Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...