Homeಕರ್ನಾಟಕರಾಜ್ಯ ಸರ್ಕಾರ 'ವಿಬಿ–ಜಿ ರಾಮ್ ಜಿ ಕಾಯ್ದೆ' ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ...

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

- Advertisement -
- Advertisement -

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ ‘ಮನರೇಗಾ ರಕ್ಷಣಾ ಒಕ್ಕೂಟ’ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸೋಮವಾರ (ಫೆ.2) ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟದ ವತಿಯಿಂದ ಮನರೇಗಾ ಯೋಜನೆ ಉಳಿಸಿ ಆಂದೋಲನದ ಭಾಗವಾಗಿ ನಡೆದ ‘ಮಹಾ ಪಂಚಾಯತ್‌ನಲ್ಲಿ, ಪಂಚಾಯತ್ ತೆಗೆದುಕೊಂಡಿರುವ ನಿರ್ಣಯಗಳನ್ನು ರಾಜ್ಯ ಸರ್ಕಾರ ರಾಜ್ಯಪಾಲರ ಮೂಲಕ ರಾಷ್ಟ್ರಪತಿಗೆ ಕಳುಹಿಸಿಕೊಡಬೇಕು. ನರೇಗಾವನ್ನು ಬಲಗೊಳಿಸುವ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಹೋರಾಟಗಾರ ನೂರ್ ಶ್ರೀಧರ್ ಮಾತನಾಡಿ, ಗ್ರಾಮೀಣ ಭಾಗದ ಬಡವರ ಬೆನ್ನೆಲುಬಾಗಿದ್ದ ಸಂವಿಧಾನದಬದ್ಧ ಹಕ್ಕು ನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಜನರನ್ನು ಅತಂತ್ರಗೊಳಿಸುವ, ಎಲ್ಲಾ ತೀರ್ಮಾನಗಳನ್ನು ಕೈಗೊಳ್ಳುವ ಹಕ್ಕನ್ನು ಕೇಂದ್ರ ಸರ್ಕಾರವೇ ವಶಪಡಿಸಿಕೊಳ್ಳುವ ಮತ್ತು ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುವ ವಿಬಿ-ಜಿ ರಾಮ್ ಜಿ ಕಾಯ್ದೆಯನ್ನು ಜಾರಿಗೆ ತಂದಿದೆ ಎಂದರು.

ವಿಕೇಂದ್ರೀಕರಣದ ಸಂಕೇತವಾಗಿದ್ದ ನರೇಗಾವನ್ನು ರದ್ದು ಮಾಡಿ ಈಗ ಕೇಂದ್ರೀಕರಣದ ಯೋಜನೆಯನ್ನು ಜಾರಿಗೆ ತರಲಾಗಿದೆ. ನರೇಗಾವನ್ನು ಮುಂದುವರಿಸಬೇಕು. ಅಲ್ಲದೇ ಕುಟುಂಬಕ್ಕೆ ನೂರು ದಿನ ಕೆಲಸ ಎಂಬುದನ್ನು ಪ್ರತಿ ವ್ಯಕ್ತಿಗೆ ನೂರು ದಿನ ಎಂದು ಪರಿವರ್ತಿಸಬೇಕು. ಪ್ರತಿ ಕುಟುಂಬಕ್ಕೆ ಸರಾಸರಿ 300 ದಿನ ಕೆಲಸ ಸಿಗುವಂತೆ ಮಾಡಬೇಕು. ಕನಿಷ್ಠ ಕೂಲಿಯನ್ನು 600 ರೂ.ಕ್ಕೆ ಏರಿಸಬೇಕು ಎಂದು ಅವರು ಒತ್ತಾಯಿಸಿದರು.

