Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...