Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...