Homeಮುಖಪುಟಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು

- Advertisement -
- Advertisement -

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಟಿಸ್‌ ಹಜಾರಿಯಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಡಾ.ಕಾಮಿನಿ ಲಾವು ಪಬ್ಲಿಕ್‌ ಪ್ರಾಸಿಕ್ಯೂಟರ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಾಮೀನು ಅರ್ಜಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿರೋಧಿಸಿದ್ದು, ಆಜಾದ್ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. ಆದರೆ ಪ್ರಾಸಿಕ್ಯೂಟರ್ ಆರಂಭದಲ್ಲಿ ಆಜಾದ್ ಅವರ ವಕೀಲರಾದ ಮಹಮೂದ್ ಪ್ರಚಾ ಅವರೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಿರಾಕರಿಸಿದರು. ಆದರೆ ಯಾವುದೇ ಆರೋಪ ಮಾಡವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಅಗತ್ಯ ಎಂದು ನ್ಯಾಯಾಧೀಶರು ಕಟುವಾಗಿ ಪ್ರಾಸಿಕ್ಯೂಟರ್‌ಗೆ ಹೇಳಿದರು

ಈ ಕುರಿತು, ಪ್ರಾಸಿಕ್ಯೂಟರ್ ಕೆಲವು ಪೋಸ್ಟ್‌ಗಳನ್ನು ಓದಿದರು. ಆಗ ಸಿಎಎ ಎನ್‌ಆರ್‌ಸಿಯನ್ನು ವಿರೋಧಿಸಲು ಜಮಾ ಮಸೀದಿ ಬಳಿ ಆಜಾದ್ ಪ್ರತಿಭಟನೆ ಮತ್ತು ಧರಣಿಗಾಗಿ ಕರೆ ನೀಡಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರು “ಧರಣೆ ಮಾಡುವುದರಲ್ಲಿ ಏನು ತಪ್ಪಾಗಿದೆ? ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ? ಪ್ರತಿಭಟಿಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು” ಎಂದು ಹೇಳಿದ್ದಾರೆ.

ಆ ಪ್ರತಿಭಟನೆಯಲ್ಲಿ ಹಿಂಸೆ ಎಲ್ಲಿದೆ? ಈ ಯಾವುದೇ ಪೋಸ್ಟ್‌ಗಳಲ್ಲಿ ಏನು ತಪ್ಪಾಗಿದೆ? ನೀವು ಪ್ರತಿಭಟಿಸಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತೀರಿ? ನೀವು ಸಂವಿಧಾನವನ್ನು ಓದಿದ್ದೀರಾ?  ಎಂದು ಪ್ರಾಸಿಕ್ಯೂಟರ್‌ಗೆ ಪ್ರಶ್ನಿಸಿದ್ದಾರೆ.

“ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು” ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್‌ಗೆ ತಿಳಿಸಿದರು. ಆಜಾದ್ ಅವರ ಯಾವುದೇ ಪೋಸ್ಟ್‌ಗಳು ಅಸಂವಿಧಾನಿಕವಲ್ಲ ಎಂದ ನ್ಯಾಯಾಧೀಶರು ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೆ ಇದೆ ಎಂದು ಪ್ರಾಸಿಕ್ಯೂಟರ್‌ಗೆ ನೆನಪಿಸಿದರು.

