Homeಮುಖಪುಟಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

ಮೆಕ್ಸಿಕೋದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಕ್ಲೌಡಿಯಾ ಶೀನ್‌ಬಾಮ್ ಆಯ್ಕೆ

- Advertisement -
- Advertisement -

ಮೆಕ್ಸಿಕೋದ ಆಡಳಿತಾರೂಢ ಎಡಪಂಥೀಯ ‘ಮೊರೆನಾ’ ಪಕ್ಷದ ಕ್ಲೌಡಿಯಾ ಶೀನ್‌ಬಾಮ್ ಅವರು ದೇಶದ ಮೊದಲ ಮಹಿಳಾ ಅಧ್ಯಕ್ಷೆಯಾಗುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆ ಮೆಕ್ಸಿಕೋ ನಗರದ ಡೌನ್‌ಟೌನ್‌ ಹೋಟೆಲ್‌ನಲ್ಲಿ ಪ್ರತಿಕ್ರಿಯೆ ನೀಡಿದ ಶೀನ್‌ಬಾಮ್, “ನಾನು ಮೆಕ್ಸಿಕೋದ ಮೊದಲ ಮಹಿಳಾ ಅಧ್ಯಕ್ಷೆಯಾಗಲಿದ್ದೇನೆ. ನಾನು ಈ ಸಾಧನೆಯನ್ನು ಏಕಾಂಕಿಯಾಗಿ ಮಾಡಿಲ್ಲ. ನನ್ನ ತಾಯಂದಿರು, ನಮ್ಮ ಹೆಣ್ಣು ಮಕ್ಕಳು ಮತ್ತು ಮೊಮ್ಮಕ್ಕಳು ತಾಯ್ನಾಡನ್ನು ನನಗೆ ನೀಡಿದ್ದಾರೆ” ಎಂದು ಹೇಳಿದ್ದಾರೆ.

ಅಧ್ಯಕ್ಷೀಯ ಸ್ಥಾನಕ್ಕೆ ನಡೆದ ಚುನಾವಣೆಯ ಕ್ಷಿಪ್ರ ಮಾದರಿ ಮತ ಎಣಿಕೆಯಲ್ಲಿ 60.7 ಶೇಖಡ ಮತಗಳನ್ನು ಪಡೆಯುವ ಮೂಲಕ ಕ್ಲೌಡಿಯಾ ಶೀನ್‌ಬಾಮ್ ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರು ಶೇ.58.3ರಷ್ಟು ಮತಗಳನ್ನು ಪಡೆದಿದ್ದಾರೆ. ಇದು ದೇಶದ ಪ್ರಜಾಸತ್ತಾತ್ಮಕ ಇತಿಹಾಸದಲ್ಲಿಯೇ ಅತ್ಯಧಿಕ ಮತದಾನವಾಗಿದೆ.

ಕ್ಲೌಡಿಯಾ ಶೀನ್‌ಬಾಮ್ ಅವರು ವಿರೋಧ ಪಕ್ಷಗಳ ಒಕ್ಕೂಟವನ್ನು ಪ್ರತಿನಿಧಿಸುವ ಸಂಪ್ರದಾಯವಾದಿ ಪಿಎನ್‌ ಪಕ್ಷದ ಕ್ಸೊಕಿಟಿ ಗಲ್ವೇಝ್ ಅವರನ್ನು ಸೋಲಿಸಿದ್ದಾರೆ. ಕಣದಲ್ಲಿದ್ದ ಮೂರನೇ ಅಭ್ಯರ್ಥಿ ಜಾರ್ಜ್ ಅಲ್ವಾರೆಝ್ ಮೇನೆಜ್ ಅವರು ಮಧ್ಯ-ಎಡ ನಾಗರಿಕರ ಚಳವಳಿಯನ್ನು ಪ್ರತಿನಿಧಿಸಿದ್ದರು.

ಮೆಕ್ಸಿಕೋದ ಇತಿಹಾಸದಲ್ಲೇ ಅತಿ ದೊಡ್ಡ ಚುನಾವಣೆಯು ಹಿಂಸಾಚಾರದಿಂದ ರಕ್ತಸಿಕ್ತವಾಗಿತ್ತು. ಅಧಿಕಾರದಲ್ಲಿರುವವರ ಮೇಲೆ ಪ್ರಭಾವ ಬೀರಲು ಪ್ರಯತ್ನಿಸುತ್ತಿರುವ ಕ್ರಿಮಿನಲ್ ಸಂಘಟನೆಗಳಿಂದ ಹಲವಾರು ರಾಜಕೀಯ ಮುಖಂಡರು ಕೊಲ್ಲಲ್ಪಟ್ಟಿದ್ದಾರೆ. ಕನಿಷ್ಠ 38 ಅಭ್ಯರ್ಥಿಗಳು ಸಾವನಪ್ಪಿದ್ದಾರೆ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಡ್ರಗ್ ಕಾರ್ಟೆಲ್‌ಗಳ ಬೆದರಿಕೆ ಕಳವಳ ಉಂಟು ಮಾಡಿತ್ತು ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ವರದಿ ಮಾಡಿದೆ.

ರಾಷ್ಟ್ರೀಯ ಚುನಾವಣಾ ಸಂಸ್ಥೆಯ ಪ್ರಕಾರ, ಮೈಕೋಕಾನ್ ಮತ್ತು ಚಿಯಾಪಾಸ್‌ ಪ್ರಾಂತ್ಯದಲ್ಲಿ ಭದ್ರತೆಯ ಕಾರಣದಿಂದ ಅದು ಸುಮಾರು 170 ಮತಗಟ್ಟೆಗಳನ್ನು ರದ್ದುಗೊಳಿಸಲಾಗಿದೆ.

