Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...