Homeಮುಖಪುಟಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು

- Advertisement -
- Advertisement -

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಟಿಸ್‌ ಹಜಾರಿಯಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಡಾ.ಕಾಮಿನಿ ಲಾವು ಪಬ್ಲಿಕ್‌ ಪ್ರಾಸಿಕ್ಯೂಟರ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಾಮೀನು ಅರ್ಜಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿರೋಧಿಸಿದ್ದು, ಆಜಾದ್ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. ಆದರೆ ಪ್ರಾಸಿಕ್ಯೂಟರ್ ಆರಂಭದಲ್ಲಿ ಆಜಾದ್ ಅವರ ವಕೀಲರಾದ ಮಹಮೂದ್ ಪ್ರಚಾ ಅವರೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಿರಾಕರಿಸಿದರು. ಆದರೆ ಯಾವುದೇ ಆರೋಪ ಮಾಡವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಅಗತ್ಯ ಎಂದು ನ್ಯಾಯಾಧೀಶರು ಕಟುವಾಗಿ ಪ್ರಾಸಿಕ್ಯೂಟರ್‌ಗೆ ಹೇಳಿದರು

ಈ ಕುರಿತು, ಪ್ರಾಸಿಕ್ಯೂಟರ್ ಕೆಲವು ಪೋಸ್ಟ್‌ಗಳನ್ನು ಓದಿದರು. ಆಗ ಸಿಎಎ ಎನ್‌ಆರ್‌ಸಿಯನ್ನು ವಿರೋಧಿಸಲು ಜಮಾ ಮಸೀದಿ ಬಳಿ ಆಜಾದ್ ಪ್ರತಿಭಟನೆ ಮತ್ತು ಧರಣಿಗಾಗಿ ಕರೆ ನೀಡಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರು “ಧರಣೆ ಮಾಡುವುದರಲ್ಲಿ ಏನು ತಪ್ಪಾಗಿದೆ? ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ? ಪ್ರತಿಭಟಿಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು” ಎಂದು ಹೇಳಿದ್ದಾರೆ.

ಆ ಪ್ರತಿಭಟನೆಯಲ್ಲಿ ಹಿಂಸೆ ಎಲ್ಲಿದೆ? ಈ ಯಾವುದೇ ಪೋಸ್ಟ್‌ಗಳಲ್ಲಿ ಏನು ತಪ್ಪಾಗಿದೆ? ನೀವು ಪ್ರತಿಭಟಿಸಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತೀರಿ? ನೀವು ಸಂವಿಧಾನವನ್ನು ಓದಿದ್ದೀರಾ?  ಎಂದು ಪ್ರಾಸಿಕ್ಯೂಟರ್‌ಗೆ ಪ್ರಶ್ನಿಸಿದ್ದಾರೆ.

“ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು” ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್‌ಗೆ ತಿಳಿಸಿದರು. ಆಜಾದ್ ಅವರ ಯಾವುದೇ ಪೋಸ್ಟ್‌ಗಳು ಅಸಂವಿಧಾನಿಕವಲ್ಲ ಎಂದ ನ್ಯಾಯಾಧೀಶರು ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೆ ಇದೆ ಎಂದು ಪ್ರಾಸಿಕ್ಯೂಟರ್‌ಗೆ ನೆನಪಿಸಿದರು.

