Homeಮುಖಪುಟನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

ನರೇಗಾ ಬಾಕಿ: ನಿರ್ಮಲಾ ಸೀತಾರಾಮನ್‌ರಿಗೆ ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದ ಟಿಎಂಸಿ ಸಂಸದ

- Advertisement -
- Advertisement -

ಕರ್ನಾಟಕದ ಬಳಿಕ ಪಶ್ಚಿಮ ಬಂಗಾಳ ಸರ್ಕಾರ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಕೇಂದ್ರದ ಅನುದಾನದ ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಸವಾಲ್ ಹಾಕಿದೆ.

“ಕರ್ನಾಟಕಕ್ಕೆ ಕೇಂದ್ರದಿಂದ ಕೊಡಬೇಕಿದ್ದ ಹಣದ ಪೈಕಿ ಒಂದೊಂದು ಪೈಸೆಯನ್ನೂ ಬಾಕಿ ಉಳಿಸದೆ ಸರಿಯಾದ ಸಮಯಕ್ಕೆ ನೀಡಿದ್ದೇವೆ” ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದರು. ಈ ಹೇಳಿಕೆ ಸುಳ್ಳು ಎಂದು ದಾಖಲೆ ಬಿಡುಗಡೆ ಮಾಡಿದ್ದ ರಾಜ್ಯದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, “ಮುಖಾಮುಖಿ ಚರ್ಚೆಗೆ ನಾನು ಸಿದ್ದ, ನೀವು ಬನ್ನಿ” ಎಂದು ನಿರ್ಮಲಾ ಸೀತಾರಾಮನ್ ಅವರಿಗೆ ಪಂಥಾಹ್ವಾನ ನೀಡಿದ್ದಾರೆ.

ಇಂದು (ಏ.6) ಬೆಂಗಳೂರಿನ ಗಾಂಧಿ ಭವನದಲ್ಲಿ ಸಂಜೆ 5 ಗಂಟೆಗೆ ರಾಜ್ಯ ಸರ್ಕಾರ ಮತ್ತು ಕೇಂದ್ರ ವಿತ್ತ ಸಚಿವೆಯ ನಡುವಿನ ಮುಖಾಮುಖಿ ಚರ್ಚೆಗೆ ವೇದಿಕೆ ಸಿದ್ದವಾಗಿದೆ.

ಈ ನಡುವೆ ಪಶ್ಚಿಮ ಬಂಗಾಳದ ನರೇಗಾ ಯೋಜನೆಯ ಕುರಿತು ನಿರ್ಮಲಾ ಸೀತಾರಾಮನ್ ಸುಳ್ಳು ಹೇಳಿದ್ದಾರೆ ಎಂದು, ಅಲ್ಲಿನ ಆಡಳಿತರೂಢ ಟಿಎಂಸಿ ಪಕ್ಷದ ರಾಜ್ಯಸಭಾ ಸಂಸದ ಸಾಕೇತ್ ಗೋಖಲೆ ಆರೋಪಿಸಿದ್ದು, ಅಂಕಿ ಅಂಶಗಳನ್ನು ಬಿಡುಗಡೆ ಮಾಡಿ ಬಹಿರಂಗ ಚರ್ಚೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಬರೆದುಕೊಂಡಿರುವ ಸಾಕೇತ್ ಗೋಖಲೆ, “ಫೆಬ್ರವರಿಯಲ್ಲಿ ಕೋಲ್ಕತ್ತಾದಲ್ಲಿ ಆಯೋಜಿಸಿದ್ದ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳ” ಕಾರಣದಿಂದ ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಹಣವನ್ನು ಮೋದಿ ಸರ್ಕಾರ ತಡೆ ಹಿಡಿದಿದೆ ಎಂದು ಹೇಳಿದ್ದರು ಎಂದಿದ್ದಾರೆ.

