Homeಕರ್ನಾಟಕಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

ಉದ್ಯೋಗ ಖಾತ್ರಿ ಕೆಲಸಕ್ಕೆ ಕತ್ತರಿ, ರೊಕ್ಕಾ ಇಲ್ರಿ, ಜೀವನ ತ್ರಾಸರೀ

- Advertisement -
- Advertisement -
ಕೊವಿಡ್-19ರ ಸಂಕಷ್ಟದ ಸಮಯದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಸರ್ಕಾರದ ಭರವಸೆ ಹುಸಿಯಾಗಿದೆ. ಹಣದ ಕೊರತೆಯಿಂದಾಗಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಾಗಾಗಿ ಗ್ರಾಮೀಣ ಪ್ರದೇಶದ ಕೂಲಿಕಾರ್ಮಿಕರು ಮತ್ತು ಬಡಜನತೆ ಉದ್ಯೋಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ಕೂಲಿಯೂ ಇಲ್ಲ ಮಾಡಿರುವ ಕೆಲಸಕ್ಕೆ ರೊಕ್ಕವೂ ಇಲ್ಲದಂತಹ ಪರಿಸ್ಥಿತಿ ಉದ್ಭವಿಸಿದೆ.
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲವು ಕಡೆ 30 ಮಾನವ ದಿನಗಳ ಕೆಲಸ ಸೃಜನೆಯಾಗಿದೆ. ಇನ್ನೂ ಕೆಲ ಕಡೆ 15 ದಿನಗಳ ಕೆಲಸ ದೊರಕಿದೆ. ಕೆಲಸ ಬೇಕೆಂದು ಗ್ರಾಮ ಪಂಚಾಯಿತಿಗಳಿಗೆ ಹಲವರು ಅರ್ಜಿ ಸಲ್ಲಿಸಿದ್ದರೂ ಜಾಬ್ ಕಾರ್ಡ್ ಗಳನ್ನು ನೀಡಿಲ್ಲ. ಜಾಬ್ ಕಾರ್ಡ್ ಕೊಡುವಂತೆ ಕೇಳಿದರೂ ಗ್ರಾಮ ಪಂಚಾಯಿತಿಗಳಿಂದ ಯಾವುದೇ ಪ್ರತಿಕ್ರಿಯೆ ದೊರೆಯುತ್ತಿಲ್ಲ. ಇದು ಕೆಲಸ ಅರಸುತ್ತಿರುವವರಿಗೆ ಬೇಸರ ಮೂಡಿಸಿದೆ.
ಬೆಂಗಳೂರು ಸೇರಿದಂತೆ ಎಲ್ಲೆಡೆ ಕೊರೊನ ಸೋಂಕು ವ್ಯಾಪಕವಾಗಿ ಹರಡಿದ ಪರಿಣಾಮ ನಗರಗಳಲ್ಲಿದ್ದ ಲಕ್ಷಾಂತರ ಮಂದಿ ವಲಸೆ ಕಾರ್ಮಿಕರು ಹಳ್ಳಿಗಳಿಗೆ ಮರಳಿದರು. ಹೀಗೆ ಬಂದವರಿಗೆ ಉದ್ಯೋಗ ಖಾತ್ರಿ ಯೋಜನೆ ಕೈಹಿಡಿಯಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಆರಂಭದಲ್ಲಿ ಕೆಲಸ ಸಿಕ್ಕಿದರೂ ಈಗ ಕೆಲಸವಿಲ್ಲದೆ ತೊಂದರೆ ಅನುಭವಿಸುವಂತಾಗಿದೆ. ಉದ್ಯೋಗ ಖಾತ್ರಿ ಯೋಜನೆಯಲ್ಲಿ ಪದವೀಧರರು, ಸ್ನಾತಕೋತ್ತರ ಪದವೀಧರರು ಕೂಡ ಕೆಲಸ ಮಾಡುತ್ತಿದ್ದಾರೆ. ಕೆಲವು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡಿದ್ದಾರೆ.
