Homeಮುಖಪುಟಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

ಕೇರಳ ಬಿಜೆಪಿ ರೈಲಿನಲ್ಲಿ ಮೆಟ್ರೋಮ್ಯಾನ್: ಪ್ಯಾಸೆಂಜರ್‌ಗಳಿಲ್ಲ, ರೆಡ್ ಸಿಗ್ನಲ್‌ಗಳೇ ಎಲ್ಲ!

- Advertisement -
- Advertisement -

ಕೇರಳದಲ್ಲಿ ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಎಡಪಂಥೀಯರು ನಿರ್ದಯವಾಗಿ ಕೊಲ್ಲುತ್ತಿದ್ದಾರೆ ಎಂಬ ಅರೆಸತ್ಯದ ವಿಷಯವನ್ನು ಹಿಂದಿನ ಚುನಾವಣೆಗಳಲ್ಲಿ ಬಿಜೆಪಿ ಬಳಸುತ್ತ ಬಂದಿತ್ತು. ಊಹೂಂ ಅದಕ್ಕೇನೂ ರಾಜಕೀಯ ಲಾಭವಾಗಲಿಲ್ಲ. ನಂತರ, ಶಬರಿಮಲೆ ಅಯ್ಯಪ್ಪನ ಪಾದಕ್ಕೆ ಬಿದ್ದಿದ್ದ ಆಯ್ತು. ಅಯ್ಯಪ್ಪನ ದೇಗುಲಕ್ಕೆ ಮಹಿಳೆಯರಿಗೆ ನಿಷೇಧ ವಿಷಯದ ವಿರುದ್ದ ‘ಹೋರಾಟ’ ಮಾಡಿತ್ತು. ಆಗ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಕಾಡೆ ಮಲಗಿತ್ತು.

ಕಳೆದ ಸಲದಂತೆ ಈ ಸಲವೂ ಅಲ್ಲಿಗೆ ಯೋಗಿ ಆದಿತ್ಯನಾಥರನ್ನು ಪ್ರಚಾರಕ್ಕೆ ಕಳಿಸಿ, ಅಭಿವೃದ್ಧಿಯ ಪಾಠಗಳನ್ನು ಬೋಧಿಸುವ ಮೂಲಕ ಅಪಹಾಸ್ಯಕ್ಕೆ ಬಿಜೆಪಿ ಈಡಾಗಿದೆ.
ಈಗ ಅದು ಮೆಟ್ರೋಮ್ಯಾನ್ ಶ್ರೀಧರನ್ ಎಂಬ 89 ವರ್ಷದ ಮಾಜಿ ಅಧಿಕಾರಿಯ ಹಳಿಯ ಮೇಲೆ ರೈಲು ಓಡಿಸಲು ಹತಾಶ ಪ್ರಯತ್ನ ಮಾಡುತ್ತಿದೆ.

ಮೇಲಿನದು, ಕೇರಳ ಚುನಾವಣೆಗೆ ಸಂಬಂಧಿಸಿದಂತೆ, ಬಿಜೆಪಿಯ ಹೀನಾಯ ಸ್ಥಿತಿ ಅನಿಸಬಹುದು, ಆದರೆ ಅದರ ಪಾಲಿಗೆ ಇದೇ ಅತ್ಯುತ್ತಮ ಗಳಿಗೆ ಅನಿಸಿಬಿಟ್ಟಿದೆ!

ಈಗ ಕೇರಳ ವಿಧಾನಸಭೆಯಲ್ಲಿ ಬಿಜೆಪಿಯ ಒಬ್ಬರು ಶಾಸಕರಿದ್ದಾರೆ. ಕೇರಳ ವಿಧಾನಸಭೆ ಸರ್ವಾನುಮತದಿಮದ ಕೇಂದ್ರದ ಕೃಷಿ ಕಾಯ್ದೆಗಳ ರದ್ಧತಿಗೆ ಆಗ್ರಹಿಸಿ ನಿರ್ಣಯ ಮಂಡಿಸಿತ್ತು. ಸರ್ವಾನುಮತ ಅಂದರೆ ಬಿಜೆಪಿಯ ಶಾಸಕನೂ ಬೆಂಬಲಿಸಿದ್ದರು!

