Homeಮುಖಪುಟಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಮೊದಲು ಬಿಜೆಪಿಯೊಂದಿಗೆ ಸಂಬಂಧ ಮುರಿದುಕೊಳ್ಳಿ- ಎನ್‌ಸಿಪಿ: ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಅತ್ತ ಎನ್‌ಸಿಪಿ, ಇತ್ತ ಬಿಜೆಪಿ ಎಷ್ಟೇ ಒತ್ತಾಯ ಮಾಡಿದರೂ ಮುಖ್ಯಮಂತ್ರಿ ಹುದ್ದೆಯ ಪಟ್ಟು ಬಿಡದ ಶಿವಸೇನೆ

- Advertisement -
- Advertisement -

ಮಹಾರಾಷ್ಟ್ರ ಸರ್ಕಾರ ರಚನೆ ಸಂಬಂಧ ಎನ್‌ಸಿಪಿ ಪಕ್ಷವು ಮೊದಲು ಬಿಜೆಪಿಯೊಂದಿಗಿನ ಎಲ್ಲಾ ಸಂಬಂಧ ಕಡಿದುಕೊಂಡು ನಂತರ ಮಾತುಕತೆಗೆ ಬನ್ನಿ ಎಂದು ಶಿವಸೇನೆಗೆ ಖಡಕ್‌ ಆಗಿ ಹೇಳಿದೆ. ಸದ್ಯ ಕೇಂದ್ರ ಸಚಿವ ಸಂಪುಟದಲ್ಲಿ ಶಿವಸೇನೆಯಿಂದ ಅರವಿಂದ್‌ ಸಾವಂತ್‌ ಸಚಿವರಾಗಿದ್ದಾರೆ. ಅವರು ತಕ್ಷಣ ರಾಜಿನಾಮೆ ನೀಡಿ ಹೊರಬರಬೇಕು ಮತ್ತು ಎನ್‌ಡಿಎ ಜೊತೆಗೆ ಶಿವಸೇನೆ ಸಂಬಂಧ ಕಡಿದುಕೊಳ್ಳಬೇಕು. ನಂತರ ನಾವು ಬೆಂಬಲ ನೀಡಬಹುದು ಎಂದು ಎನ್‌ಸಿಪಿ ವಕ್ತಾರ ನವಾಬ್‌ ಮಲ್ಲಿಕ್‌ರವರು ತಿಳಿಸಿದ್ದಾರೆ.

ಅಲ್ಲದೇ ಕೆಲವು ಶಿವಸೇನೆಯ ಶಾಸಕರು ಈಗಲೂ ಬಿಜೆಪಿಯ ಸಂಪರ್ಕದಲ್ಲಿದ್ದಾರೆ. ಅದು ಸಂಪೂರ್ಣ ತಪ್ಪಬೇಕು. ಆನಂತರವಷ್ಟೇ ನಾವು ಬೆಂಬಲ ನೀಡಬಹುದು ಎಂದು ನವಾಬ್‌ ಮಲ್ಲಿಕೆ ತಿಳಿಸಿದ್ದಾರೆ. ಒಮ್ಮೆ ನಾವು ಬೆಂಬಲ ಕೊಟ್ಟಲ್ಲಿ ಅದು ಸ್ಥಿರ ಸರ್ಕಾರವಾಗಿರಬೇಕು. ಹಾಗಾಗಿ ಶಿವಸೇನೆ ಸಂಪೂರ್ಣವಾಗಿ ಬಿಜೆಪಿಯನ್ನು ತ್ಯಜಿಸಿ ಬಂದರೆ ಮಾತ್ರ ಬೆಂಬಲ ನೀಡಬಹುದು ಎಂದಿದ್ದಾರೆ.

