Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...