Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...