Homeಮುಖಪುಟಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು

- Advertisement -
- Advertisement -

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಟಿಸ್‌ ಹಜಾರಿಯಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಡಾ.ಕಾಮಿನಿ ಲಾವು ಪಬ್ಲಿಕ್‌ ಪ್ರಾಸಿಕ್ಯೂಟರ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಾಮೀನು ಅರ್ಜಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿರೋಧಿಸಿದ್ದು, ಆಜಾದ್ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. ಆದರೆ ಪ್ರಾಸಿಕ್ಯೂಟರ್ ಆರಂಭದಲ್ಲಿ ಆಜಾದ್ ಅವರ ವಕೀಲರಾದ ಮಹಮೂದ್ ಪ್ರಚಾ ಅವರೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಿರಾಕರಿಸಿದರು. ಆದರೆ ಯಾವುದೇ ಆರೋಪ ಮಾಡವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಅಗತ್ಯ ಎಂದು ನ್ಯಾಯಾಧೀಶರು ಕಟುವಾಗಿ ಪ್ರಾಸಿಕ್ಯೂಟರ್‌ಗೆ ಹೇಳಿದರು

ಈ ಕುರಿತು, ಪ್ರಾಸಿಕ್ಯೂಟರ್ ಕೆಲವು ಪೋಸ್ಟ್‌ಗಳನ್ನು ಓದಿದರು. ಆಗ ಸಿಎಎ ಎನ್‌ಆರ್‌ಸಿಯನ್ನು ವಿರೋಧಿಸಲು ಜಮಾ ಮಸೀದಿ ಬಳಿ ಆಜಾದ್ ಪ್ರತಿಭಟನೆ ಮತ್ತು ಧರಣಿಗಾಗಿ ಕರೆ ನೀಡಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರು “ಧರಣೆ ಮಾಡುವುದರಲ್ಲಿ ಏನು ತಪ್ಪಾಗಿದೆ? ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ? ಪ್ರತಿಭಟಿಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು” ಎಂದು ಹೇಳಿದ್ದಾರೆ.

ಆ ಪ್ರತಿಭಟನೆಯಲ್ಲಿ ಹಿಂಸೆ ಎಲ್ಲಿದೆ? ಈ ಯಾವುದೇ ಪೋಸ್ಟ್‌ಗಳಲ್ಲಿ ಏನು ತಪ್ಪಾಗಿದೆ? ನೀವು ಪ್ರತಿಭಟಿಸಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತೀರಿ? ನೀವು ಸಂವಿಧಾನವನ್ನು ಓದಿದ್ದೀರಾ?  ಎಂದು ಪ್ರಾಸಿಕ್ಯೂಟರ್‌ಗೆ ಪ್ರಶ್ನಿಸಿದ್ದಾರೆ.

“ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು” ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್‌ಗೆ ತಿಳಿಸಿದರು. ಆಜಾದ್ ಅವರ ಯಾವುದೇ ಪೋಸ್ಟ್‌ಗಳು ಅಸಂವಿಧಾನಿಕವಲ್ಲ ಎಂದ ನ್ಯಾಯಾಧೀಶರು ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೆ ಇದೆ ಎಂದು ಪ್ರಾಸಿಕ್ಯೂಟರ್‌ಗೆ ನೆನಪಿಸಿದರು.