ಪ್ರತಿಭಟನೆಗೆ ಅನುಮತಿ ತೆಗೆದುಕೊಳ್ಳಬೇಕು ಎಂದು ಪ್ರಾಸಿಕ್ಯೂಟರ್ ಉತ್ತರಿಸಿದಾಗ, ನ್ಯಾಯಾಧೀಶರು “ಏನು ಅನುಮತಿ? 144 ಅನ್ನು ಪದೇ ಪದೇ ಬಳಸುವುದು ದುರುಪಯೋಗ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ (ಇತ್ತೀಚಿನ ಕಾಶ್ಮೀರ ಪ್ರಕರಣದ ನಿರ್ಧಾರವನ್ನು ಉಲ್ಲೇಖಿಸಿ) ಎಂಬುದು ನಿಮಗೆ ಗೊತ್ತೆ ಎಂದು ಪ್ರಶ್ನಿಸಿದ್ದಾರೆ. ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಅನೇಕ ಜನರನ್ನು ನಾನು ನೋಡಿದ್ದೇನೆ. ಮುಂದೆ ಅವರು ನಾಯಕರು ಮತ್ತು ಮಂತ್ರಿಗಳಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು. ಅಲ್ಲದೇ ನಂತರ ಆಜಾದ್ ಕೂಡ “ಉದಯೋನ್ಮುಖ ರಾಜಕಾರಣಿ”ಯಾಗಿದ್ದು ಅವರು ಸಹ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

“ಧಾರ್ಮಿಕ ಸ್ಥಳಗಳ ಹೊರಗೆ ಪ್ರತಿಭಟಿಸುವುದನ್ನು ಯಾವ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಎಂದು ನೀವು ನನಗೆ ತೋರಿಸಬೇಕೆಂದು, ಆಜಾದ್ ಅವರ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿವೆಯೇ ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್ ಅವರನ್ನು ಕೇಳಿದರು.

ಅಂದರೆ ಪುರಾವೆಗಳನ್ನು ಸಂಗ್ರಹಿಸಲಾರದಷ್ಟು ನಮ್ಮ ದೆಹಲಿ ಪೊಲೀಸರು ಹಿಂದುಳಿದಿದ್ದಾರೆಯೇ? ಎಂತಹ ಸಣ್ಣ ಕೇಸುಗಳನ್ನು ಸಾಕ್ಷಿಗಳನ್ನು ಸಂಗ್ರಹಿಸುವ ಪೊಲೀಸರು ಈ ಕೇಸಿನಲ್ಲಿ ಯಾಕೆ ಸಂಗ್ರಹಿಸಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಂದ್ರಶೇಖರ್‌ ಅಜಾದ್‌ರನ್ನು ಬಂಧಿಸುವಂತಹ ಯಾವುದೇ ಪ್ರಕರಣಗಳು ನಡೆದಿಲ್ಲ, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಬಂಧಿಸಲಾಗಿದೆ ಎಂದು ಆಜಾದ್ ಪರ ವಕೀಲ ಪ್ರಾಚಾ ವಾದ ಮಂಡಿಸಿದರು.

ಈ ಸಮಯದಲ್ಲಿ ಪ್ರಾಸಿಕ್ಯೂಟರ್, ಆಜಾದ್ ಉಗ್ರ ಭಾಷಣಗಳನ್ನು ಮಾಡಿದ ಬಗ್ಗೆ “ಡ್ರೋನ್ ಫೂಟೇಜ್” ಪುರಾವೆಗಳಿವೆ ಎಂದು ಹೇಳಿದರು. ಇದನ್ನು ನಿರಾಕರಿಸಿದ ಪ್ರಾಚಾ, ಧರಣದ ಸಮಯದಲ್ಲಿ ಆಜಾದ್ ಕೇವಲ ಸಂವಿಧಾನವನ್ನು ಓದುತ್ತಿದ್ದಾನೆ ಮತ್ತು ಸಿಎಎ, ಎನ್‌ಆರ್‌ಸಿ ವಿರುದ್ಧ ಮಾತನಾಡುತ್ತಿದ್ದಾನೆ ಎಂದು ಹೇಳಿದರು.

