Homeಮುಖಪುಟಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

- Advertisement -
- Advertisement -

ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಎಡಪಂಥೀಯರು ನಿರ್ದಯವಾಗಿ ಕೊಲ್ಲುತ್ತಿದ್ದಾರೆ ಎಂಬ ಅರೆಸತ್ಯದ ವಿಷಯವನ್ನು ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಬಳಸುತ್ತ ಬಂದಿತ್ತು. ಊಹೂಂ ಅದಕ್ಕೇನೂ ರಾಜಕೀಯ ಲಾಭವಾಗಲಿಲ್ಲ. ನಂತರ, ಶಬರಿಮಲೆ ಅಯ್ಯಪ್ಪನ ಪಾದಕ್ಕೆ ಬಿದ್ದಿದ್ದ ಆಯ್ತು. ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರಿಗೆ ನಿಷೇಧ ವಿಷಯದ ವಿರುದ್ದ ‘ಹೋರಾಟ’ ಮಾಡಿತ್ತು. ಆಗ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಕಾಡೆ ಮಲಗಿತ್ತು.

ಕಳೆದ ಸಲದಂತೆ ಈ ಸಲವೂ ಅಲ್ಲಿಗೆ ಯೋಗಿ ಆದಿತ್ಯನಾಥರನ್ನು ಪ್ರಚಾರಕ್ಕೆ ಕಳಿಸಿ, ಅಭಿವೃದ್ಧಿಯ ಪಾಠಗಳನ್ನು ಬೋಧಿಸುವ ಮೂಲಕ ಅಪಹಾಸ್ಯಕ್ಕೆ ಬಿಜೆಪಿ ಈಡಾಗಿದೆ.
ಈಗ ಅದು ಮೆಟ್ರೋಮ್ಯಾನ್ ಶ್ರೀಧರನ್ ಎಂಬ 89 ವರ್ಷದ ಮಾಜಿ ಅಧಿಕಾರಿಯ ಹಳಿಯ ಮೇಲೆ ರೈಲು ಓಡಿಸಲು ಹತಾಶ ಪ್ರಯತ್ನ ಮಾಡುತ್ತಿದೆ.

ಮೇಲಿನದು, ಕೇರಳ ಚುನಾವಣೆಗೆ ಸಂಬಂಧಿಸಿದಂತೆ, ಬಿಜೆಪಿಯ ಹೀನಾಯ ಸ್ಥಿತಿ ಅನಿಸಬಹುದು, ಆದರೆ ಅದರ ಪಾಲಿಗೆ ಇದೇ ಅತ್ಯುತ್ತಮ ಗಳಿಗೆ ಅನಿಸಿಬಿಟ್ಟಿದೆ!

ಈಗ ಕೇರಳ ವಿಧಾನಸಭೆಯಲ್ಲಿ ಬಿಜೆಪಿಯ ಒಬ್ಬರು ಶಾಸಕರಿದ್ದಾರೆ. ಕೇರಳ ವಿಧಾನಸಭೆ ಸರ್ವಾನುಮತದಿಮದ ಕೇಂದ್ರದ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿತ್ತು. ಸರ್ವಾನುಮತ ಅಂದರೆ ಬಿಜೆಪಿಯ ಶಾಸಕನೂ ಬೆಂಬಲಿಸಿದ್ದರು!

2021: ಮೆಟ್ರೋಮ್ಯಾನ್ ಮತ್ತು ಬಿಜೆಪಿ ‘ರೈಲು’!

ಮೆಟ್ರೋ ರೈಲು ವ್ಯವಸ್ಥೆ, ಕೊಂಕಣ ರೈಲು ವ್ಯವಸ್ಥೆಗಳ ಸಾಧನೆಗಳಿಗಾಗಿ ಶ್ರೀಧರನ್ ಪ್ರಸಿದ್ಧರು. ಆಡಳಿತಾಧಿಕಾರಿಗಳು ರಾಜಕೀಯ ಯಶಸ್ಸು ಪಡೆದ ಇತ್ತೀಚಿನ ಉದಾಹರಣೆ ಎಂದರೆ, ಐಆರ್‌ಎಸ್ ಕೇಡರ್‌ನ ಅರವಿಂದ್ ಕೇಜ್ರಿವಾಲ್. ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಕಟ್ಟುವ ಮುಂಚೆ ಮಾಹಿತಿ ಹಕ್ಕು ಕಾಯ್ದೆಗಾಗಿ ಹೋರಾಟ ನಡೆಸಿದ್ದರು. ಜನ್ ಲೋಕ್ ಮಸೂದೆ ಜಾರಿಗೆ ಒತ್ತಾಯಿಸಿ ಭ್ರಷ್ಟಾಚಾರದ ವಿರುದ್ಧ ವ್ಯಾಪಕ ಹೋರಾಟ ಮಾಡಿದ್ದರು. ಭ್ರಷ್ಟಾಚಾರವೆಂದರೆ, ರೊಕ್ಕದ ರೂಪದ ಲಂಚವಷ್ಟೇೆಂದು ನಂಬಿದ್ದ ಮಧ್ಯಮವರ್ಗದ ಜನರನ್ನೂ ಕೇಜ್ರಿವಾಲ್ ಸೆಳೆದಿದ್ದರು.

