Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...