ಪ್ರತಿಭಟನೆಗೆ ಅನುಮತಿ ತೆಗೆದುಕೊಳ್ಳಬೇಕು ಎಂದು ಪ್ರಾಸಿಕ್ಯೂಟರ್ ಉತ್ತರಿಸಿದಾಗ, ನ್ಯಾಯಾಧೀಶರು “ಏನು ಅನುಮತಿ? 144 ಅನ್ನು ಪದೇ ಪದೇ ಬಳಸುವುದು ದುರುಪಯೋಗ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ (ಇತ್ತೀಚಿನ ಕಾಶ್ಮೀರ ಪ್ರಕರಣದ ನಿರ್ಧಾರವನ್ನು ಉಲ್ಲೇಖಿಸಿ) ಎಂಬುದು ನಿಮಗೆ ಗೊತ್ತೆ ಎಂದು ಪ್ರಶ್ನಿಸಿದ್ದಾರೆ. ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಅನೇಕ ಜನರನ್ನು ನಾನು ನೋಡಿದ್ದೇನೆ. ಮುಂದೆ ಅವರು ನಾಯಕರು ಮತ್ತು ಮಂತ್ರಿಗಳಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು. ಅಲ್ಲದೇ ನಂತರ ಆಜಾದ್ ಕೂಡ “ಉದಯೋನ್ಮುಖ ರಾಜಕಾರಣಿ”ಯಾಗಿದ್ದು ಅವರು ಸಹ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

“ಧಾರ್ಮಿಕ ಸ್ಥಳಗಳ ಹೊರಗೆ ಪ್ರತಿಭಟಿಸುವುದನ್ನು ಯಾವ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಎಂದು ನೀವು ನನಗೆ ತೋರಿಸಬೇಕೆಂದು, ಆಜಾದ್ ಅವರ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿವೆಯೇ ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್ ಅವರನ್ನು ಕೇಳಿದರು.

ಅಂದರೆ ಪುರಾವೆಗಳನ್ನು ಸಂಗ್ರಹಿಸಲಾರದಷ್ಟು ನಮ್ಮ ದೆಹಲಿ ಪೊಲೀಸರು ಹಿಂದುಳಿದಿದ್ದಾರೆಯೇ? ಎಂತಹ ಸಣ್ಣ ಕೇಸುಗಳನ್ನು ಸಾಕ್ಷಿಗಳನ್ನು ಸಂಗ್ರಹಿಸುವ ಪೊಲೀಸರು ಈ ಕೇಸಿನಲ್ಲಿ ಯಾಕೆ ಸಂಗ್ರಹಿಸಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಂದ್ರಶೇಖರ್‌ ಅಜಾದ್‌ರನ್ನು ಬಂಧಿಸುವಂತಹ ಯಾವುದೇ ಪ್ರಕರಣಗಳು ನಡೆದಿಲ್ಲ, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಬಂಧಿಸಲಾಗಿದೆ ಎಂದು ಆಜಾದ್ ಪರ ವಕೀಲ ಪ್ರಾಚಾ ವಾದ ಮಂಡಿಸಿದರು.

ಈ ಸಮಯದಲ್ಲಿ ಪ್ರಾಸಿಕ್ಯೂಟರ್, ಆಜಾದ್ ಉಗ್ರ ಭಾಷಣಗಳನ್ನು ಮಾಡಿದ ಬಗ್ಗೆ “ಡ್ರೋನ್ ಫೂಟೇಜ್” ಪುರಾವೆಗಳಿವೆ ಎಂದು ಹೇಳಿದರು. ಇದನ್ನು ನಿರಾಕರಿಸಿದ ಪ್ರಾಚಾ, ಧರಣದ ಸಮಯದಲ್ಲಿ ಆಜಾದ್ ಕೇವಲ ಸಂವಿಧಾನವನ್ನು ಓದುತ್ತಿದ್ದಾನೆ ಮತ್ತು ಸಿಎಎ, ಎನ್‌ಆರ್‌ಸಿ ವಿರುದ್ಧ ಮಾತನಾಡುತ್ತಿದ್ದಾನೆ ಎಂದು ಹೇಳಿದರು.

