Homeಮುಖಪುಟಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

ಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಸ್ರೇಲಿನಿಂದ ಪಶ್ಚಿಮ ದಂಡೆಯಲ್ಲಿ 40,000 ಫೆಲೆಸ್ತೀನಿಯನ್ನರ ಬಲವಂತದ ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...