Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...