Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...