Homeಮುಖಪುಟಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

ಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

- Advertisement -
- Advertisement -

ಮೆಕ್ಸಿಕೋದ ಆಡಳಿತಾರೂಢ ಎಡಪಂಥೀಯ ‘ಮೊರೆನಾ’ ಪಕ್ಷದ ಕ್ಲೌಡಿಯಾ ಶೀನ್‌ಬಾಮ್ ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಮೆಕ್ಸಿಕೋ ನಗರದ ಡೌನ್‌ಟೌನ್‌ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದ ಶೀನ್‌ಬಾಮ್, “ನಾನು ಮೆಕ್ಸಿಕೋದ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದೇನೆ. ನಾನು ಈ ಸಾಧನೆಯನ್ನು ಏಕಾಂಕಿಯಾಗಿ ಮಾಡಿಲ್ಲ. ನನ್ನ ತಾಯಂದಿರು, ನಮ್ಮ ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ತಾಯ್ನಾಡನ್ನು ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯ ಕ್ಷಿಪ್ರ ಮಾದರಿ ಮತ ಎಣಿಕೆಯಲ್ಲಿ 60.7 ಶೇಖಡ ಮತಗಳನ್ನು ಪಡೆಯುವ ಮೂಲಕ ಕ್ಲೌಡಿಯಾ ಶೀನ್‌ಬಾಮ್ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರು ಶೇ.58.3ರಷ್ಟು ಮತಗಳನ್ನು ಪಡೆದಿದ್ದಾರೆ. ಇದು ದೇಶದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ.

ಕ್ಲೌಡಿಯಾ ಶೀನ್‌ಬಾಮ್ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಪ್ರತಿನಿಧಿಸುವ ಸಂಪ್ರದಾಯವಾದಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರನ್ನು ಸೋಲಿಸಿದ್ದಾರೆ. ಕಣದಲ್ಲಿದ್ದ ಮೂರನೇ ಅಭ್ಯರ್ಥಿ ಜಾರ್ಜ್ ಅಲ್ವಾರೆಝ್ ಮೇನೆಜ್ ಅವರು ಮಧ್ಯ-ಎಡ ನಾಗರಿಕರ ಚಳವಳಿಯನ್ನು ಪ್ರತಿನಿಧಿಸಿದ್ದರು.

ಮೆಕ್ಸಿಕೋದ ಇತಿಹಾಸದಲ್ಲೇ ಅತಿ ದೊಡ್ಡ ಚುನಾವಣೆಯು ಹಿಂಸಾಚಾರದಿಂದ ರಕ್ತಸಿಕ್ತವಾಗಿತ್ತು. ಅಧಿಕಾರದಲ್ಲಿರುವವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಕ್ರಿಮಿನಲ್ ಸಂಘಟನೆಗಳಿಂದ ಹಲವಾರು ರಾಜಕೀಯ ಮುಖಂಡರು ಕೊಲ್ಲಲ್ಪಟ್ಟಿದ್ದಾರೆ. ಕನಿಷ್ಠ 38 ಅಭ್ಯರ್ಥಿಗಳು ಸಾವನಪ್ಪಿದ್ದಾರೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಡ್ರಗ್ ಕಾರ್ಟೆಲ್‌ಗಳ ಬೆದರಿಕೆ ಕಳವಳ ಉಂಟು ಮಾಡಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ರಾಷ್ಟ್ರೀಯ ಚುನಾವಣಾ ಸಂಸ್ಥೆಯ ಪ್ರಕಾರ, ಮೈಕೋಕಾನ್ ಮತ್ತು ಚಿಯಾಪಾಸ್‌ ಪ್ರಾಂತ್ಯದಲ್ಲಿ ಭದ್ರತೆಯ ಕಾರಣದಿಂದ ಅದು ಸುಮಾರು 170 ಮತಗಟ್ಟೆಗಳನ್ನು ರದ್ದುಗೊಳಿಸಲಾಗಿದೆ.