2021: ಮೆಟ್ರೋಮ್ಯಾನ್ ಮತ್ತು ಬಿಜೆಪಿ ‘ರೈಲು’!

ಮೆಟ್ರೋ ರೈಲು ವ್ಯವಸ್ಥೆ, ಕೊಂಕಣ ರೈಲು ವ್ಯವಸ್ಥೆಗಳ ಸಾಧನೆಗಳಿಗಾಗಿ ಶ್ರೀಧರನ್ ಪ್ರಸಿದ್ಧರು. ಆಡಳಿತಾಧಿಕಾರಿಗಳು ರಾಜಕೀಯ ಯಶಸ್ಸು ಪಡೆದ ಇತ್ತೀಚಿನ ಉದಾಹರಣೆ ಎಂದರೆ, ಐಆರ್‌ಎಸ್ ಕೇಡರ್‌ನ ಅರವಿಂದ್ ಕೇಜ್ರಿವಾಲ್. ಕೇಜ್ರಿವಾಲ್ ಆಮ್ ಆದ್ಮಿ ಪಕ್ಷ ಕಟ್ಟುವ ಮುಂಚೆ ಮಾಹಿತಿ ಹಕ್ಕು ಕಾಯ್ದೆಗಾಗಿ ಹೋರಾಟ ನಡೆಸಿದ್ದರು. ಜನ್ ಲೋಕ್ ಮಸೂದೆ ಜಾರಿಗೆ ಒತ್ತಾಯಿಸಿ ಭ್ರಷ್ಟಾಚಾರದ ವಿರುದ್ಧ ವ್ಯಾಪಕ ಹೋರಾಟ ಮಾಡಿದ್ದರು. ಭ್ರಷ್ಟಾಚಾರವೆಂದರೆ, ರೊಕ್ಕದ ರೂಪದ ಲಂಚವಷ್ಟೇೆಂದು ನಂಬಿದ್ದ ಮಧ್ಯಮವರ್ಗದ ಜನರನ್ನೂ ಕೇಜ್ರಿವಾಲ್ ಸೆಳೆದಿದ್ದರು.

ಮುಂದೆ ಅವರ ಸರ್ಕಾರ ಶಿಕ್ಷಣ, ಆರೋಗ್ಯ, ನೀರು ಪೂರೈಕೆ ಮತ್ತು ವಿದ್ಯುತ್ ವಿಷಯಗಳಲ್ಲಿ ಮಾಡಿದ ಕೆಲಸಗಳು ಅವರನ್ನು ಜನಸ್ನೇಹಿ ಮಾಡಿವೆ.

ಆದರೆ, ಈ ಮೆಟ್ರೋಮ್ಯಾನ್ ಶ್ರೀಧರನ್, ತಮ್ಮ ನೌಕರಿಯ ಕಾರಣದಿಂದಾಗಿ ಬಹುಪಾಲು ಕೇರಳದಿಂದ ಹೊರಗೇ ಇದ್ದವರು. ನಿವೃತ್ತಿಯ ನಂತರವಷ್ಟೇ ಕೇರಳದ ತಮ್ಮ ಊರಿಗೆ ಬಂದವರು. ಈಗ ಏಕಾಏಕಿ ಅವರು ಬಿಜೆಪಿಗೆ ಸೇರುವುದು ಮತ್ತು ಬಿಜೆಪಿ ಈವರೆಗೆ ಕೇರಳದಲ್ಲಿ ಪಕ್ಷಕ್ಕಾಗಿ ಕೆಲಸ ಮಾಡುತ್ತಿರುವವರನ್ನು ಹಿಂದಕ್ಕೆ ಸರಿಸಿ, ಶ್ರೀಧರನ್ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸುವುದು- ಇದು ಶ್ರೀಧರನ್ ಅವರ ಅಸಾಧ್ಯ ಆಂಬಿಷನ್ಸ್ ಮತ್ತು ಬಿಜೆಪಿಯ ಹತಾಶೆ ಮತ್ತು ಜೂಜಿನಾಟಕ್ಕೆ ಸಂಕೇತದಂತಿದೆ.

