Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...