Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...