Homeಮುಖಪುಟಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

ಮೆಟ್ರೋ ದರ ಏರಿಕೆ: ವಾಸ್ತವಾಂಶ ತೆರೆದಿಟ್ಟ ಸಿದ್ದರಾಮಯ್ಯ

- Advertisement -
- Advertisement -

ಬೆಂಗಳೂರು: ಬೆಂಗಳೂರು ಮೆಟ್ರೊ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಪತ್ರಿಕಾ ಪ್ರಕಟಣೆಯೊಂದನ್ನು ಹೊರಡಿಸಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ, ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ ಎಂದಿದ್ದಾರೆ.

ಆದರೆ ವಿರೋಧ ಪಕ್ಷದ ಸ‍್ಥಾನದಲ್ಲಿ ಜನ ಕೂರಿಸಿರುವ ರಾಜ್ಯದ ಬಿಜೆಪಿ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯ. ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ದ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯನಿರ್ವಹಿಸಬೇಕಾಗುತ್ತದೆ ಎಂದಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಮುಖ್ಯಮಂತ್ರಿಯವರು ಪ್ರಶ್ನಿಸಿದ್ದಾರೆ.

ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಸರ್ಕಾರ ಮದ್ರಾಸ್ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಆರ್ ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು, ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ತನ್ನ ಪತ್ರದಲ್ಲಿ ತಿಳಿಸಿತ್ತು.

ಮೂರು ತಿಂಗಳ ಅವಧಿಯಲ್ಲಿ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚೆನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು.

2017ರ ಜೂನ್ ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್ ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ.

ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಈಗ ಪ್ರಯಾಣ ದರವನ್ನು ಕೇಂದ್ರ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ. ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇಸ್ರೇಲಿನಿಂದ ಪಶ್ಚಿಮ ದಂಡೆಯಲ್ಲಿ 40,000 ಫೆಲೆಸ್ತೀನಿಯನ್ನರ ಬಲವಂತದ ಸ್ಥಳಾಂತರ: ವಿಶ್ವಸಂಸ್ಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...