Homeಮುಖಪುಟಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ಅಜಾದ್‌ ಜಾಮೀನು ಅರ್ಜಿ ವಿಚಾರಣೆ: ದೆಹಲಿ ಪೊಲೀಸರ ಬೆವರಿಳಿಸಿದ ನ್ಯಾಯಾಧೀಶರು..

ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು

- Advertisement -
- Advertisement -

ಭೀಮ್‌ ಆರ್ಮಿ ಮುಖ್ಯಸ್ಥ ಚಂದ್ರಶೇಖರ್‌ ಅಜಾದ್‌ರವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ದೆಹಲಿಯ ಟಿಸ್‌ ಹಜಾರಿಯಾ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶೆ ಡಾ.ಕಾಮಿನಿ ಲಾವು ಪಬ್ಲಿಕ್‌ ಪ್ರಾಸಿಕ್ಯೂಟರ್‌ರವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಜಾಮೀನು ಅರ್ಜಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್‌ ವಿರೋಧಿಸಿದ್ದು, ಆಜಾದ್ ತನ್ನ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಾರೆ ಎಂದು ಆರೋಪಿಸಿದರು. ಆದರೆ ಪ್ರಾಸಿಕ್ಯೂಟರ್ ಆರಂಭದಲ್ಲಿ ಆಜಾದ್ ಅವರ ವಕೀಲರಾದ ಮಹಮೂದ್ ಪ್ರಚಾ ಅವರೊಂದಿಗೆ ಪೋಸ್ಟ್‌ಗಳನ್ನು ಹಂಚಿಕೊಳ್ಳಲು ನಿರಾಕರಿಸಿದರು. ಆದರೆ ಯಾವುದೇ ಆರೋಪ ಮಾಡವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಹಂಚಿಕೊಳ್ಳುವುದು ಅಗತ್ಯ ಎಂದು ನ್ಯಾಯಾಧೀಶರು ಕಟುವಾಗಿ ಪ್ರಾಸಿಕ್ಯೂಟರ್‌ಗೆ ಹೇಳಿದರು

ಈ ಕುರಿತು, ಪ್ರಾಸಿಕ್ಯೂಟರ್ ಕೆಲವು ಪೋಸ್ಟ್‌ಗಳನ್ನು ಓದಿದರು. ಆಗ ಸಿಎಎ ಎನ್‌ಆರ್‌ಸಿಯನ್ನು ವಿರೋಧಿಸಲು ಜಮಾ ಮಸೀದಿ ಬಳಿ ಆಜಾದ್ ಪ್ರತಿಭಟನೆ ಮತ್ತು ಧರಣಿಗಾಗಿ ಕರೆ ನೀಡಿದ್ದನ್ನು ಉಲ್ಲೇಖಿಸಿ, ನ್ಯಾಯಾಧೀಶರು “ಧರಣೆ ಮಾಡುವುದರಲ್ಲಿ ಏನು ತಪ್ಪಾಗಿದೆ? ಪ್ರತಿಭಟಿಸುವುದರಲ್ಲಿ ಏನು ತಪ್ಪಿದೆ? ಪ್ರತಿಭಟಿಸುವುದು ಪ್ರತಿಯೊಬ್ಬರ ಸಾಂವಿಧಾನಿಕ ಹಕ್ಕು” ಎಂದು ಹೇಳಿದ್ದಾರೆ.

ಆ ಪ್ರತಿಭಟನೆಯಲ್ಲಿ ಹಿಂಸೆ ಎಲ್ಲಿದೆ? ಈ ಯಾವುದೇ ಪೋಸ್ಟ್‌ಗಳಲ್ಲಿ ಏನು ತಪ್ಪಾಗಿದೆ? ನೀವು ಪ್ರತಿಭಟಿಸಲು ಸಾಧ್ಯವಿಲ್ಲ ಎಂದು ಹೇಗೆ ಹೇಳುತ್ತೀರಿ? ನೀವು ಸಂವಿಧಾನವನ್ನು ಓದಿದ್ದೀರಾ?  ಎಂದು ಪ್ರಾಸಿಕ್ಯೂಟರ್‌ಗೆ ಪ್ರಶ್ನಿಸಿದ್ದಾರೆ.

