Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...