Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...