ಮುಂದೆ ಅವರ ಸರ್ಕಾರ ಶಿಕ್ಷಣ, ಆರೋಗ್ಯ, ನೀರು ಪೂರೈಕೆ ಮತ್ತು ವಿದ್ಯುತ್ ವಿಷಯಗಳಲ್ಲಿ ಮಾಡಿದ ಕೆಲಸಗಳು ಅವರನ್ನು ಜನಸ್ನೇಹಿ ಮಾಡಿವೆ.

ಆದರೆ, ಈ ಮೆಟ್ರೋಮ್ಯಾನ್ ಶ್ರೀಧರನ್, ತಮ್ಮ ನೌಕರಿಯ ಕಾರಣದಿಂದಾಗಿ ಬಹುಪಾಲು ಕೇರಳದಿಂದ ಹೊರಗೇ ಇದ್ದವರು. ನಿವೃತ್ತಿಯ ನಂತರವಷ್ಟೇ ಕೇರಳದ ತಮ್ಮ ಊರಿಗೆ ಬಂದವರು. ಈಗ ಏಕಾಏಕಿ ಅವರು ಬಿಜೆಪಿಗೆ ಸೇರುವುದು ಮತ್ತು ಬಿಜೆಪಿ ಈವರೆಗೆ ಕೇರಳದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಹಿಂದಕ್ಕೆ ಸರಿಸಿ, ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವುದು- ಇದು ಶ್ರೀಧರನ್ ಅವರ ಅಸಾಧ್ಯ ಆಂಬಿಷನ್ಸ್ ಮತ್ತು ಬಿಜೆಪಿಯ ಹತಾಶೆ ಮತ್ತು ಜೂಜಿನಾಟಕ್ಕೆ ಸಂಕೇತದಂತಿದೆ.

ನಿನ್ನೆಯಷ್ಟೇ ಈ ಶ್ರೀಧರನ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತು. ಆದರೆ ಸ್ವಲ್ಪ ಹೊತ್ತಿನಲ್ಲೇ ರಾಷ್ಟ್ರೀಯ ಬಿಜೆಪಿ ಸ್ಪಷ್ಟನೆ ನೀಡಿ, ಇನ್ನೂ ಅದರ ಬಗ್ಗೆ ತೀರ್ಮಾನವಾಗಿಲ್ಲ, ಅಂತಹ ಅಧಿಕೃತ ಘೋಷಣೆ ಮಾಡಿಲ್ಲ ಎಂದಿತು. ಇದು ಕೂಡ ಬಿಜೆಪಿಯ ಗೊಂದಲ ಮತ್ತು ಶ್ರೀಧರನ್ ಅವರ ತಳಬುಡವಿಲ್ಲದ ಕನಸುಗಳನ್ನು ತೋರಿಸುತ್ತಿದೆ.

ಬಿಜೆಪಿಯ ಪ್ರಾಥಮಿಕ ಸದ್ಯಸ್ವತ್ವ ಪಡೆದ ಕೂಡಲೇ ಶ್ರೀಧರನ್, ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಗಿ ಘೋಷಣೆ ಮಾಡಲು ಭಿನ್ನವಿಸಿಕೊಂಡರು.
*****

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಭಾರತದ ‘ಮೆಟ್ರೋ ಮ್ಯಾನ್’ ಇ.ಶ್ರೀಧರನ್ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ ಕೇಂದ್ರ ಸಚಿವ ವಿ ಮುರಳೀಧರನ್ ಗುರುವಾರ ರಾತ್ರಿ ಎಎನ್‌ಐಗೆ ಸ್ಪಷ್ಟೀಕರಣವನ್ನು ನೀಡಿದ್ದು, ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದಿದ್ದಾರೆ.

