Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಎಸ್‌ಐಆರ್‌’ನಿಂದ ಹೆಸರು ಡಿಲೀಟ್‌ ಆದವರಿಗೆ ‘ಹೊಸ ಮತದಾರರ ನೋಂದಣಿ’ ಯಾಕೆ?

ಅಂತಿಮ ಮತದಾರರ ಪಟ್ಟಿಯಲ್ಲಿ ಹೆಸರು ಕಾಣೆಯಾಗಿದ್ದರೆ ನಮೂನೆ ಸಂಖ್ಯೆ 6 ಅನ್ನು (Form No. 6) ಸಲ್ಲಿಸಿ ಎಂದು ಜುಲೈ 22 ರಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಮುಖ್ಯ ಚುನಾವಣಾ...

ನೀಟ್ ವಿರುದ್ಧ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ : ಸಭಾತ್ಯಾಗ ಮಾಡಿದ ಬಿಜೆಪಿಯ ಏಕೈಕ ಶಾಸಕ

ತಮಿಳುನಾಡು ವಿಧಾನಸಭೆಯು ಮಂಗಳವಾರ (ಆ.11) ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ರದ್ದುಗೊಳಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಿದೆ. ಪರೀಕ್ಷೆಗಳನ್ನು ನಡೆಸುವಲ್ಲಿ ಪದೇ ಪದೇ...

‘ಬಹುಸಂಖ್ಯಾತ ಭಾವನೆಯು ಸಾಂವಿಧಾನಿಕ ಹಕ್ಕುಗಳನ್ನು ಮರೆಮಾಡಲು ಸಾಧ್ಯವಿಲ್ಲ’: ಇಸ್ಲಾಂ ಧರ್ಮ ಸ್ವೀಕರಿಸಿದ್ದ ಸಹೋದರಿಯರ ಅಕ್ರಮ ಬಂಧನಕ್ಕೆ ಅಲಹಾಬಾದ್ ಹೈಕೋರ್ಟ್ ತೀವ್ರ ತರಾಟೆ

ಹಿಂದೂ ಧರ್ಮದಿಂದ ಸ್ವಯಂಪ್ರೇರಿತವಾಗಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡ ನಂತರ, ಸ್ವಂತ ತಂದೆ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರದ ಅಕ್ರಮ ಹಸ್ತಕ್ಷೇಪದಿಂದಾಗಿ ವರ್ಷಗಳ ಕಾಲ ತಮ್ಮ ಮೂಲಭೂತ ಸ್ವಾತಂತ್ರ್ಯವನ್ನು ಕಳೆದುಕೊಂಡಿದ್ದ ಇಬ್ಬರು ವಯಸ್ಕ...

ಸಂವಿಧಾನಬದ್ಧ ದಾಖಲೆಗಳಿದ್ದರೂ ಪಶ್ಚಿಮ ಬಂಗಾಳದ ಮುಸ್ಲಿಂ ಮಹಿಳೆ ‘ಒಳನುಸುಳುಕೋರ’ರೆಂದು ಬಾಂಗ್ಲಾಕ್ಕೆ ಗಡೀಪಾರು: ಭಾರತದಲ್ಲೇ ಉಳಿದ ಪತಿ, ಇಬ್ಬರು ಮಕ್ಕಳು

ಭಾರತೀಯ ಪೌರತ್ವವನ್ನು ಸ್ಪಷ್ಟವಾಗಿ ಸಾಬೀತುಪಡಿಸುವ ಜನನ ಪ್ರಮಾಣಪತ್ರ, ಮತದಾರರ ಗುರುತಿನ ಚೀಟಿ, ಪ್ಯಾನ್ ಕಾರ್ಡ್ ಮತ್ತು ಸ್ವಂತ ಭೂಮಿಯ ದಾಖಲೆಗಳು ಕೈಯಲ್ಲಿದ್ದರೂ, ಪಶ್ಚಿಮ ಬಂಗಾಳದ 40 ವರ್ಷದ ಮುಸ್ಲಿಂ ಮಹಿಳೆಯೊಬ್ಬರನ್ನು 'ಒಳನುಸುಳುಕೋರ' ಎಂಬ...

SIR ನಂತರ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ : ನಟ ಪ್ರಕಾಶ್ ರಾಜ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ನಂತರ ಬೆಂಗಳೂರಿನಲ್ಲಿ ಮತದಾರರ ಪಟ್ಟಿಯಿಂದ ನನ್ನ ಹೆಸರು ಡಿಲೀಟ್ ಆಗಿದೆ ಎಂದು ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್ ಆರೋಪಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಂಡಿರುವ...