“ನೀವು ಜಮಾ ಮಸೀದಿ ಪಾಕಿಸ್ತಾನದಲ್ಲಿದೆ ಎಂಬಂತೆ ವರ್ತಿಸುತ್ತಿದ್ದೀರಿ. ಅದು ಪಾಕಿಸ್ತಾನವಾಗಿದ್ದರೂ ಸಹ ನೀವು ಅಲ್ಲಿಗೆ ಹೋಗಿ ಪ್ರತಿಭಟಿಸಬಹುದು. ಎಕೆಂದರೆ ಪಾಕಿಸ್ತಾನವು ಅವಿಭಜಿತ ಭಾರತದ ಒಂದು ಭಾಗವಾಗಿತ್ತು” ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್‌ಗೆ ತಿಳಿಸಿದರು. ಆಜಾದ್ ಅವರ ಯಾವುದೇ ಪೋಸ್ಟ್‌ಗಳು ಅಸಂವಿಧಾನಿಕವಲ್ಲ ಎಂದ ನ್ಯಾಯಾಧೀಶರು ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೆ ಇದೆ ಎಂದು ಪ್ರಾಸಿಕ್ಯೂಟರ್‌ಗೆ ನೆನಪಿಸಿದರು.

ಪ್ರತಿಭಟನೆಗೆ ಅನುಮತಿ ತೆಗೆದುಕೊಳ್ಳಬೇಕು ಎಂದು ಪ್ರಾಸಿಕ್ಯೂಟರ್ ಉತ್ತರಿಸಿದಾಗ, ನ್ಯಾಯಾಧೀಶರು “ಏನು ಅನುಮತಿ? 144 ಅನ್ನು ಪದೇ ಪದೇ ಬಳಸುವುದು ದುರುಪಯೋಗ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ (ಇತ್ತೀಚಿನ ಕಾಶ್ಮೀರ ಪ್ರಕರಣದ ನಿರ್ಧಾರವನ್ನು ಉಲ್ಲೇಖಿಸಿ) ಎಂಬುದು ನಿಮಗೆ ಗೊತ್ತೆ ಎಂದು ಪ್ರಶ್ನಿಸಿದ್ದಾರೆ. ಸಂಸತ್ತಿನ ಹೊರಗೆ ಪ್ರತಿಭಟನೆ ನಡೆಸಿದ ಅನೇಕ ಜನರನ್ನು ನಾನು ನೋಡಿದ್ದೇನೆ. ಮುಂದೆ ಅವರು ನಾಯಕರು ಮತ್ತು ಮಂತ್ರಿಗಳಾಗಿದ್ದಾರೆ ಎಂದು ನ್ಯಾಯಾಧೀಶರು ಹೇಳಿದರು. ಅಲ್ಲದೇ ನಂತರ ಆಜಾದ್ ಕೂಡ “ಉದಯೋನ್ಮುಖ ರಾಜಕಾರಣಿ”ಯಾಗಿದ್ದು ಅವರು ಸಹ ಪ್ರತಿಭಟಿಸುವ ಹಕ್ಕನ್ನು ಹೊಂದಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

“ಧಾರ್ಮಿಕ ಸ್ಥಳಗಳ ಹೊರಗೆ ಪ್ರತಿಭಟಿಸುವುದನ್ನು ಯಾವ ಕಾನೂನಿನಡಿಯಲ್ಲಿ ನಿಷೇಧಿಸಲಾಗಿದೆ ಎಂದು ನೀವು ನನಗೆ ತೋರಿಸಬೇಕೆಂದು, ಆಜಾದ್ ಅವರ ಹಿಂಸಾಚಾರಕ್ಕೆ ಯಾವುದೇ ಪುರಾವೆಗಳಿವೆಯೇ ಎಂದು ನ್ಯಾಯಾಧೀಶರು ಪ್ರಾಸಿಕ್ಯೂಟರ್ ಅವರನ್ನು ಕೇಳಿದರು.

