Homeಮುಖಪುಟಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

ಸಂಕಷ್ಟದಲ್ಲಿ ನರೇಗ ನಂಬಿದ ಜನಸಮೂಹ: ಕೇಂದ್ರ ನೀಡಿದ ನಿಧಿ ಆರು ತಿಂಗಳಿಗೇ ಖಾಲಿ!

`ಲಾಕ್‌ಡೌನ್‌ ತೆರವಿನ ಬಳಿಕ ನಿಧಿಯನ್ನು ಕಡಿತಗೊಳಿಸಿದ್ದೇ ಈ ಸಮಸ್ಯೆಗೆ ಕಾರಣ'

- Advertisement -
- Advertisement -

ಕೋವಿಡ್‌‌ ಸಮಯದಲ್ಲಿ ಗ್ರಾಮಗಳಿಗೆ ಮರಳಿದ ಬಹುದೊಡ್ಡ ಜನಸಮೂಹವನ್ನು ಕೈ ಹಿಡಿದದ್ದು ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಕಾಮಗಾರಿಗಳು. ಆದರೆ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದ ನರೇಗ ಕಾಮಗಾರಿಗಳು ಹಳ್ಳ ಹಿಡಿಯುತ್ತಿದೆ ಎಂದು ‘ದಿ ಹಿಂದೂ’ ಪತ್ರಿಕೆ ವರದಿ ಮಾಡಿದೆ.

ಕೋವಿಡ್‌ ಲಾಕ್‌ಡೌನ್‌ ಸಮಯದಲ್ಲಿ ಜನರಿಗೆ  ಉದ್ಯೋಗವನ್ನು ನೀಡಿ ಕಾಪಾಡಿದ್ದ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಗೆ ಕೋವಿಡ್ ಸಮಯದಲ್ಲಿ 1.11 ಲಕ್ಷ ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರ ವಿನಿಯೋಗಿಸಿತ್ತು. 11 ಕೋಟಿ ಜನರಿಗೆ ಉದ್ಯೋಗ ದೊರಕಿತ್ತು.

ಆದಾಗ್ಯೂ ನರೇಗ ಯೋಜನೆಯ 2021-22ರ ಬಜೆಟ್ ಅನ್ನು ಕೇವಲ ₹73,000 ಕೋಟಿಗೆ ನಿಗದಿಪಡಿಸಲಾಗಿದೆ. ರಾಷ್ಟ್ರವ್ಯಾಪಿ ಲಾಕ್‌ಡೌನ್ ಮುಗಿದಿದೆ ಮತ್ತು ಹಣ ಖಾಲಿಯಾದರೆ ಪೂರಕ ಬಜೆಟ್ ಹಂಚಿಕೆಗಳು ಲಭ್ಯವಿರುತ್ತವೆ ಎಂದು ಸರ್ಕಾರ ವಾದಿಸುತ್ತಿದೆ.

ಅಕ್ಟೋಬರ್ 29ರ ಹೊತ್ತಿಗೆ ಪಾವತಿಸಬೇಕಾದ ಮೊತ್ತವು ಸೇರಿದಂತೆ ಒಟ್ಟು ವೆಚ್ಚವು ಈಗಾಗಲೇ ₹79,810 ಕೋಟಿಗಳನ್ನು ತಲುಪಿದೆ. ಈ ಬೆಳವಣಿಗೆ ನರೇಗವನ್ನು ಹಳ್ಳ ಹಿಡಿಸುತ್ತಿದೆ. ಈಗಾಗಲೇ, 21 ರಾಜ್ಯಗಳು ಋಣಾತ್ಮಕ ನಿವ್ವಳ ಸಮತೋಲನವನ್ನು ಎದುರಿಸುತ್ತಿವೆ. ಆಂಧ್ರಪ್ರದೇಶ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಪರಿಸ್ಥಿತಿ ಶೋಚನೀಯವಾಗಿದೆ.