ಕೇಂದ್ರ ಸರ್ಕಾರ ಉದ್ಯೋಗ ಖಾತ್ರಿ ಯೋಜನೆಯಡಿ ನಿರುದ್ಯೋಗಿಗಳು ಮತ್ತು ವಲಸೆ ಕಾರ್ಮಿಕರಿಗೆ ಕೆಲಸ ನೀಡುವ ಉದ್ದೇಶದಿಂದ ಸಾವಿರಾರು ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಿದೆ. ಮೊದಲ ಹಂತದಲ್ಲಿ 61 ಸಾವಿರ ಕೋಟಿ, ಎರಡನೇ ಕಂತಿನಲ್ಲಿ 40 ಸಾವಿರ ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದರು. ಆದರೆ ರಾಜ್ಯಕ್ಕೆ ಎಷ್ಟು ಹಣ ಬಂದಿದೆ. ಈ ಹಣದಲ್ಲಿ ಎಷ್ಟು ಖರ್ಚಾಗಿದೆ ಎಂಬ ಮಾಹಿತಿಗಳನ್ನು ರಾಜ್ಯ ಸರ್ಕಾರ ಇದುವರೆಗೂ ಬಿಡುಗಡೆ ಮಾಡಿಲ್ಲ.
ಗ್ರಾಮ ಪಂಚಾಯಿತಿಗಳಲ್ಲಿ ನೋಂದಾಯಿಸಿಕೊಂಡ ಫಲನುಭವಿಗಳಿಗೆ ವರ್ಷದಲ್ಲಿ 100 ಮಾನವ ಕೆಲಸದ ದಿನಗಳನ್ನು ಒದಗಿಸುವುದಾಗಿ ಭರವಸೆ ನೀಡಿತ್ತು. ಆದರೆ ಬಹುತೇಕ ಕಡೆ ಕನಿಷ್ಠ 90 ದಿನಗಳ ಕೆಲಸವನ್ನೂ ನೀಡಿಲ್ಲದಿರುವುದು ಕಂಡುಬಂದಿದೆ. ಕೊರೊನ ಕಾಲದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಒಂದು ತಿಂಗಳು ಕೆಲಸ ದೊರಕಿದೆ. ಇದರಲ್ಲಿ ಕೇವಲ 15 ದಿನಗಳ ಕೂಲಿಯನ್ನು ಮಾತ್ರ ನೀಡಲಾಗಿದೆ.
ಲಕ್ಷಾಂತರ ಮಂದಿ ನಿರುದ್ಯೋಗಿಗಳು, ವಲಸೆ ಕಾರ್ಮಿಕರು ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿದ್ದು ಕೆಲವು ಕಡೆ 10 ದಿನ, ಮತ್ತೆ ಕೆಲವು ಕಡೆ ಒಂದು ವಾರದ ಹಣ ಹಾಗೂ ಇನ್ನೂ ಕೆಲವು ಕಡೆ ಒಂದು ತಿಂಗಳ ಹಣ ಬಂದಿಲ್ಲ. ಇದು ನಿರುದ್ಯೋಗಿಗಳನ್ನು ಮತ್ತಷ್ಟು ಸಂಕಷ್ಟ ದೂಡುವಂತೆ ಮಾಡಿದೆ. ತಾಲುಕು ಪಂಚಾಯಿತಿ ಕಾರ್ಯನಿರ್ವಾಹಕ ಅದಿಕಾರಿಗಳನ್ನು ಕೇಳಿದರೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ ಎಂಬ ಸಬೂಬು ನೀಡುತ್ತಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಕಾಮಗಾರಿಗಳು ಸ್ಥಗಿತಗೊಂಡಿವೆ. ಹಣಕಾಸಿನ ಕೊರತೆಯೇ ಇದಕ್ಕೆ ಕಾರಣ. ಪಾವಗಡ ತಾಲೂಕು ವೆಂಕಟಾಪುರ ಮತ್ತು ವಿರುಪಸಮುದ್ರ ಗ್ರಾಮ ಪಂಚಾಯಿತಿಯಲ್ಲಿ 30 ಮಾನವ ಕೆಲಸದ ಸೃಜನೆಯಾಗಿದೆ. ಆದರೆ ಇಲ್ಲಿ ಅರ್ಧದಷ್ಟು ಕೂಲಿಯನ್ನು ಕಾರ್ಮಿಕರಿಗೆ ನೀಡಿಲ್ಲ.