ನಿರ್ಮಲಾ ಸೀತಾರಾಮನ್ ಭಾಷಣದಲ್ಲಿ “ಬಾಪ್ ಕಾ ಪೈಸಾ ಹೈ ಕ್ಯಾ (ಇದು ನಿಮ್ಮ ಅಪ್ಪನ ಹಣವೇ)?” ಎಂದು ಕೀಳು ಭಾಷೆ ಬಳಸಿ ಬಂಗಾಳದ ಬಡ ಕಾರ್ಮಿಕರನ್ನು ಕ್ರೂರವಾಗಿ ಅಪಹಾಸ್ಯ ಮಾಡಿದ್ದರು ಎಂದು ಹೇಳಿದ್ದಾರೆ.

ಆದರೆ, ಅವರದ್ದೇ ಸರ್ಕಾರದ ಸಾರ್ವಜನಿಕ ಡೇಟಾ ಬೇರೆಯದ್ದೇ ಹೇಳುತ್ತಿದೆ. ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಪ್ರಕಾರ, ಪಶ್ಚಿಮ ಬಂಗಾಳದಲ್ಲಿ ಒಟ್ಟು 1,36,62,600 ನರೇಗಾ ಜಾಬ್ ಕಾರ್ಡ್‌ಗಳನ್ನು ನೀಡಲಾಗಿದೆ. ಇವುಗಳಲ್ಲಿ 1,36,58,541 ಜಾಬ್ ಕಾರ್ಡ್‌ಗಳನ್ನು ಪರಿಶೀಲಿಸಲಾಗಿದೆ. ಅಂದರೆ, ಒಟ್ಟು ಶೇ. 99.97 ಪರಿಶೀಲಿಸಲಾಗಿದೆ. ಅಂದರೆ, ಬಂಗಾಳದಲ್ಲಿ 1.36 ಕೋಟಿ ಜಾಬ್ ಕಾರ್ಡ್‌ಗಳಲ್ಲಿ 4,059 ಮಾತ್ರ ಪರಿಶೀಲಿಸಲಾಗಿಲ್ಲ. ಹೀಗಿರುವಾಗ ಪಶ್ಚಿಮ ಬಂಗಾಳದ ಬಗ್ಗೆ ಸಾರ್ವಜನಿಕವಾಗಿ ಸುಳ್ಳು ಹೇಳಿದಾಗ ಹಣಕಾಸು ಸಚಿವರು ಏನು ಯೋಚಿಸುತ್ತಿದ್ದರು? ಯಾರೂ ಪರಿಶೀಲಿಸಲು ಹೋಗುವುದಿಲ್ಲ ಎಂದು ಅವರು ಭಾವಿಸಿದ್ರಾ? ಎಂದು ಸಾಕೇತ್ ಗೋಖಲೆ ಪ್ರಶ್ನಿಸಿದ್ದಾರೆ.

ಮೋದಿ ಸರ್ಕಾರ ನಕಲಿ ‘ಜಾಬ್ ಕಾರ್ಡ್‌’ ಸಬೂಬು ಹೇಳಿ 21 ಲಕ್ಷಕ್ಕೂ ಅಧಿಕ ಬಡ ನರೇಗಾ ಕಾರ್ಮಿಕರು ವೇತನದಿಂದ ವಂಚಿತರಾಗುವಂತೆ ಮಾಡಿದೆ. ಪಶ್ಚಿಮ ಬಂಗಾಳದ 7000 ಕೋಟಿ ರೂ.ಗೂ ಹೆಚ್ಚು ಬಾಕಿಯನ್ನು ತಡೆ ಹಿಡಿದಿದ್ದಾರೆ. 10 ವರ್ಷಗಳ ಕಾಲ ಅಧಿಕಾರದಲ್ಲಿರುವುದರಿಂದ ಕೇವಲ ಹಣಕಾಸು ಸಚಿವರಷ್ಟೇ ಅಲ್ಲ, ಸ್ವತಃ ಮೋದಿ ಸೇರಿದಂತೆ ಹಲವಾರು ಕೇಂದ್ರ ಸಚಿವರ ತಲೆಯಲ್ಲಿ ದುರಹಂಕಾರ ತುಂಬಿದೆ ಎಂದು ಗೋಖಲೆ ಕಿಡಿಕಾರಿದ್ದಾರೆ.

