Homeಕರ್ನಾಟಕಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರ ಗಮನಕ್ಕೆ: ಮೆಟ್ರೋ ಪುನರಾರಂಭದ ನಿಯಮಾವಳಿಗಳನ್ನು ತಿಳಿಯಿರಿ

ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ.

- Advertisement -
- Advertisement -

ಕೊರೊನಾ ಹಿನ್ನೆಲೆಯಲ್ಲಿ ನಿಂತು ಹೋಗಿದ್ದ ಮೆಟ್ರೋ ಸಂಚಾರ ಸೋಮವಾರದಿಂದ (ಸೆ. 7) ಮತ್ತೆ ಸಂಚಾರ ಆರಂಭಿಸಲಿದ್ದು, ಬಿಎಂಆರ್‌ಸಿಎಲ್ ತನ್ನ ಕಾರ್ಯಾಚರಣೆಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಸೆ.7ರಿಂದ ನೇರಳೆ ಮಾರ್ಗದಲ್ಲಿ ಮತ್ತು ಸೆ.9ರಿಂದ ಹಸಿರು ಮಾರ್ಗದಲ್ಲಿ ಮೆಟ್ರೋ ಸಂಚರಿಸಲಿದೆ.

ಸೆಪ್ಟೆಂಬರ್ 11ರಿಂದ ಎಲ್ಲಾ ರೈಲುಗಳು ಬೆಳಗ್ಗೆ 7 ರಿಂದ ರಾತ್ರಿ 9 ರವರೆಗೆ ಎರಡು ಮಾರ್ಗದಲ್ಲಿ ಸಂಚರಿಸಲಿದೆ. ಜನದಟ್ಟಣೆಯ ಅವಧಿಯಲ್ಲಿ ಪ್ರತಿ 5 ನಿಮಿಷಕ್ಕೊಮ್ಮೆ ಹಾಗೂ ಬೇರೆ ಸಮಯದಲ್ಲಿ 10 ನಿಮಿಷಗಳ ಅಂತರದಲ್ಲಿ ಮೆಟ್ರೋ ಸಂಚರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ನಿರ್ಧರಿಸಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಪ್ರಯಾಣಿಕರು ಹತ್ತಲು ಮತ್ತು ಇಳಿಯಲು 60 ಸೆಕೆಂಡುಗಳ ಕಾಲ ರೈಲು ನಿಲ್ಲಿಸಲಾಗುತ್ತದೆ. ಮೆಜೆಸ್ಟಿಕ್ ನಿಲ್ದಾಣದಲ್ಲಿ ಮಾತ್ರ 75 ಸೆಕೆಂಡುಗಳು ರೈಲು ನಿಲುಗಡೆ ಮಾಡುವುದಾಗಿ ನಿಗಮ ತಿಳಿಸಿದೆ.

ಇದನ್ನೂ ಓದಿ: ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಕಂಟೈನ್‌ ‌ಮೆಂಟ್‌ ವಲಯಗಳಲ್ಲಿ ಬರುವ ಮೆಟ್ರೋ ನಿಲ್ದಾಣಗಳಲ್ಲಿ ಮೆಟ್ರೋ ನಿಲುಗಡೆಯನ್ನು ನಿರ್ಬಂಧಿಸಲಾಗಿದ್ದು, ಆ ನಿಲ್ದಾಣಗಳಲ್ಲಿ ಪ್ರವೇಶ ಮತ್ತು ನಿರ್ಗಮನ ಬಾಗಿಲುಗಳನ್ನು ತೆರೆಯುವುದಿಲ್ಲ. ಆಗ ಪ್ರಯಾಣಿಕರು ತಮಗೆ ಹತ್ತಿರದ ನಿಲ್ದಾಣವನ್ನು ಅವಲಂಬಿಸಲಬೇಕಾಗುತ್ತದೆ.

ಪ್ರತಿ ರೈಲಿನಲ್ಲಿ 400 ಪ್ರಯಾಣೀಕರಿಗೆ ಮಾತ್ರ ಅವಕಾಶವಿದೆ. ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚಿದ್ದರೆ, ಜನದಟ್ಟಣೆ ನಿರ್ವಹಿಸಲು ಸಾಧ್ಯವಾಗದಿದ್ದರೇ ಅಂತಹ ನಿಲ್ದಾಣಗಳನ್ನು ರೈಲು ನಿಲ್ಲದೆ ಮುಂದಿನ ನಿಲ್ದಾಣದಲ್ಲಿ ರೈಲು ನಿಲುಗಡೆ ನೀಡುತ್ತದೆ. ಈ ಬಗ್ಗೆ ಪ್ರಯಾಣಿಕರಿಗೆ ಮಾಹಿತಿ ನೀಡಲಾಗುತ್ತದೆ.