“ನಾವು ನರೇಗವನ್ನು ವರ್ಷದ ಅರ್ಧದಾರಿಯಲ್ಲೇ ಮುಚ್ಚುವ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ. ವೆಚ್ಚವನ್ನು ಯಾರು ಭರಿಸುತ್ತಾರೆ? ಸಾಂಕ್ರಾಮಿಕ ರೋಗದ ಪ್ರಭಾವದಿಂದ ಬಡ ಮತ್ತು ಅತ್ಯಂತ ದುರ್ಬಲ ಸಮುದಾಯಗಳು ನಲುಗಿ ಹೋಗಿವೆ” ಎಂದು ಮಜ್ದೂರ್ ಕಿಸಾನ್ ಶಕ್ತಿ ಸಂಘಟನೆಯ ಸಂಸ್ಥಾಪಕ ನಿಖಿಲ್ ಡೇ ಹೇಳಿದ್ದಾರೆ.

ಇದನ್ನೂ ಓದಿರಿ: ಗುಜರಾತ್: ರಾಮಮಂದಿರ ಪ್ರವೇಶಿಸಿದ ದಲಿತ ಕುಟುಂಬಕ್ಕೆ ಮಾರಣಾಂತಿಕ ಹಲ್ಲೆ

ಸುಪ್ರೀಂ ಕೋರ್ಟ್‌ನ ತೀರ್ಪನ್ನು ಉಲ್ಲೇಖಿಸಿರುವ ನಿಖಿಲ್‌ ಡೇ, “ನರೇಗ ಅಡಿ ಬಾಕಿ ಉಳಿಸಿಕೊಂಡಿರುವ ವೇತನ ಪಾವತಿಯು ಸರ್ಕಾರದಿಂದಾದ ಸ್ಪಷ್ಟ ಸಾಂವಿಧಾನಿಕ ಉಲ್ಲಂಘನೆಯಾಗಿದೆ. ಇದು ಭಿಕ್ಷುಕನ ಆಧುನಿಕ ರೂಪ” ಎಂದಿದ್ದಾರೆ.

“ಭಾರತ ಸರಕಾರವು ಮೇಲ್ನೋಟಕ್ಕೆ, ಕೋಟ್ಯಂತರ ಜನರನ್ನು ಬಲವಂತದ ದುಡಿಮೆಗೆ ತಳ್ಳುತ್ತಿದೆ ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಸಿದೆ” ಎಂದು ನಿಖಿಲ್‌ ಡೇ ಹೇಳುತ್ತಾರೆ.

“ಈ ವರ್ಷ ಸ್ವಲ್ಪ ಮುಂಚಿತವಾಗಿಯೇ ನಿಧಿಯ ಕೊರತೆಯಿದೆ” ಎಂದು ಹೆಸರು ಹೇಳಲು ಇಚ್ಛಿಸದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಒಪ್ಪಿಕೊಂಡಿದ್ದಾರೆ ಎಂದು ದಿ ಹಿಂದೂ ಪತ್ರಿಕೆ ವರದಿ ಮಾಡಿದೆ.

“ಜನರಿಗೆ ಉದ್ಯೋಗ ದೊರಕುತ್ತದೆ. ಆದರೆ ಹಣ ಲಭ್ಯವಾದ ನಂತರ ಮಾತ್ರ ಪಾವತಿಯನ್ನು ಮಾಡಲಾಗುತ್ತದೆ. ಅನೇಕ ರಾಜ್ಯಗಳು ತಮ್ಮ ಖಾತೆಯಿಂದ ತಾತ್ಕಾಲಿಕ ಹಣವನ್ನು ಒದಗಿಸಬಹುದು. ನಿಧಿ ಲಭ್ಯವಾದ ಬಳಿಕ, ಅದನ್ನು [ಕೇಂದ್ರದಿಂದ] ಮರುಪಾವತಿ ಮಾಡಿಕೊಳ್ಳಬಹುದು” ಎಂದು ಸಲಹೆ ನೀಡಿದ್ದಾರೆ.

