Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...