Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...