Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...