Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...