ಹಿಂದಿನ ದಿನ ಮುರಳೀಧರನ್ ಅವರು ಟ್ವೀಟ್ ಮಾಡಿ, “ಕೇರಳ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇ ಶ್ರೀಧರನ್ ಅವರನ್ನು ಘೋಷಿಸಿ, ಅವರೊಂದಿಗೆ ಕೇರಳ ಚುನಾವಣೆಯಲ್ಲಿ ಹೋರಾಡಲಿದೆ. ಕೇರಳದ ಜನರಿಗೆ ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿ-ಆಧಾರಿತ ಆಡಳಿತವನ್ನು ಒದಗಿಸಲು ನಾವು ಸಿಪಿಎಂ ಮತ್ತು ಕಾಂಗ್ರೆಸ್ ಎರಡನ್ನೂ ಸೋಲಿಸುತ್ತೇವೆ’ ಎಂದಿದ್ದರು. ಈಗ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ,

ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಬಿಜೆಪಿಯ ನಿರ್ಧಾರವು ಪಕ್ಷದಲ್ಲಿನ “ಅನಧಿಕೃತ” ನಿಯಮಕ್ಕೆ ವಿರುದ್ಧವಾಗಿದೆ ಕೂಡ! 75 ವರ್ಷಕ್ಕಿಂತ ಮೇಲ್ಪಟ್ಟ ಯಾರನ್ನೂ ಮಂತ್ರಿ ಸ್ಥಾನ ಅಥವಾ ಇತರ ಸ್ಥಾನಗಳಿಗೆ ಪರಿಗಣಿಸಲಾಗುತ್ತಿಲ್ಲ. ಅದ್ವಾನಿ, ಮುರಳಿ ಮನೋಹರ್ ಜೋಶಿಯವರಿಗೂ ಇದನ್ನು ಅನ್ವಯಿಸಲಾಯಿತ್ತು.

ಶ್ರೀಧರನ್ ಅವರು ಜೂನ್‌ನಲ್ಲಿ 89 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೂ, ಆ ನಿಯಮಕ್ಕೆ ವಿನಾಯಿತಿಗಳಿಗೆ ತಕ್ಷಣದ ಆದ್ಯತೆ ಇದೆ; ಬಿ.ಎಸ್ ಯಡಿಯೂರಪ್ಪ ಅವರು 2019 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ 76 ವರ್ಷವಾಗಿತ್ತಲ್ಲವೆ?

ಶ್ರೀಧರನ್ ಅವರು ಚುನಾವಣೆಯಲ್ಲಿ “ದೊಡ್ಡ” ಗೆಲುವು ನಿರೀಕ್ಷಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಹಳಿಗಳೇ ಇಲ್ಲದೇ ಪ್ಯಾಸೆಂಜರ್ ರೈಲು ಓಡಿಸುವ ಕನಸು ಕಾಣುತ್ತಿದ್ದಾರೆ!
“ನಾನು ರಾಜಕಾರಣಿಯಂತೆ ಕೆಲಸ ಮಾಡುವುದಿಲ್ಲ. .ನಾನು ತಂತ್ರಜ್ಞನಂತೆ ಕೆಲಸ ಮಾಡುತ್ತೇನೆ” ಎಂದು ಶ್ರೀಧರನ್ ಹೇಳುತ್ತಿದ್ದಾರೆ ಬೇರೆ!
ಮೂಲಭೂತ ಸೌಕರ್ಯ ಮತು ಉದ್ಯಮಗಳ ಸ್ಥಾಪನೆ ಬಿಟ್ಟು ಅವರ ತಲೆಯಲ್ಲಿ ಯಾವ ಹೊಸ ಹೊಳಹೂ ಕಾಣುತ್ತಿಲ್ಲ!

ಕೇರಳದಲ್ಲಿ ಬಿಜೆಪಿ ಶ್ರೀಧರನ್ ಅವರ ಮೆಟ್ರೋರೈಲು ಏರಿದೆ. ಆದರೆ ಅದು ಓಡುವುದೇ ಅನುಮಾನ, ಓಡಿದರೂ ಪ್ಯಾಸೆಂಜರ್ ಹತ್ತುವುದಂತೂ ತೀರಾ ಅನುಮಾನ!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಭಾರತದ ‘ಮೆಟ್ರೋ ಮ್ಯಾನ್’ ಈಗ ಕೇರಳ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....