ಪ್ರತಿಭಟನೆಗೆ ಅನುಮತಿ ತೆಗೆದುಕೊಳ್ಳಬೇಕು ಎಂದು ಪ್ರಾಸಿಕ್ಯೂಟರ್ ಉತ್ತರಿಸಿದಾಗ, ನ್ಯಾಯಾಧೀಶರು “ಏನು ಅನುಮತಿ? 144 ಅನ್ನು ಪದೇ ಪದೇ ಬಳಸುವುದು ದುರುಪಯೋಗ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ (ಇತ್ತೀಚಿನ ಕಾಶ್ಮೀರ ಪ್ರಕರಣದ ನಿರ್ಧಾರವನ್ನು ಉಲ್ಲೇಖಿಸಿ) ಎಂಬುದು ನಿಮಗೆ ಗೊತ್ತೆ ಎಂದು ಪ್ರಶ್ನಿಸಿದ್ದಾರೆ. ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಅನೇಕ ಜನರನ್ನು ನಾನು ನೋಡಿದ್ದೇನೆ. ಮುಂದೆ ಅವರು ನಾಯಕರು ಮತ್ತು ಮಂತ್ರಿಗಳಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು. ಅಲ್ಲದೇ ನಂತರ ಆಜಾದ್ ಕೂಡ “ಉದಯೋನ್ಮುಖ ರಾಜಕಾರಣಿ”ಯಾಗಿದ್ದು ಅವರು ಸಹ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

“ಧಾರ್ಮಿಕ ಸ್ಥಳಗಳ ಹೊರಗೆ ಪ್ರತಿಭಟಿಸುವುದನ್ನು ಯಾವ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಎಂದು ನೀವು ನನಗೆ ತೋರಿಸಬೇಕೆಂದು, ಆಜಾದ್ ಅವರ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿವೆಯೇ ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್ ಅವರನ್ನು ಕೇಳಿದರು.

ಅಂದರೆ ಪುರಾವೆಗಳನ್ನು ಸಂಗ್ರಹಿಸಲಾರದಷ್ಟು ನಮ್ಮ ದೆಹಲಿ ಪೊಲೀಸರು ಹಿಂದುಳಿದಿದ್ದಾರೆಯೇ? ಎಂತಹ ಸಣ್ಣ ಕೇಸುಗಳನ್ನು ಸಾಕ್ಷಿಗಳನ್ನು ಸಂಗ್ರಹಿಸುವ ಪೊಲೀಸರು ಈ ಕೇಸಿನಲ್ಲಿ ಯಾಕೆ ಸಂಗ್ರಹಿಸಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಂದ್ರಶೇಖರ್‌ ಅಜಾದ್‌ರನ್ನು ಬಂಧಿಸುವಂತಹ ಯಾವುದೇ ಪ್ರಕರಣಗಳು ನಡೆದಿಲ್ಲ, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಬಂಧಿಸಲಾಗಿದೆ ಎಂದು ಆಜಾದ್ ಪರ ವಕೀಲ ಪ್ರಾಚಾ ವಾದ ಮಂಡಿಸಿದರು.

ಈ ಸಮಯದಲ್ಲಿ ಪ್ರಾಸಿಕ್ಯೂಟರ್, ಆಜಾದ್ ಉಗ್ರ ಭಾಷಣಗಳನ್ನು ಮಾಡಿದ ಬಗ್ಗೆ “ಡ್ರೋನ್ ಫೂಟೇಜ್” ಪುರಾವೆಗಳಿವೆ ಎಂದು ಹೇಳಿದರು. ಇದನ್ನು ನಿರಾಕರಿಸಿದ ಪ್ರಾಚಾ, ಧರಣದ ಸಮಯದಲ್ಲಿ ಆಜಾದ್ ಕೇವಲ ಸಂವಿಧಾನವನ್ನು ಓದುತ್ತಿದ್ದಾನೆ ಮತ್ತು ಸಿಎಎ, ಎನ್‌ಆರ್‌ಸಿ ವಿರುದ್ಧ ಮಾತನಾಡುತ್ತಿದ್ದಾನೆ ಎಂದು ಹೇಳಿದರು.