ನಿರ್ಮಲಾ ಸೀತಾರಾಮನ್ ಬಂಗಾಳದ ಕುರಿತು ಹಸಿ ಸುಳ್ಳು ಹೇಳಿದ್ದಾರೆ. ಬಳಿಕ ಅದನ್ನು ಸಮರ್ಥಿಸಲು ಸೊಕ್ಕಿನ ಮಾತುಗಳನ್ನು ಆಡಿದ್ದಾರೆ. ಹಾಗಾಗಿ, ಬಂಗಾಳದ ನರೇಗಾ ಯೋಜನೆಯ ಕುರಿತು ದಾಖಲೆ ಸಹಿತ ಬಹಿರಂಗ ಚರ್ಚೆಗೆ ನಾನು ನಿರ್ಮಲಾ ಸೀತಾರಾಮನ್ ಅವರನ್ನು ಆಹ್ವಾನಿಸುತ್ತೇನೆ. ನಿಮಗೆ ಏನಾದರು ನೈತಿಕತೆ ಇದ್ದರೆ ಚರ್ಚೆಗೆ ಬನ್ನಿ. ದೇಶದ ಜನರಿಗೆ ಸತ್ಯ ಗೊತ್ತಾಗಲಿ ಎಂದು ಗೋಖಲೆ ಪಂಥಾಹ್ವಾನ ನೀಡಿದ್ದಾರೆ.

ಪಶ್ಚಿಮ ಬಂಗಾಳದ ನರೇಗಾ ಬಾಕಿ ತಡೆ ಹಿಡಿಯಲು “ನಕಲಿ ಜಾಬ್ ಕಾರ್ಡ್‌ಗಳು ಮತ್ತು ಫಲಾನುಭವಿಗಳು” ಕಾರಣ ಎಂದು ನೀವು ಸುಳ್ಳು ಯಾಕೆ ಹೇಳಿದ್ದು? “ಬಾಪ್ ಕಾ ಪೈಸಾ ಹೈ ಕ್ಯಾ?” ಎಂದು ಹೇಳುವ ಮೂಲಕ ಬಂಗಾಳದ ಬಡ ಕಾರ್ಮಿಕರನ್ನು ಅವಮಾನಿಸುವ ಮತ್ತು ಸೊಕ್ಕಿನ ಪದಗಳನ್ನು ಬಳಸುವ ಮುನ್ನ ನಿಮ್ಮ ಸ್ವಂತ ಸರ್ಕಾರದಿಂದ ನೀವು ಸತ್ಯಗಳನ್ನು ಏಕೆ ಪರಿಶೀಲಿಸಲಿಲ್ಲ? ನಿಮ್ಮಲ್ಲಿ ಉತ್ತರವಿಲ್ಲದಿದ್ದರೆ ಪಶ್ಚಿಮ ಬಂಗಾಳದ ಜನರಲ್ಲಿ ಕ್ಷಮೆಯಾಚಿಸಿ ಮತ್ತು ರಾಜ್ಯದ ಬಾಕಿಯನ್ನು ತಕ್ಷಣ ಬಿಡುಗಡೆ ಮಾಡಿ ಎಂದು ಸಾಕೇತ್ ಗೋಖಲೆ ಹೇಳಿದ್ದಾರೆ.

ಇದನ್ನೂ ಓದಿ : ಆರ್ಥಿಕ ಅನ್ಯಾಯ| ಮುಖಾಮುಖಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ: ನಿರ್ಮಲಾ ಸೀತಾರಾಮನ್‌ರಿಗೆ ಆಹ್ವಾನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...