ನಿನ್ನೆಯಷ್ಟೇ ಈ ಶ್ರೀಧರನ್ ಅವರನ್ನು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಿಸಲಾಗಿತು. ಆದರೆ ಸ್ವಲ್ಪ ಹೊತ್ತಿನಲ್ಲೇ ರಾಷ್ಟ್ರೀಯ ಬಿಜೆಪಿ ಸ್ಪಷ್ಟನೆ ನೀಡಿ, ಇನ್ನೂ ಅದರ ಬಗ್ಗೆ ತೀರ್ಮಾನವಾಗಿಲ್ಲ, ಅಂತಹ ಅಧಿಕೃತ ಘೋಷಣೆ ಮಾಡಿಲ್ಲ ಎಂದಿತು. ಇದು ಕೂಡ ಬಿಜೆಪಿಯ ಗೊಂದಲ ಮತ್ತು ಶ್ರೀಧರನ್ ಅವರ ತಳಬುಡವಿಲ್ಲದ ಕನಸುಗಳನ್ನು ತೋರಿಸುತ್ತಿದೆ.

ಬಿಜೆಪಿಯ ಪ್ರಾಥಮಿಕ ಸದ್ಯಸ್ವತ್ವ ಪಡೆದ ಕೂಡಲೇ ಶ್ರೀಧರನ್, ತನ್ನನ್ನು ಮುಖ್ಯಮಂತ್ರಿ ಅಭ್ಯರ್ಥಿಯನ್ನಗಿ ಘೋಷಣೆ ಮಾಡಲು ಭಿನ್ನವಿಸಿಕೊಂಡರು.
*****

ಮುಂದಿನ ತಿಂಗಳು ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೆ ಭಾರತದ ‘ಮೆಟ್ರೋ ಮ್ಯಾನ್’ ಇ.ಶ್ರೀಧರನ್ ಅವರು ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂದು ಟ್ವೀಟ್ ಮಾಡಿದ ಕೆಲವೇ ಗಂಟೆಗಳ ನಂತರ ಕೇಂದ್ರ ಸಚಿವ ವಿ ಮುರಳೀಧರನ್ ಗುರುವಾರ ರಾತ್ರಿ ಎಎನ್‌ಐಗೆ ಸ್ಪಷ್ಟೀಕರಣವನ್ನು ನೀಡಿದ್ದು, ಇನ್ನೂ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎಂದಿದ್ದಾರೆ.

ಹಿಂದಿನ ದಿನ ಮುರಳೀಧರನ್ ಅವರು ಟ್ವೀಟ್ ಮಾಡಿ, “ಕೇರಳ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಇ ಶ್ರೀಧರನ್ ಅವರನ್ನು ಘೋಷಿಸಿ, ಅವರೊಂದಿಗೆ ಕೇರಳ ಚುನಾವಣೆಯಲ್ಲಿ ಹೋರಾಡಲಿದೆ. ಕೇರಳದ ಜನರಿಗೆ ಭ್ರಷ್ಟಾಚಾರ ಮುಕ್ತ, ಅಭಿವೃದ್ಧಿ-ಆಧಾರಿತ ಆಡಳಿತವನ್ನು ಒದಗಿಸಲು ನಾವು ಸಿಪಿಎಂ ಮತ್ತು ಕಾಂಗ್ರೆಸ್ ಎರಡನ್ನೂ ಸೋಲಿಸುತ್ತೇವೆ’ ಎಂದಿದ್ದರು. ಈಗ ಆ ಟ್ವೀಟ್ ಡಿಲೀಟ್ ಮಾಡಿದ್ದಾರೆ,