ಪ್ಯೂಬ್ಲಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಮತಯಂತ್ರಗಳನ್ನು ಕದಿಯಲು ಮತಗಟ್ಟೆಗಳನ್ನು ಸ್ಥಾಪಿಸಿದ ಶಾಲೆಗೆ ನುಗ್ಗಲು ಪ್ರಯತ್ನಿಸಿದ್ದರು. ಪಶ್ಚಿಮ ಮೆಕ್ಸಿಕೋದಲ್ಲಿ ಮತದಾನ ನಡೆಯುವ ಗಂಟೆಗಳ ಮೊದಲು ಜೂನ್ 1ರಂದು ಸ್ಥಳೀಯ ಅಭ್ಯರ್ಥಿಯನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು.

ಭಾನುವಾರ ನಡೆದ ಚುನಾವಣೆಯಲ್ಲಿ ಸುಮಾರು 100 ಮಿಲಿಯನ್ ಮೆಕ್ಸಿಕನ್ನರು ತಮ್ಮ ಹಕ್ಕು ಚಲಾಯಿಸಲು ಅರ್ಹರಾಗಿದ್ದರು. ಅಧ್ಯಕ್ಷೀಯ ಸ್ಪರ್ಧೆಯನ್ನು ಹೊರತುಪಡಿಸಿ, ಮೆಕ್ಸಿಕೋ ನಗರದ ಮೇಯರ್, ಎಂಟು ಗವರ್ನರ್‌ ಸ್ಥಾನಗಳು ಮತ್ತು ಎರಡು ಸಂಸತ್‌ ಸ್ಥಾನಗಳಿಗೆ ಚುನಾವಣೆ ನಡೆದಿದೆ. ಸುಮಾರು 1.4 ಮಿಲಿಯನ್ ಮೆಕ್ಸಿಕನ್ನರು ವಿದೇಶದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರು ಎಂದು ಸಿಎನ್‌ಎನ್‌ ವರದಿ ಮಾಡಿದೆ. ಸುಮಾರು 20,000 ಸ್ಪರ್ಧಿಗಳು ಕಣದಲ್ಲಿದ್ದರು. ಇದು ಮೆಕ್ಸಿಕೋದ ಇತಿಹಾಸದಲ್ಲಿಯೇ ಅತಿ ಹೆಚ್ಚು ಎಂದು ರಾಯಿಟರ್ಸ್ ವರದಿ ಮಾಡಿದೆ.

ಕ್ಲೌಡಿಯಾ ಶೀನ್‌ಬಾಮ್ ಅಧ್ಯಕ್ಷೆಯಾದ ಬಳಿಕ ದೇಶದಲ್ಲಿ ಸಂಘಟಿತ ಹಿಂಸಾಚಾರವನ್ನು ತಡೆಗಟ್ಟುವ ಸವಾಲು ಹೊಂದಿದ್ದಾರೆ. ಏಕೆಂದರೆ, ಅವರ ಪಕ್ಷದ ಲೋಪೆಝ್ ಒಬ್ರಡಾರ್ ಅವರ ಆಡಳಿತಾವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಜನರು ಹಿಂಸಾಚಾರದಲ್ಲಿ ಕೊಲ್ಲಲ್ಪಟ್ಟಿದ್ದಾರೆ.

ಕ್ಲೌಡಿಯಾ ಶೀನ್‌ಬಾಮ್ ಹಿನ್ನೆಲೆ

ಜೂನ್ 24,1962ರಲ್ಲಿ ಜನಿಸಿದ ಕ್ಲೌಡಿಯಾ ಶೀನ್‌ಬಾಮ್ ಪರ್ಡೊ ಮೆಕ್ಸಿಕನ್ ರಾಜಕಾರಣಿ, ವಿಜ್ಞಾನಿ ಮತ್ತು ಶೈಕ್ಷಣಿಕ ತಜ್ಞೆಯಾಗಿದ್ದಾರೆ. ಎಡಪಂಥೀಯ ರಾಜಕೀಯ ಪಕ್ಷ ಮೊರೆನಾದ ಸದಸ್ಯರಾಗಿರುವ ಶೀನ್‌ಬಾಮ್, 2018 ರಿಂದ 2023ರವರೆಗೆ ರಾಜ್ಯ ಗವರ್ನರ್ ಹುದ್ದೆಗೆ ಸಮಾನವಾದ ಮೆಕ್ಸಿಕೋ ಸಿಟಿಯ ಸರ್ಕಾರದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ಇದೀಗ 2024ರ ಮೆಕ್ಸಿಕನ್ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿ ಜಯಗಳಿಸುವ ಮೂಲಕ ದೇಶದ ಮೊಟ್ಟ ಮೊದಲ ಮಹಿಳಾ ಅಧ್ಯಕ್ಷೆಯಾಗಿ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.

ಇದನ್ನೂ ಓದಿ : ಪ್ಯಾಲೆಸ್ತೀನ್ ಪರ ಜಾಗೃತಿ ಕಾರ್ಯಕ್ರಮದಲ್ಲಿದ್ದವರ ಮೇಲೆ ಹಲ್ಲೆ: ಬೆಂಗಳೂರು ಪೊಲೀಸರ ವಿರುದ್ಧ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...