ನರೇಗಾ ಯೋಜನೆಯಲ್ಲಿ ಬೇಡಿಕೆ ಇದ್ದಷ್ಟು ದಿನ ಕೆಲಸ ಎಂದಿತ್ತು, ‘ವಿಬಿ-ಜಿ ರಾಮ್ ಜಿ’ಯಲ್ಲಿ ಅಗತ್ಯ ಇರುವಷ್ಟು ಕೆಲಸ ಎಂದು ಪರಿವರ್ತನೆ ಮಾಡಲಾಗಿದೆ. ಕೆಲಸ ಮಾಡುವ ಹಕ್ಕು ಕಿತ್ತುಕೊಳ್ಳಲಾಗಿದೆ. ಉದ್ಯೋಗ ಖಾತ್ರಿ ಇಲ್ಲದಾಗಿದೆ. ಯಾವ ಕೆಲಸ ಎಂಬುವುದನ್ನು ಗ್ರಾಮ ಪಂಚಾಯಿತಿ ತೀರ್ಮಾನ ಮಾಡುತ್ತಿತ್ತು. ಇನ್ನು ಮುಂದೆ ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತದೆ. ಕೃಷಿ ಕೂಲಿಯನ್ನು ಹೊರಗಿಡಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ಪಾಲನ್ನು ಬಿಟ್ಟು 2.3 ಲಕ್ಷ ಕೋಟಿ ರೂ. ಈ ಯೋಜನೆಗೆ ಮೀಸಲಿಡಬೇಕಿತ್ತು. ಆದರೆ, ಬಜೆಟ್‌ನಲ್ಲಿ 95 ಸಾವಿರ ಕೋಟಿ ರೂ. ಮೀಸಲಿಟ್ಟಿದೆ. ಇದು ಕೆಲಸ ಕಡಿಮೆ ಮಾಡುವ ಹುನ್ನಾರ ಎಂದು ದೂರಿದರು.

ಶೇ.40 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಬೇಕು ಎಂಬ ಹೊರೆ ಹೊರಿಸಲಾಗಿದೆ. ಇದನ್ನು ತೆಗೆದು ಹಾಕಬೇಕು. ನರೇಗಾದಲ್ಲಿ ಮಧ್ಯವರ್ತಿಗಳಿಗೆ ಅವಕಾಶ ಇರಲಿಲ್ಲ. ‘ವಿಬಿ-ಜಿ ರಾಮ್ ಜಿ’ಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡಲಾಗಿದೆ. ಹಾಗಾಗಿ ನರೇಗಾವನ್ನು ಮತ್ತೆ ಸ್ಥಾಪಿಸಬೇಕು ಎಂದು ನೂರ್ ಶ್ರೀಧರ್ ಒತ್ತಾಯಿಸಿದರು.

ಮಹಾಪಂಚಾಯತ್‌ನಲ್ಲಿ ಮನರೇಗಾ ರಕ್ಷಣಾ ಒಕ್ಕೂಟ, ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ, ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಕರ್ನಾಟಕ ಜನಶಕ್ತಿ, ಸಿಪಿಐಎಂಎಲ್, ನಮ್ಮೂರ ಭೂಮಿ ನಮಗಿರಲಿ ಅನ್ಯರಿಗಲ್ಲ ಸಂಘಟನೆ, ಜಾಗೃತ ಮಹಿಳಾ ಒಕ್ಕೂಟ, ಬಳ್ಳಿ ಬಳಗ–ಸುಸ್ಥಿರ ಕೃಷಿಕರ ವೇದಿಕೆ, ಎಫ್‌ಇಎಸ್, ಭೂಶಕ್ತಿ ಕೇಂದ್ರ, ಎಐಎಆರ್‌ಎಲ್‌ಐ, ಆರ್‌ಐಎಆರ್‌ಡಬ್ಲಯೂ, ರೈತ ಸಂಘಟನೆಗಳು, ದಲಿತ ಸಂಘರ್ಷ ಸಮಿತಿಗಳು, ಎಪಿಯು, ಕಾರ್ಮಿಕ ಸಂಘಟನೆಗಳ ಮುಖಂಡರು, ಸಾಹಿತಿಗಳು, ಚಿಂತಕರು ಭಾಗವಹಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...