ದಟ್ಟಣೆ ತಪ್ಪಿಸಲು ಟೋಕನ್‌ ಮಾರಾಟವನ್ನು ನಿಷೇಧಿಸಲಾಗಿದ್ದು, ಮೆಟ್ರೋದಲ್ಲಿ ಓಡಾಟ ನಡೆಸುವವರು  ಸ್ಮಾರ್ಟ್ ಕಾರ್ಡ್ ಬಳಸಿ ಪ್ರಯಾಣ ಮಾಡಬೇಕು. ಕಾರ್ಡ್ ರಿಚಾರ್ಜ್‌ ಮಾಡಿಸಿದ ಏಳು ದಿನದೊಳಗೆ ಆ ಕಾರ್ಡ್‌ ಮೂಲಕ ಪ್ರಯಾಣ ಮಾಡಬೇಕು. ಈ ಮೊದಲು ರಿಚಾರ್ಜ್ ಮಾಡಿದ ಸ್ಮಾರ್ಟ್ ಕಾರ್ಡ್ ಬಳಸಲು 60 ದಿನಗಳ ಸಮಯವಿತ್ತು. ಈಗ ಕೇವಲ 7 ದಿನಕ್ಕೆ ಇಳಿಸಲಾಗಿದೆ. ನಿಲ್ದಾಣಗಳಲ್ಲಿ ಒದಗಿಸಲಾದ ಯುಪಿಐ, ಕ್ಯೂಆರ್‌ಕೋಡ್ ಅಥವಾ ಪೇಟಿಎಂ ಮೂಲಕ ರಿಚಾರ್ಜ್ ಮಾಡಿಕೊಲ್ಳಬಹುದು. ಸೆ.7ರಿಂದ ಮೊಬೈಲ್‌ ಆ್ಯಪ್‌ ಬಳಸುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಸ್ಮಾರ್ಟ್ ಕಾರ್ಡ್‌‌ಗಳನ್ನು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಗೇಟ್ ರೀಡರ್‌ನಿಂದ 3 ಸೆಂ.ಮೀ ದೂರದಿಂದಲೇ ಪ್ರಸ್ತುತಪಡಿಸಬೇಕು.

ಮೆಟ್ರೋ ಪ್ರಯಾಣಿಕರಿಗೆ ಸ್ಯಾನಿಟೈಸರ್, ಮಾಸ್ಕ್ ಕಡ್ಡಾಯವಾಗಿದೆ.  ಪ್ರವೇಶ ದ್ವಾರ, ನಿರ್ಗಮನ ದ್ವಾರ ಹಾಗೂ ಪ್ಲಾಟ್ ಫಾರ್ಮ್‌ನಲ್ಲಿ ಹಳದಿ ಗುರುತಿನ ಜಾಗದಲ್ಲಿ ನಿಲ್ಲಬೇಕು ಜೊತೆಗೆ ಎಲ್ಲಾ ಪ್ರಯಾಣಿಕರು ಕಡ್ಡಾಯವಾಗಿ 2 ಮೀಟರ್ ಅಂತರ ಕಾಯ್ದುಕೊಳ್ಳಬೇಕು. ಪ್ರಯಾಣಿಕರಿಗೆ ಕೇವಲ ಒಂದು ಬ್ಯಾಗ್ ತರಲು ಮಾತ್ರ ಅನುಮತಿ ನೀಡಲಾಗಿದೆ. ರೈಲಿನಲ್ಲಿ ಗುರುತಿಸಿರುವ ಆಸನಗಳಲ್ಲಿ ಮಾತ್ರ ಕೂರಲು ಅವಕಾಶವಿದೆ. ಸೀನುವಿಕೆ, ಕೆಮ್ಮು ಮತ್ತು ಉಸಿರಾಟದ ಲಕ್ಷಣಗಳು, 37 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಿನ ತಾಪಮಾನ ಇರುವವರ ಪ್ರವೇಶ ನಿರ್ಬಂಧಿಸಲಾಗುತ್ತದೆ.

ಬಿಎಂಆರ್‌ಸಿಎಲ್ ತನ್ನ ಪ್ರಯಾಣಿಕರ ಆರೋಗ್ಯ ದೃಷ್ಠಿಯಿಂದ ಹಲವು ಕ್ರಮಗಳನ್ನು ತೆಗೆದುಕೊಂಡಿದ್ದು, ಸ್ವಚ್ಛತೆಗೆ ಆದ್ಯತೆ ನೀಡಿದೆ. ಈಗಾಗಲೇ ಮೆಟ್ರೋ ನಿಲ್ದಾಣಗಳಲ್ಲಿ ಬಾಕ್ಸ್‌ಗಳನ್ನು ಹಾಕಲಾಗಿದ್ದು, ರೈಲುಗಳಲ್ಲಿ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿದೆ.


ಇದನ್ನೂ ಓದಿ: ಅನ್ಲಾಕ್ – 04: ಸೆಪ್ಟೆಂಬರ್ 07 ರಿಂದ ಮೆಟ್ರೋ ಸಂಚಾರ ಆರಂಭಕ್ಕೆ ಹಸಿರು ನಿಶಾನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...