ಏನಾದರೂ ಕೇಳಿ ಮುಖ್ಯಮಂತ್ರಿ ಹುದ್ದೆ ಬಿಟ್ಟು- ಬಿಜೆಪಿ

ಇನ್ನು ಬಿಜೆಪಿ ಪಕ್ಷವೂ ಈಗಲೂ ಶಿವಸೇನೆಗೆ ಬಿಜೆಪಿಯ ಬಾಗಿಲು ಮುಕ್ತವಾಗಿ ತೆಗೆದಿದೆ. ಬನ್ನಿ ಏನಾದರೂ ಬೇಕಾದರೆ ಕೇಳಿ ಆದರೆ ಮುಖ್ಯಮಂತ್ರಿ ಮಾತ್ರ ದೇವೇಂದ್ರ ಫಡ್ನಾವೀಸ್‌ ಆಗಿರುತ್ತಾರೆ ಎಂದು ಬಿಜೆಪಿ ಹೇಳಿದೆ.

ಮಾತುಕತೆಗೆ ದಿನದ 24 ಗಂಟೆಯೂ ಬಿಜೆಪಿಯ ಬಾಗಿಲು ತೆರೆದಿದೆ. ಏಕೆಂದರೆ ಜನ ನಮಗೆ ಬಹುಮತ ನೀಡಿದ್ದಾರೆ. ಹಾಗಾಗಿ ಸರ್ಕಾರ ರಚಿಸಬೇಕಾದರೆ ನಾವು ಮಾತುಕತೆ ಮಾಡಬೇಕಿದೆ ಎಂದು ಮುಖ್ಯಮಂತ್ರಿಗಳ ಸಭೆಯ ನಂತರ ಬಿಜೆಪಿಯ ಮುಖಂಡ ಚಂದ್ರಕಾಂತ್‌ ಪಾಟೀಲ್‌ ಹೇಳಿದ್ದಾರೆ.

ಶಿವಸೇನೆ ಪಟ್ಟು ಹಿಡಿಯಲು ಕಾರಣವೇನು?

ಮಹಾರಾಷ್ಟ್ರದಲ್ಲಿ ಶಿವಸೇನೆಯವರು ಮುಖ್ಯಮಂತ್ರಿಯಾಗಿ 20 ವರ್ಷವಾಗಿದೆ. 1999ರಲ್ಲಿ ನಾರಾಯಣ್‌ ರಾಣೆ ಮುಖ್ಯಮಂತ್ರಿಯಾಗಿದ್ದೆ ಕೊನೆ. ಇನ್ನು ಕಳೆದ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣಾ ಪೂರ್ವ ಮೈತ್ರಿ ಇಲ್ಲದೇ 63 ಸ್ಥಾನಗಳನ್ನು ಗೆದ್ದಿದ್ದ ಶಿವಸೇನೆ ಈ ಬಾರಿ ಚುನಾವಣಾ ಪೂರ್ವ ಮೈತ್ರಿ ಇದ್ದರೂ ಸಹ 56ಕ್ಕೆ ಕುಸಿದಿದೆ. ಅಂದರೆ ಶಿವಸೇನೆ ಬಲಾಢ್ಯ ಇದ್ದ ಜಾಗಗಳಲೆಲ್ಲಾ ಬಿಜೆಪಿ ಗೆಲ್ಲುತ್ತಾ ಬಂದಿದೆ. ಹಾಗಾಗಿ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಾದರೆ ಶಿವಸೇನೆಗೆ ಮತ್ತೆ ಅಧಿಕಾರ ಬೇಕಿದೆ. ಹಾಗಾಗಿ ಅದು ಪಟ್ಟು ಬಿಡದೇ ಕುಳಿತಿದೆ ಮಾತ್ರವಲ್ಲ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೂ ಮೈತ್ರಿಗೆ ಮುಂದಾಗಿದೆ.