ಅಂದರೆ ಪುರಾವೆಗಳನ್ನು ಸಂಗ್ರಹಿಸಲಾರದಷ್ಟು ನಮ್ಮ ದೆಹಲಿ ಪೊಲೀಸರು ಹಿಂದುಳಿದಿದ್ದಾರೆಯೇ? ಎಂತಹ ಸಣ್ಣ ಕೇಸುಗಳನ್ನು ಸಾಕ್ಷಿಗಳನ್ನು ಸಂಗ್ರಹಿಸುವ ಪೊಲೀಸರು ಈ ಕೇಸಿನಲ್ಲಿ ಯಾಕೆ ಸಂಗ್ರಹಿಸಿಸಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಚಂದ್ರಶೇಖರ್‌ ಅಜಾದ್‌ರನ್ನು ಬಂಧಿಸುವಂತಹ ಯಾವುದೇ ಪ್ರಕರಣಗಳು ನಡೆದಿಲ್ಲ, ಭಿನ್ನಾಭಿಪ್ರಾಯವನ್ನು ಹತ್ತಿಕ್ಕಲು ಬಂಧಿಸಲಾಗಿದೆ ಎಂದು ಆಜಾದ್ ಪರ ವಕೀಲ ಪ್ರಾಚಾ ವಾದ ಮಂಡಿಸಿದರು.

ಈ ಸಮಯದಲ್ಲಿ ಪ್ರಾಸಿಕ್ಯೂಟರ್, ಆಜಾದ್ ಉಗ್ರ ಭಾಷಣಗಳನ್ನು ಮಾಡಿದ ಬಗ್ಗೆ “ಡ್ರೋನ್ ಫೂಟೇಜ್” ಪುರಾವೆಗಳಿವೆ ಎಂದು ಹೇಳಿದರು. ಇದನ್ನು ನಿರಾಕರಿಸಿದ ಪ್ರಾಚಾ, ಧರಣದ ಸಮಯದಲ್ಲಿ ಆಜಾದ್ ಕೇವಲ ಸಂವಿಧಾನವನ್ನು ಓದುತ್ತಿದ್ದಾನೆ ಮತ್ತು ಸಿಎಎ, ಎನ್‌ಆರ್‌ಸಿ ವಿರುದ್ಧ ಮಾತನಾಡುತ್ತಿದ್ದಾನೆ ಎಂದು ಹೇಳಿದರು.

“ವಸಾಹತುಶಾಹಿ ಯುಗದಲ್ಲಿ ಪ್ರತಿಭಟನೆಗಳು ರಸ್ತೆಗಿಳಿದವು. ಆದರೆ ನಿಮ್ಮ ಪ್ರತಿಭಟನೆಯು ನ್ಯಾಯಾಲಯಗಳ ಒಳಗೆ ಕಾನೂನುಬದ್ಧವಾಗಿರಬಹುದು. ಸಂಸತ್ತಿನ ಒಳಗೆ ಹೇಳಬೇಕಾದ ವಿಷಯಗಳನ್ನು ಹೇಳಲಾಗಿಲ್ಲ ಮತ್ತು ಅದಕ್ಕಾಗಿಯೇ ಜನರು ಬೀದಿಗಿಳಿದಿದ್ದಾರೆ. ನಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಸಂಪೂರ್ಣ ಹಕ್ಕು ನಮಗಿದೆ ಆದರೆ ನಮ್ಮ ದೇಶವನ್ನು ನಾಶಮಾಡಲು ಸಾಧ್ಯವಿಲ್ಲ” ಎಂದು ನ್ಯಾಯಾಧೀಶರು ಹೇಳಿದ್ದಾರೆ.

