Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...