Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...