ಪ್ಯೂಬ್ಲಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಮತಯಂತ್ರಗಳನ್ನು ಕದಿಯಲು ಮತಗಟ್ಟೆಗಳನ್ನು ಸ್ಥಾಪಿಸಿದ ಶಾಲೆಗೆ ನುಗ್ಗಲು ಪ್ರಯತ್ನಿಸಿದ್ದರು. ಪಶ್ಚಿಮ ಮೆಕ್ಸಿಕೋದಲ್ಲಿ ಮತದಾನ ನಡೆಯುವ ಗಂಟೆಗಳ ಮೊದಲು ಜೂನ್ 1ರಂದು ಸ್ಥಳೀಯ ಅಭ್ಯರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಭಾನುವಾರ ನಡೆದ ಚುನಾವಣೆಯಲ್ಲಿ ಸುಮಾರು 100 ಮಿಲಿಯನ್ ಮೆಕ್ಸಿಕನ್ನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು. ಅಧ್ಯಕ್ಷೀಯ ಸ್ಪರ್ಧೆಯನ್ನು ಹೊರತುಪಡಿಸಿ, ಮೆಕ್ಸಿಕೋ ನಗರದ ಮೇಯರ್, ಎಂಟು ಗವರ್ನರ್‌ ಸ್ಥಾನಗಳು ಮತ್ತು ಎರಡು ಸಂಸತ್‌ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸುಮಾರು 1.4 ಮಿಲಿಯನ್ ಮೆಕ್ಸಿಕನ್ನರು ವಿದೇಶದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು ಎಂದು ಸಿಎನ್‌ಎನ್‌ ವರದಿ ಮಾಡಿದೆ. ಸುಮಾರು 20,000 ಸ್ಪರ್ಧಿಗಳು ಕಣದಲ್ಲಿದ್ದರು. ಇದು ಮೆಕ್ಸಿಕೋದ ಇತಿಹಾಸದಲ್ಲಿಯೇ ಅತಿ ಹೆಚ್ಚು ಎಂದು ರಾಯಿಟರ್ಸ್ ವರದಿ ಮಾಡಿದೆ.

ಕ್ಲೌಡಿಯಾ ಶೀನ್‌ಬಾಮ್ ಅಧ್ಯಕ್ಷೆಯಾದ ಬಳಿಕ ದೇಶದಲ್ಲಿ ಸಂಘಟಿತ ಹಿಂಸಾಚಾರವನ್ನು ತಡೆಗಟ್ಟುವ ಸವಾಲು ಹೊಂದಿದ್ದಾರೆ. ಏಕೆಂದರೆ, ಅವರ ಪಕ್ಷದ ಲೋಪೆಝ್ ಒಬ್ರಡಾರ್ ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಜನರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಕ್ಲೌಡಿಯಾ ಶೀನ್‌ಬಾಮ್ ಹಿನ್ನೆಲೆ

ಜೂನ್ 24,1962ರಲ್ಲಿ ಜನಿಸಿದ ಕ್ಲೌಡಿಯಾ ಶೀನ್‌ಬಾಮ್ ಪರ್ಡೊ ಮೆಕ್ಸಿಕನ್ ರಾಜಕಾರಣಿ, ವಿಜ್ಞಾನಿ ಮತ್ತು ಶೈಕ್ಷಣಿಕ ತಜ್ಞೆಯಾಗಿದ್ದಾರೆ. ಎಡಪಂಥೀಯ ರಾಜಕೀಯ ಪಕ್ಷ ಮೊರೆನಾದ ಸದಸ್ಯರಾಗಿರುವ ಶೀನ್‌ಬಾಮ್, 2018 ರಿಂದ 2023ರವರೆಗೆ ರಾಜ್ಯ ಗವರ್ನರ್ ಹುದ್ದೆಗೆ ಸಮಾನವಾದ ಮೆಕ್ಸಿಕೋ ಸಿಟಿಯ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇದೀಗ 2024ರ ಮೆಕ್ಸಿಕನ್ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸುವ ಮೂಲಕ ದೇಶದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ : ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...