“ವಸಾಹತುಶಾಹಿ ಯುಗದಲ್ಲಿ ಪ್ರತಿಭಟನೆಗಳು ರಸ್ತೆಗಿಳಿದವು. ಆದರೆ ನಿಮ್ಮ ಪ್ರತಿಭಟನೆಯು ನ್ಯಾಯಾಲಯಗಳ ಒಳಗೆ ಕಾನೂನುಬದ್ಧವಾಗಿರಬಹುದು. ಸಂಸತ್ತಿನ ಒಳಗೆ ಹೇಳಬೇಕಾದ ವಿಷಯಗಳನ್ನು ಹೇಳಲಾಗಿಲ್ಲ ಮತ್ತು ಅದಕ್ಕಾಗಿಯೇ ಜನರು ಬೀದಿಗಿಳಿದಿದ್ದಾರೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಂಪೂರ್ಣ ಹಕ್ಕು ನಮಗಿದೆ ಆದರೆ ನಮ್ಮ ದೇಶವನ್ನು ನಾಶಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅಜಾದ್‌ಗೆ ಉದ್ದೇಶಪೂರ್ವಕವಾಗಿ ಹಾನಿಯಾಗುತ್ತಿದೆ ಎಂದು ಆಜಾದ್ ವಕೀಲ ಪ್ರಾಚಾ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನವಿದ್ದರೂ ಸಹ ಅಜಾದ್‌ಗೆ ಅಗತ್ಯವಾದ ವೈದ್ಯಕೀಯ ಚಿಕಿತ್ಸೆ ಸಹ ನೀಡಲಾಗಿಲ್ಲ ಎಂದು ಪ್ರಚಾ ಗಮನಸೆಳೆದರು.

ನಂತರ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಕೋರಿಕೆಯ ಮೇರೆಗೆ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 ರವರೆಗೆ ಮುಂದೂಡಿದರು.. ಬಹುಶಃ ನಾಳೆ ಅಜಾದ್‌ಗೆ ಜಾಮೀನು ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇಶದಲ್ಲಿ ಸಂವಿಧಾನದಡಿಯಲ್ಲಿ ಹೋರಾಟ ಮಾಡುವವರು ಕಡಿಮೆ ಅದರಲ್ಲೂ ವಿಶೇಷ ಸಂದರ್ಶನ ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್ ಆಜಾದ್ ರವರು
    ನ್ಯಾಯಬದ್ಧ ಕಾನೂನಿನ ಚೌಕಟ್ಟು ಒಳಪಡುವ ಸಂವಿಧಾನದ ಹಕ್ಕುಗಳಿಗೆ ನ್ಯಾಯ ತವಾಗಿ ಹೋರಾಡುತ್ತಿದ್ದಾರೆ ಅವರ ಏಳಿಗೆಯ ಸೈರಿಸಲಾರದವರು
    ಉದ್ದೇಶಪೂರ್ವಕವಾಗಿ ಬಂದೀಖಾನೆಯಲ್ಲಿ ಇಡುವ ವ್ಯವಸ್ಥೆಯನ್ನು ಸಂವಿಧಾನದ ವಿರುದ್ಧ ರೂಪಿಸಿಕೊಂಡಿರುತ್ತದೆ ಹೊರತು ನ್ಯಾಯಯುತವಲ್ಲ

    ಬೇನಾಮಿ ಆಸ್ತಿ ಬ್ಲಾಕ್ಮನಿ ಅಕ್ರಮ ಹಣ ವರ್ಗಾವಣೆ ಸಂವಿಧಾನದ ಅಡಿಯಲ್ಲಿ ನ್ಯಾಯಕ್ಕೆ ವಿರುದ್ಧವಾಗಿರುವ ಎಲ್ಲರಿಗೂ ದೋಷಮುಕ್ತರಾಗಿ ಹೊರಗೆ ಬರುತ್ತಾರೆ

    ಸಾರ್ವಜನಿಕರಿಗಾಗಿ ಸಂವಿಧಾನದ ಕಾನೂನಿನ ಮಾರ್ಗದರ್ಶಕರಾಗಿ ಸಮಾಜ ನಾಗರಿಕರಿಗೆ ತಿಳಿಯಪಡಿಸುವ ವ್ಯಕ್ತಿಯನ್ನು ಅಕ್ರಮವಾಗಿ ಬಂದೀಖಾನೆಗೆ ರವಾನಿಸುತ್ತಾರೆ

    ಜೈ ಭೀಮ್ ಜೈ ಚಂದ್ರಶೇಖರ್ ರಾವಣ್ಆಜಾದ್ ಸರ್
    ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...