“ವಸಾಹತುಶಾಹಿ ಯುಗದಲ್ಲಿ ಪ್ರತಿಭಟನೆಗಳು ರಸ್ತೆಗಿಳಿದವು. ಆದರೆ ನಿಮ್ಮ ಪ್ರತಿಭಟನೆಯು ನ್ಯಾಯಾಲಯಗಳ ಒಳಗೆ ಕಾನೂನುಬದ್ಧವಾಗಿರಬಹುದು. ಸಂಸತ್ತಿನ ಒಳಗೆ ಹೇಳಬೇಕಾದ ವಿಷಯಗಳನ್ನು ಹೇಳಲಾಗಿಲ್ಲ ಮತ್ತು ಅದಕ್ಕಾಗಿಯೇ ಜನರು ಬೀದಿಗಿಳಿದಿದ್ದಾರೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಂಪೂರ್ಣ ಹಕ್ಕು ನಮಗಿದೆ ಆದರೆ ನಮ್ಮ ದೇಶವನ್ನು ನಾಶಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅಜಾದ್‌ಗೆ ಉದ್ದೇಶಪೂರ್ವಕವಾಗಿ ಹಾನಿಯಾಗುತ್ತಿದೆ ಎಂದು ಆಜಾದ್ ವಕೀಲ ಪ್ರಾಚಾ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನವಿದ್ದರೂ ಸಹ ಅಜಾದ್‌ಗೆ ಅಗತ್ಯವಾದ ವೈದ್ಯಕೀಯ ಚಿಕಿತ್ಸೆ ಸಹ ನೀಡಲಾಗಿಲ್ಲ ಎಂದು ಪ್ರಚಾ ಗಮನಸೆಳೆದರು.

ನಂತರ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಕೋರಿಕೆಯ ಮೇರೆಗೆ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 ರವರೆಗೆ ಮುಂದೂಡಿದರು.. ಬಹುಶಃ ನಾಳೆ ಅಜಾದ್‌ಗೆ ಜಾಮೀನು ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇಶದಲ್ಲಿ ಸಂವಿಧಾನದಡಿಯಲ್ಲಿ ಹೋರಾಟ ಮಾಡುವವರು ಕಡಿಮೆ ಅದರಲ್ಲೂ ವಿಶೇಷ ಸಂದರ್ಶನ ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್ ಆಜಾದ್ ರವರು
    ನ್ಯಾಯಬದ್ಧ ಕಾನೂನಿನ ಚೌಕಟ್ಟು ಒಳಪಡುವ ಸಂವಿಧಾನದ ಹಕ್ಕುಗಳಿಗೆ ನ್ಯಾಯ ತವಾಗಿ ಹೋರಾಡುತ್ತಿದ್ದಾರೆ ಅವರ ಏಳಿಗೆಯ ಸೈರಿಸಲಾರದವರು
    ಉದ್ದೇಶಪೂರ್ವಕವಾಗಿ ಬಂದೀಖಾನೆಯಲ್ಲಿ ಇಡುವ ವ್ಯವಸ್ಥೆಯನ್ನು ಸಂವಿಧಾನದ ವಿರುದ್ಧ ರೂಪಿಸಿಕೊಂಡಿರುತ್ತದೆ ಹೊರತು ನ್ಯಾಯಯುತವಲ್ಲ

    ಬೇನಾಮಿ ಆಸ್ತಿ ಬ್ಲಾಕ್ಮನಿ ಅಕ್ರಮ ಹಣ ವರ್ಗಾವಣೆ ಸಂವಿಧಾನದ ಅಡಿಯಲ್ಲಿ ನ್ಯಾಯಕ್ಕೆ ವಿರುದ್ಧವಾಗಿರುವ ಎಲ್ಲರಿಗೂ ದೋಷಮುಕ್ತರಾಗಿ ಹೊರಗೆ ಬರುತ್ತಾರೆ

    ಸಾರ್ವಜನಿಕರಿಗಾಗಿ ಸಂವಿಧಾನದ ಕಾನೂನಿನ ಮಾರ್ಗದರ್ಶಕರಾಗಿ ಸಮಾಜ ನಾಗರಿಕರಿಗೆ ತಿಳಿಯಪಡಿಸುವ ವ್ಯಕ್ತಿಯನ್ನು ಅಕ್ರಮವಾಗಿ ಬಂದೀಖಾನೆಗೆ ರವಾನಿಸುತ್ತಾರೆ

    ಜೈ ಭೀಮ್ ಜೈ ಚಂದ್ರಶೇಖರ್ ರಾವಣ್ಆಜಾದ್ ಸರ್
    ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...