ಶ್ರೀಧರನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬಿಂಬಿಸುವ ಬಿಜೆಪಿಯ ನಿರ್ಧಾರವು ಪಕ್ಷದಲ್ಲಿನ “ಅನಧಿಕೃತ” ನಿಯಮಕ್ಕೆ ವಿರುದ್ಧವಾಗಿದೆ ಕೂಡ! 75 ವರ್ಷಕ್ಕಿಂತ ಮೇಲ್ಪಟ್ಟ ಯಾರನ್ನೂ ಮಂತ್ರಿ ಸ್ಥಾನ ಅಥವಾ ಇತರ ಸ್ಥಾನಗಳಿಗೆ ಪರಿಗಣಿಸಲಾಗುತ್ತಿಲ್ಲ. ಅದ್ವಾನಿ, ಮುರಳಿ ಮನೋಹರ್ ಜೋಶಿಯವರಿಗೂ ಇದನ್ನು ಅನ್ವಯಿಸಲಾಯಿತ್ತು.

ಶ್ರೀಧರನ್ ಅವರು ಜೂನ್‌ನಲ್ಲಿ 89 ನೇ ವರ್ಷಕ್ಕೆ ಕಾಲಿಡಲಿದ್ದಾರೆ. ಆದರೂ, ಆ ನಿಯಮಕ್ಕೆ ವಿನಾಯಿತಿಗಳಿಗೆ ತಕ್ಷಣದ ಆದ್ಯತೆ ಇದೆ; ಬಿ.ಎಸ್ ಯಡಿಯೂರಪ್ಪ ಅವರು 2019 ರಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವಾಗ 76 ವರ್ಷವಾಗಿತ್ತಲ್ಲವೆ?

ಶ್ರೀಧರನ್ ಅವರು ಚುನಾವಣೆಯಲ್ಲಿ “ದೊಡ್ಡ” ಗೆಲುವು ನಿರೀಕ್ಷಿಸುತ್ತಿದ್ದೇನೆ ಎಂದು ಹೇಳುತ್ತಿದ್ದಾರೆ. ಹಳಿಗಳೇ ಇಲ್ಲದೇ ಪ್ಯಾಸೆಂಜರ್ ರೈಲು ಓಡಿಸುವ ಕನಸು ಕಾಣುತ್ತಿದ್ದಾರೆ!
“ನಾನು ರಾಜಕಾರಣಿಯಂತೆ ಕೆಲಸ ಮಾಡುವುದಿಲ್ಲ. .ನಾನು ತಂತ್ರಜ್ಞನಂತೆ ಕೆಲಸ ಮಾಡುತ್ತೇನೆ” ಎಂದು ಶ್ರೀಧರನ್ ಹೇಳುತ್ತಿದ್ದಾರೆ ಬೇರೆ!
ಮೂಲಭೂತ ಸೌಕರ್ಯ ಮತು ಉದ್ಯಮಗಳ ಸ್ಥಾಪನೆ ಬಿಟ್ಟು ಅವರ ತಲೆಯಲ್ಲಿ ಯಾವ ಹೊಸ ಹೊಳಹೂ ಕಾಣುತ್ತಿಲ್ಲ!

ಕೇರಳದಲ್ಲಿ ಬಿಜೆಪಿ ಶ್ರೀಧರನ್ ಅವರ ಮೆಟ್ರೋರೈಲು ಏರಿದೆ. ಆದರೆ ಅದು ಓಡುವುದೇ ಅನುಮಾನ, ಓಡಿದರೂ ಪ್ಯಾಸೆಂಜರ್ ಹತ್ತುವುದಂತೂ ತೀರಾ ಅನುಮಾನ!

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಭಾರತದ ‘ಮೆಟ್ರೋ ಮ್ಯಾನ್’ ಈಗ ಕೇರಳ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...