Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....