“ವಸಾಹತುಶಾಹಿ ಯುಗದಲ್ಲಿ ಪ್ರತಿಭಟನೆಗಳು ರಸ್ತೆಗಿಳಿದವು. ಆದರೆ ನಿಮ್ಮ ಪ್ರತಿಭಟನೆಯು ನ್ಯಾಯಾಲಯಗಳ ಒಳಗೆ ಕಾನೂನುಬದ್ಧವಾಗಿರಬಹುದು. ಸಂಸತ್ತಿನ ಒಳಗೆ ಹೇಳಬೇಕಾದ ವಿಷಯಗಳನ್ನು ಹೇಳಲಾಗಿಲ್ಲ ಮತ್ತು ಅದಕ್ಕಾಗಿಯೇ ಜನರು ಬೀದಿಗಿಳಿದಿದ್ದಾರೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಂಪೂರ್ಣ ಹಕ್ಕು ನಮಗಿದೆ ಆದರೆ ನಮ್ಮ ದೇಶವನ್ನು ನಾಶಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅಜಾದ್‌ಗೆ ಉದ್ದೇಶಪೂರ್ವಕವಾಗಿ ಹಾನಿಯಾಗುತ್ತಿದೆ ಎಂದು ಆಜಾದ್ ವಕೀಲ ಪ್ರಾಚಾ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನವಿದ್ದರೂ ಸಹ ಅಜಾದ್‌ಗೆ ಅಗತ್ಯವಾದ ವೈದ್ಯಕೀಯ ಚಿಕಿತ್ಸೆ ಸಹ ನೀಡಲಾಗಿಲ್ಲ ಎಂದು ಪ್ರಚಾ ಗಮನಸೆಳೆದರು.

ನಂತರ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಕೋರಿಕೆಯ ಮೇರೆಗೆ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 ರವರೆಗೆ ಮುಂದೂಡಿದರು.. ಬಹುಶಃ ನಾಳೆ ಅಜಾದ್‌ಗೆ ಜಾಮೀನು ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇಶದಲ್ಲಿ ಸಂವಿಧಾನದಡಿಯಲ್ಲಿ ಹೋರಾಟ ಮಾಡುವವರು ಕಡಿಮೆ ಅದರಲ್ಲೂ ವಿಶೇಷ ಸಂದರ್ಶನ ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್ ಆಜಾದ್ ರವರು
    ನ್ಯಾಯಬದ್ಧ ಕಾನೂನಿನ ಚೌಕಟ್ಟು ಒಳಪಡುವ ಸಂವಿಧಾನದ ಹಕ್ಕುಗಳಿಗೆ ನ್ಯಾಯ ತವಾಗಿ ಹೋರಾಡುತ್ತಿದ್ದಾರೆ ಅವರ ಏಳಿಗೆಯ ಸೈರಿಸಲಾರದವರು
    ಉದ್ದೇಶಪೂರ್ವಕವಾಗಿ ಬಂದೀಖಾನೆಯಲ್ಲಿ ಇಡುವ ವ್ಯವಸ್ಥೆಯನ್ನು ಸಂವಿಧಾನದ ವಿರುದ್ಧ ರೂಪಿಸಿಕೊಂಡಿರುತ್ತದೆ ಹೊರತು ನ್ಯಾಯಯುತವಲ್ಲ

    ಬೇನಾಮಿ ಆಸ್ತಿ ಬ್ಲಾಕ್ಮನಿ ಅಕ್ರಮ ಹಣ ವರ್ಗಾವಣೆ ಸಂವಿಧಾನದ ಅಡಿಯಲ್ಲಿ ನ್ಯಾಯಕ್ಕೆ ವಿರುದ್ಧವಾಗಿರುವ ಎಲ್ಲರಿಗೂ ದೋಷಮುಕ್ತರಾಗಿ ಹೊರಗೆ ಬರುತ್ತಾರೆ

    ಸಾರ್ವಜನಿಕರಿಗಾಗಿ ಸಂವಿಧಾನದ ಕಾನೂನಿನ ಮಾರ್ಗದರ್ಶಕರಾಗಿ ಸಮಾಜ ನಾಗರಿಕರಿಗೆ ತಿಳಿಯಪಡಿಸುವ ವ್ಯಕ್ತಿಯನ್ನು ಅಕ್ರಮವಾಗಿ ಬಂದೀಖಾನೆಗೆ ರವಾನಿಸುತ್ತಾರೆ

    ಜೈ ಭೀಮ್ ಜೈ ಚಂದ್ರಶೇಖರ್ ರಾವಣ್ಆಜಾದ್ ಸರ್
    ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...