ಅಜಾದ್‌ಗೆ ಉದ್ದೇಶಪೂರ್ವಕವಾಗಿ ಹಾನಿಯಾಗುತ್ತಿದೆ ಎಂದು ಆಜಾದ್ ವಕೀಲ ಪ್ರಾಚಾ ಹೇಳಿದ್ದಾರೆ. ನ್ಯಾಯಾಲಯದ ನಿರ್ದೇಶನವಿದ್ದರೂ ಸಹ ಅಜಾದ್‌ಗೆ ಅಗತ್ಯವಾದ ವೈದ್ಯಕೀಯ ಚಿಕಿತ್ಸೆ ಸಹ ನೀಡಲಾಗಿಲ್ಲ ಎಂದು ಪ್ರಚಾ ಗಮನಸೆಳೆದರು.

ನಂತರ ನ್ಯಾಯಾಧೀಶರು ಪ್ರಾಸಿಕ್ಯೂಟರ್ ಕೋರಿಕೆಯ ಮೇರೆಗೆ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2 ರವರೆಗೆ ಮುಂದೂಡಿದರು.. ಬಹುಶಃ ನಾಳೆ ಅಜಾದ್‌ಗೆ ಜಾಮೀನು ದೊರೆಯುವ ಸಾಧ್ಯತೆ ನಿಚ್ಚಳವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ದೇಶದಲ್ಲಿ ಸಂವಿಧಾನದಡಿಯಲ್ಲಿ ಹೋರಾಟ ಮಾಡುವವರು ಕಡಿಮೆ ಅದರಲ್ಲೂ ವಿಶೇಷ ಸಂದರ್ಶನ ಭೀಮ್ ಆರ್ಮಿ ಚೀಫ್ ಚಂದ್ರಶೇಖರ್ ರಾವಣ್ ಆಜಾದ್ ರವರು
    ನ್ಯಾಯಬದ್ಧ ಕಾನೂನಿನ ಚೌಕಟ್ಟು ಒಳಪಡುವ ಸಂವಿಧಾನದ ಹಕ್ಕುಗಳಿಗೆ ನ್ಯಾಯ ತವಾಗಿ ಹೋರಾಡುತ್ತಿದ್ದಾರೆ ಅವರ ಏಳಿಗೆಯ ಸೈರಿಸಲಾರದವರು
    ಉದ್ದೇಶಪೂರ್ವಕವಾಗಿ ಬಂದೀಖಾನೆಯಲ್ಲಿ ಇಡುವ ವ್ಯವಸ್ಥೆಯನ್ನು ಸಂವಿಧಾನದ ವಿರುದ್ಧ ರೂಪಿಸಿಕೊಂಡಿರುತ್ತದೆ ಹೊರತು ನ್ಯಾಯಯುತವಲ್ಲ

    ಬೇನಾಮಿ ಆಸ್ತಿ ಬ್ಲಾಕ್ಮನಿ ಅಕ್ರಮ ಹಣ ವರ್ಗಾವಣೆ ಸಂವಿಧಾನದ ಅಡಿಯಲ್ಲಿ ನ್ಯಾಯಕ್ಕೆ ವಿರುದ್ಧವಾಗಿರುವ ಎಲ್ಲರಿಗೂ ದೋಷಮುಕ್ತರಾಗಿ ಹೊರಗೆ ಬರುತ್ತಾರೆ

    ಸಾರ್ವಜನಿಕರಿಗಾಗಿ ಸಂವಿಧಾನದ ಕಾನೂನಿನ ಮಾರ್ಗದರ್ಶಕರಾಗಿ ಸಮಾಜ ನಾಗರಿಕರಿಗೆ ತಿಳಿಯಪಡಿಸುವ ವ್ಯಕ್ತಿಯನ್ನು ಅಕ್ರಮವಾಗಿ ಬಂದೀಖಾನೆಗೆ ರವಾನಿಸುತ್ತಾರೆ

    ಜೈ ಭೀಮ್ ಜೈ ಚಂದ್ರಶೇಖರ್ ರಾವಣ್ಆಜಾದ್ ಸರ್
    ಜೈ ಸಂವಿಧಾನ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...