Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...