Homeಕರ್ನಾಟಕರಾಜ್ಯ ಸರ್ಕಾರ 'ವಿಬಿ–ಜಿ ರಾಮ್ ಜಿ ಕಾಯ್ದೆ' ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

- Advertisement -
- Advertisement -

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ ‘ಮನರೇಗಾ ರಕ್ಷಣಾ ಒಕ್ಕೂಟ’ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸೋಮವಾರ (ಫೆ.2) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟದ ವತಿಯಿಂದ ಮನರೇಗಾ ಯೋಜನೆ ಉಳಿಸಿ ಆಂದೋಲನದ ಭಾಗವಾಗಿ ನಡೆದ ‘ಮಹಾ ಪಂಚಾಯತ್‌ನಲ್ಲಿ, ಪಂಚಾಯತ್ ತೆಗೆದುಕೊಂಡಿರುವ ನಿರ್ಣಯಗಳನ್ನು ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಕಳುಹಿಸಿಕೊಡಬೇಕು. ನರೇಗಾವನ್ನು ಬಲಗೊಳಿಸುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಗ್ರಾಮೀಣ ಭಾಗದ ಬಡವರ ಬೆನ್ನೆಲುಬಾಗಿದ್ದ ಸಂವಿಧಾನದಬದ್ಧ ಹಕ್ಕು ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಜನರನ್ನು ಅತಂತ್ರಗೊಳಿಸುವ, ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳುವ ಹಕ್ಕನ್ನು ಕೇಂದ್ರ ಸರ್ಕಾರವೇ ವಶಪಡಿಸಿಕೊಳ್ಳುವ ಮತ್ತು ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.

ವಿಕೇಂದ್ರೀಕರಣದ ಸಂಕೇತವಾಗಿದ್ದ ನರೇಗಾವನ್ನು ರದ್ದು ಮಾಡಿ ಈಗ ಕೇಂದ್ರೀಕರಣದ ಯೋಜನೆಯನ್ನು ಜಾರಿಗೆ ತರಲಾಗಿದೆ. ನರೇಗಾವನ್ನು ಮುಂದುವರಿಸಬೇಕು. ಅಲ್ಲದೇ ಕುಟುಂಬಕ್ಕೆ ನೂರು ದಿನ ಕೆಲಸ ಎಂಬುದನ್ನು ಪ್ರತಿ ವ್ಯಕ್ತಿಗೆ ನೂರು ದಿನ ಎಂದು ಪರಿವರ್ತಿಸಬೇಕು. ಪ್ರತಿ ಕುಟುಂಬಕ್ಕೆ ಸರಾಸರಿ 300 ದಿನ ಕೆಲಸ ಸಿಗುವಂತೆ ಮಾಡಬೇಕು. ಕನಿಷ್ಠ ಕೂಲಿಯನ್ನು 600 ರೂ.ಕ್ಕೆ ಏರಿಸಬೇಕು ಎಂದು ಅವರು ಒತ್ತಾಯಿಸಿದರು.

ನರೇಗಾ ಯೋಜನೆಯಲ್ಲಿ ಬೇಡಿಕೆ ಇದ್ದಷ್ಟು ದಿನ ಕೆಲಸ ಎಂದಿತ್ತು, ‘ವಿಬಿ-ಜಿ ರಾಮ್ ಜಿ’ಯಲ್ಲಿ ಅಗತ್ಯ ಇರುವಷ್ಟು ಕೆಲಸ ಎಂದು ಪರಿವರ್ತನೆ ಮಾಡಲಾಗಿದೆ. ಕೆಲಸ ಮಾಡುವ ಹಕ್ಕು ಕಿತ್ತುಕೊಳ್ಳಲಾಗಿದೆ. ಉದ್ಯೋಗ ಖಾತ್ರಿ ಇಲ್ಲದಾಗಿದೆ. ಯಾವ ಕೆಲಸ ಎಂಬುವುದನ್ನು ಗ್ರಾಮ ಪಂಚಾಯಿತಿ ತೀರ್ಮಾನ ಮಾಡುತ್ತಿತ್ತು. ಇನ್ನು ಮುಂದೆ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಕೃಷಿ ಕೂಲಿಯನ್ನು ಹೊರಗಿಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ಬಿಟ್ಟು 2.3 ಲಕ್ಷ ಕೋಟಿ ರೂ. ಈ ಯೋಜನೆಗೆ ಮೀಸಲಿಡಬೇಕಿತ್ತು. ಆದರೆ, ಬಜೆಟ್‌ನಲ್ಲಿ 95 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಇದು ಕೆಲಸ ಕಡಿಮೆ ಮಾಡುವ ಹುನ್ನಾರ ಎಂದು ದೂರಿದರು.

ಶೇ.40 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂಬ ಹೊರೆ ಹೊರಿಸಲಾಗಿದೆ. ಇದನ್ನು ತೆಗೆದು ಹಾಕಬೇಕು. ನರೇಗಾದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇರಲಿಲ್ಲ. ‘ವಿಬಿ-ಜಿ ರಾಮ್ ಜಿ’ಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ನರೇಗಾವನ್ನು ಮತ್ತೆ ಸ್ಥಾಪಿಸಬೇಕು ಎಂದು ನೂರ್ ಶ್ರೀಧರ್ ಒತ್ತಾಯಿಸಿದರು.

ಮಹಾಪಂಚಾಯತ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಸಿಪಿಐಎಂಎಲ್, ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ ಸಂಘಟನೆ, ಜಾಗೃತ ಮಹಿಳಾ ಒಕ್ಕೂಟ, ಬಳ್ಳಿ ಬಳಗ–ಸುಸ್ಥಿರ ಕೃಷಿಕರ ವೇದಿಕೆ, ಎಫ್‌ಇಎಸ್, ಭೂಶಕ್ತಿ ಕೇಂದ್ರ, ಎಐಎಆರ್‌ಎಲ್‌ಐ, ಆರ್‌ಐಎಆರ್‌ಡಬ್ಲಯೂ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಎಪಿಯು, ಕಾರ್ಮಿಕ ಸಂಘಟನೆಗಳ ಮುಖಂಡರು, ಸಾಹಿತಿಗಳು, ಚಿಂತಕರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...