“ಪ್ರಸ್ತುತ ಪರಿಸ್ಥಿತಿಗೆ ರಾಜ್ಯ ಸರ್ಕಾರಗಳು ಕಾರಣ” ಎಂದು ಅಧಿಕಾರಿ ದೂರಿದ್ದಾರೆ. “ರಾಜ್ಯಗಳು ಇದನ್ನು ಬೇಡಿಕೆ ಚಾಲಿತ ಯೋಜನೆಯಾಗಿ ಬಳಸುತ್ತಿಲ್ಲ, ಆದರೆ ಪೂರೈಕೆ ಆಧಾರಿತ ಯೋಜನೆಯಾಗಿ ಬಳಸುತ್ತಿವೆ ಎಂಬುದು ನನ್ನ ಆತಂಕ. ಕೃತಕವಾಗಿ ಬೇಡಿಕೆಯನ್ನು ಸೃಷ್ಟಿಸಲು ತಮ್ಮ ಕ್ಷೇತ್ರದ ಅಧಿಕಾರಿಗಳಿಗೆ ಸರ್ಕಾರಗಳು ಹೇಳುತ್ತಿವೆ” ಎಂದಿದ್ದಾರೆ.

“ಯೋಜನೆಯ ಸ್ವರೂಪವೆಂದರೆ ಜನರು ಒಮ್ಮೆ ಬಂದು ಉದ್ಯೋಗಕ್ಕಾಗಿ ಬೇಡಿಕೆಯಿಟ್ಟರೆ, ನಂತರ ಬೇಡಿಕೆಯನ್ನು ಸ್ವೀಕರಿಸಲಾಗುತ್ತದೆ” ಎಂದು ಅಧಿಕಾರಿ ಹೇಳಿದ್ದಾರೆ.

ಇದಕ್ಕೆ ತದ್ವಿರುದ್ಧವಾಗಿ ವಾಸ್ತವಗಳಿವೆ ಎನ್ನುತ್ತಾರೆ ಕಾರ್ಯಕರ್ತರು. ಕೆಲಸಕ್ಕಾಗಿ ಬೇಡಿಕೆಯಿರುವ ಶೇ. 13ರಷ್ಟು ಕುಟುಂಬಗಳಿಗೆ ಕೆಲಸ ನೀಡಲಾಗಿಲ್ಲ ಎಂಬುದನ್ನು ನರೇಗ ದತ್ತಾಂಶವು ಹೇಳುತ್ತದೆ. “ಈ ಅಂಕಿಅಂಶಗಳೂ ವಾಸ್ತವವಾಗಿಲ್ಲ. ನೋಂದಾಯಿಸಲಾದ ಬೇಡಿಕೆಯನ್ನು ಮಾತ್ರ ನರೇಗ ದತ್ತಾಂಶದಲ್ಲಿ ಸೇರಿಸಲಾಗಿದೆ. ಅನೇಕ ಕಾರ್ಮಿಕರು ಕೆಲಸಕ್ಕಾಗಿ ಬೇಡಿಕೆಯಿಟ್ಟಾಗ, ಅವರ ಬೇಡಿಕೆಯನ್ನು ನೋಂದಾಯಿಸದೆ ಅಧಿಕಾರಿಗಳು ಸುಮ್ಮನೆ ತಿರುಗುತ್ತಾರೆ” ಎಂದು ಉದ್ಯೋಗ ಖಾತರಿಗಾಗಿ ಪೀಪಲ್ಸ್ ಆಕ್ಷನ್‌ನ ಸಂಶೋಧಕ ವಿಜಯ್ ರಾಮ್ ಆರೋಪಿಸಿದ್ದಾರೆ.


ಇದನ್ನೂ ಓದಿರಿ: ಜನರ ಜೀವದೊಂದಿಗೆ ಚೆಲ್ಲಾಟ ಆಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...