‘ಸರ್ಕಾರ ನೂರು ದಿನಗಳ ಕೆಲಸ ನೀಡುವುದಾಗಿ ಹೇಳುತ್ತಿದೆ. ಆದರೆ 90 ದಿನಗಳ ಕೆಲಸವನ್ನೂ ಕೊಡುತ್ತಿಲ್ಲ. ನಾವು 200 ದಿನಗಳಿಗೆ ಕೆಲಸದ ದಿನಗಳನ್ನು ಹೆಚ್ಚಿಸಬೇಕೆಂದು ಒತ್ತಾಯಿಸುತ್ತಿದ್ದೇವೆ. ಸರ್ಕಾರ ನಿಗದಿಪಡಿಸಿರುವ ಕೆಲಸದ ದಿನಗಳಲ್ಲಿ ಕೆಲಸ ಕೊಡುತ್ತಿಲ್ಲ. ಪಾವಗಡ ತಾಲೂಕಿನಲ್ಲಿ ಉದ್ಯೋಗ ಖಾತ್ರಿಯ ಬಗ್ಗೆ ಜನರಲ್ಲಿ ತಿಳುವಳಿಕೆ ಇಲ್ಲ. ಇದನ್ನು ಗ್ರಾಮ ಪಂಚಾಯಿತಿ ಸದಸ್ಯರು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ ಈ.ಶಿವಣ್ಣ ನಾನುಗೌರಿ.ಕಾಂಗೆ ತಿಳಿಸಿದ್ದಾರೆ.
ಜನರಿಗೆ ಇರುವ ತಿಳುವಳಿಕೆಯ ಕೊರತೆಯನ್ನೇ ಬಂಡವಾಳ ಮಾಡಿಕೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯರು ಜಾಬ್ ಕಾರ್ಡ್ ಗಳನ್ನು ತಮ್ಮ ಬಳಿ ಇಟ್ಟುಕೊಂಡು ಮೊದಲಿಗೆ ತಮ್ಮ ಖಾತೆಗಳಿಗೆ ಹಣ ಜಮಾ ಮಾಡಿಕೊಂಡು ಫಲಾನುಭವಿಗಳಿಗೆ ಕಡಿಮೆ ಹಣ ನೀಡುವ ಮೂಲಕ ವಂಚನೆ ಮಾಡುತ್ತಿದ್ದಾರೆ. ಹಾಗಾಗಿ ಬಡವರಿಗೆ ಹಣ ತಲುಪುತ್ತಿಲ್ಲ. ಜಾಬ್ ಕಾರ್ಡ್ ಇದ್ದು ಬ್ಯಾಂಕ್ ಖಾತೆ ಹೊಂದಿರುವವರಿಗೆ ನೇರವಾಗಿ ಹಣ ಖಾತೆಗೆ ವರ್ಗಾವಣೆಯಾಗುತ್ತದೆ. ಇದು ಒಳ್ಳೆಯ ಬೆಳವಣಿಗೆ. ಆದರೆ ಬಹುತೇಕ ಕಡೆ ಪಂಚಾಯಿತಿ ಸದಸ್ಯರೇ ಹಣ ಗುಳುಂ ಮಾಡಿರುವ ಪ್ರಕರಣಗಳು ಇವೆ’ ಎಂದು ಅವರು ಆರೋಪಿಸಿದ್ದಾರೆ.
ಸ್ವಗ್ರಾಮಗಳಿಗೆ ಮರಳಿರುವ ವಲಸೆ ಕಾರ್ಮಿಕರು ಅದರಲ್ಲೂ ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದ ಕೆಲ ಯುವಕರು ಗ್ರಾಮಗಳಲ್ಲಿ ಸ್ವಯಂ ಉದ್ಯೋಗದಲ್ಲಿ ತೊಡಗಿರುವುದು ಕಂಡುಬರುತ್ತಿದೆ. ಇನ್ನೂ ಹಲವಾರು ಯುವಕರು ಮತ್ತು ಕಾರ್ಮಿಕರು ಯಾವುದೇ ಕೆಲಸ ಇಲ್ಲದೆ ಕಾಲ ದೂಡುವುದು ಕಷ್ಟವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...