ಸರ್ಕಾರಿ ಶಾಲೆಗಳ ಸುಧಾರಣೆಗೆ ದೇಶಾದ್ಯಂತ ಅಭಿಯಾನ ಘೋಷಿಸಿದ ಅಭಿಜೀತ್ ದೀಪ್ಕೆ

ಗ್ರಾಮೀಣ ಪ್ರದೇಶಗಳಲ್ಲಿನ ಸರ್ಕಾರಿ ಶಾಲೆಗಳನ್ನು ಸುಧಾರಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ರಾಷ್ಟ್ರವ್ಯಾಪಿ ಅಭಿಯಾನ ಘೋಷಿಸಿದ್ದಾರೆ. "ಪೋಷಕರು ಶಾಲೆಗಳ ಮೂಲಭೂತ ಸೌಲಭ್ಯಗಳ ಸಾಮಾಜಿಕ ಲೆಕ್ಕಪರಿಶೋಧನೆ ನಡೆಸಬೇಕು, ಶಾಲೆಗಳನ್ನು ಸುಧಾರಿಸುವ...

ಕರ್ನಾಟಕದ ASDDO ಸಂಖ್ಯೆ 3 ಲಕ್ಷದಷ್ಟು ಇಳಿಕೆ : SIR ಪ್ರಕ್ರಿಯೆ ಬಗ್ಗೆಯೇ ಪ್ರಶ್ನೆಗಳನ್ನು ಹುಟ್ಟುಹಾಕಿದ ವರದಿ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಲ್ಲಿ ಇದುವರೆಗಿನ ಅತಿ ದೊಡ್ಡ ತಿದ್ದುಪಡಿ ಕರ್ನಾಟಕದಲ್ಲಿ ಆಗಿದ್ದು, ಮತದಾನದ ಹಕ್ಕನ್ನು ಕಳೆದುಕೊಳ್ಳುವ ಹಂತದಲ್ಲಿದ್ದ ಸುಮಾರು 3 ಲಕ್ಷ ಜನರನ್ನು ಮತ್ತೆ ಮತದಾರರ ಪಟ್ಟಿಗೆ...

ವಸತಿಗೃಹದಲ್ಲಿ ಹೋಮ-ಪೂಜೆ ಆಯೋಜನೆ; ಬಾಗಲಕೋಟೆ ತೋಟಗಾರಿಕೆ ವಿವಿ ಕುಲಪತಿಗಳಿಂದ ಅಧಿಕಾರ ದುರುಪಯೋಗ

ಬಾಗಲಕೋಟೆಯಲ್ಲಿರುವ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಸತಿಗೃಹದಲ್ಲಿ ಧಾರ್ಮಿಕ ಪೂಜಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ಕಾರ್ಯಕ್ರಮಕ್ಕೆ ವಿಶ್ವವಿದ್ಯಾಲಯದ ಅಧಿಕೃತ‌ ಲೆಟರ್‌ಹೆಡ್‌ ಮೂಲಕ ಆಹ್ವಾನವನ್ನೂ ಹೊರಡಿಸುವ ಮೂಲಕ ಕುಲಪತಿ ಡಾ. ವಿಷ್ಣುವರ್ಧನ ಅವರು ಅಧಿಕಾರ ದುರುಪಯೋಗ...

ಕಪ್ಪು ಕುರ್ತಾ-ಪೈಜಾಮ ಧರಿಸಿದ್ದ ಕಲಾವಿದನಿಗೆ ಥಳಿಸಿದ ಹಿಂದುತ್ವ ಗುಂಪು: ಮುಸ್ಲಿಂ ಎಂದು ಶಂಕಿಸಿ ಅಮಾನವೀಯ ಹಲ್ಲೆ

ರಂಗಭೂಮಿ ಕಲಾವಿದರೊಬ್ಬರು ಕಪ್ಪು ಕುರ್ತಾ-ಪೈಜಾಮ ಧರಿಸಿದ್ದಕ್ಕಾಗಿ ಮುಸ್ಲಿಂ ಎಂದು ಶಂಕಿಸಿ ಹಿಂದುತ್ವ ಯುವಕರ ಗುಂಪೊಂದು ಅವರನ್ನು ಕ್ರೂರವಾಗಿ ಥಳಿಸಿರುವ ಘಟನೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ. ಶುಭಂಕರ್ ದಾಸ್ ಶರ್ಮಾ...

SIR: ಚುನಾವಣಾ ಆಯೋಗ ನೀಡಿದ ಅಂಕಿ ಅಂಶಕ್ಕೂ, ಬೆಂಗಳೂರು ಮತದಾರರ ಪಟ್ಟಿಗೂ ತಲೆಬುಡವಿಲ್ಲ, ಮತ ಕಾವಲು ಸಮಿತಿ ಆರೋಪ

ರಾಜ್ಯದಲ್ಲಿ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹಕ್ಕುಗಳನ್ನು ಕಸಿಯಲಾಗುತ್ತಿದ್ದು, ಬೆಂಗಳೂರು ನಗರದ ಶೇಕಡಾ 48.41 ರಷ್ಟು—ಅಂದರೆ ಸುಮಾರು ಇಬ್ಬರಲ್ಲಿ ಒಬ್ಬ ಮತದಾರನನ್ನು—ಆಗಸ್ಟ್ 17ರ ಒಳಗಾಗಿ ಮತದಾರರ...