಾಶೀಲತೆ ಮತ್ತು ಸಾಮುದಾಯಿಕ ಕಟ್ಟುಪಾಡುಗಳನ್ನು ಪುನರ್ನಿರ್ಮಿಸಬಲ್ಲದು.
ನಾನು ಭಾರತದಲ್ಲಿ #ಮೀಟೂ ವಿಚಾರದಲ್ಲಿ ಓದುತ್ತಿರುವಾಗಲೇ ಎರಡು ಸುದ್ದಿಗಳು ಗಮನ ಸೆಳೆದವು. ಬಿಹಾರದ ಕೆಲ ಶಾಲಾ ವಿದ್ಯಾರ್ಥಿನಿಯರು ಹಲ್ಲೆಗೊಳಗಾಗಿದ್ದರೂ ಲೈಂಗಿಕ ದೌರ್ಜನ್ಯವನ್ನು ವಿರೋಧಿಸುವ ಸಾಹಸ ಮಾಡಿದ್ದಾರೆ. ಟ್ಯಾಗೋರರ ಕನಸಿನ ವಿಶ್ವವಿದ್ಯಾಲಯವಾದ ವಿಶ್ವಭಾರತಿಯಲ್ಲಿ ಎಂಥಾ ಅಕಾಡೆಮಿಕ್ ವ್ಯಕ್ತಿಯನ್ನು ನಮ್ಮ ಭಾರತದ ರಾಷ್ಟ್ರಪತಿಯವರು ಉಪಕುಲಪತಿಯನ್ನಾಗಿ ನಿಯುಕ್ತಗೊಳಿಸಿದ್ದಾರೆಂದರೆ ಆ ವ್ಯಕ್ತಿ ದೆಹಲಿ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಿಕ್ಕುಬಿದ್ದು ಶಿಕ್ಷೆಗೊಳಗಾಗಿದ್ದಾರೆ.
ಈ ಎರಡು ಉದಾಹರಣೆಗಳು ಯಾವ ಕಪ್ಪು ಕಲೆಗಳ ಕಡೆಗೆ ಬೊಟ್ಟುಮಾಡುತ್ತವೆಯೋ ಅತ್ತ #ಮೀಟೂ ಚಳವಳಿಯ ಗಮನ ಹರಿಯಲೇಬೇಕಾಗಿದೆ. ಈಗ ನಾವು ಸಾರ್ವಜನಿಕವಾಗಿ ದಿಟ್ಟ ದನಿಯೆತ್ತಿರುವ ಆ ಮಹಿಳೆಯರಿಗೂ ಹಾಗೂ ದನಿ ಎತ್ತವಂತೆ ಮಾಡಿದ #ಮೀಟೂ ಅಭಿಯಾನದಲ್ಲಿ ಭಾಗಿಯಾದ ಎಲ್ಲರಿಗೂ ಸಲಾಮು ಹೇಳೋಣ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...