Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...