ಹಾಗೆ ನೋಡಿದರೆ 2014ರಿಂದಲೇ ಶಿವಸೇನೆಯ ಸ್ಥಾನವನ್ನು ಬಿಜೆಪಿ ಆಕ್ರಮಿಸುತ್ತಾ ಬಂದಿದೆ. ಹಾಗಾಗಿಯೇ ಶಿವಸೇನೆ ಬಿಜೆಪಿಯನ್ನು ಬಹಿರಂಗವಾಗಿಯೇ ಟೀಕಿಸುತ್ತಾ ಬಂದಿದೆ. ಈ ಬಾರಿಯ ಲೋಕಸಭಾ ಚುನಾವಣೆಯ ಸೀಟು ಹಂಚಿಕೆಯಲ್ಲಿ ಭಿನ್ನಮತ ಭುಗಿಲೆದ್ದಿತು. ಹೇಗೋ ನಿವಾರಿಸಿಕೊಂಡರೂ ಸಹ ಅವರ ನಡುಗೆ ಅಂತಹ ಭಾಂದವ್ಯವೇನೂ ಉಳಿದಿಲ್ಲ. ಹಾಗಾಗೆ ಈ ಬಾರಿ ಬಿಜೆಪಿಗೆ ಶಿವಸೇನೆ ಬಿಟ್ಟರೆ ಬೇರೆ ಆಯ್ಕೆಗಳೇ ಇಲ್ಲದಂತಾಗಿದೆ. ಇದೇ ಸಂದರ್ಭ ಬಳಸಿಕೊಂಡು ಮುಖ್ಯಮಂತ್ರಿ ಹುದ್ದೆ ಪಡೆದೇ ತೀರಬೇಕೆಂದು ಶಿವಸೇನೆ ತೀರ್ಮಾನಿಸಿದೆ.

ಇನ್ನು ಬಿಜೆಪಿ ಅತ್ಯಧಿಕ ಸ್ಥಾನಗಳನ್ನು ಪಡೆದ ಪಕ್ಷವಾಗಿ ಹೊರಹೊಮ್ಮಿದೆ. ಆದರೆ ಅದಕ್ಕೆ ಶಿವಸೇನೆಯ ಬೆಂಬಲವಿಲ್ಲದೇ ಸರ್ಕಾರ ರಚಿಸಲು ಸಾಧ್ಯವಾಗುತ್ತಿಲ್ಲ. ಆದರೆ ಮುಖ್ಯಮಂತ್ರಿಯ ಹುದ್ದೆಯನ್ನು ಸಹ ಬಿಟ್ಟುಕೊಡಲು ಬಿಜೆಪಿ ಸಿದ್ದರಿಲ್ಲ. ಹೆಚ್ಚು ಕಮ್ಮಿ ಇಡೀ ದೇಶವೇ ಬಿಜೆಪಿಯ ಕೈಯಲ್ಲಿರುವಾಗ ಅತಿದೊಡ್ಡ ಆರ್ಥಿಕತೆ ಹೊಂದಿರುವ ಮಹಾರಾಷ್ಟ್ರವನ್ನು ಬಿಟ್ಟುಕೊಡಲು ಅದು ತಯಾರಿಲ್ಲ. ಇನ್ನು ಸರ್ವಾಧಿಕಾರಿ ಮನಸ್ಥಿತಿಯ ಬಿಜೆಪಿ ಮತ್ತೊಂದು ಸರ್ವಾಧಿಕಾರಿ ಮನಸ್ಥಿತಿಯ ಶಿವಸೇನೆಯ ಕೈಕೆಳಗೆ ಕೆಲಸ ಮಾಡುವುದು ಅವರ ಅಹಂಕಾರಕ್ಕೆ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.

ಸರ್ಕಾರ ರಚನೆಗೆ ಇನ್ನೆರೆಡು ದಿನಗಳು ಮಾತ್ರ ಬಾಕಿ ಉಳಿದಿವೆ. ಹಗ್ಗ ಜಗ್ಗಾಟ ಮುಂದುವರೆದಿದೆ. ಯಾರು ಯಾರ ಜೊತೆಗೆ ಬೇಕಾದರೂ ಸೇರಿ ಸರ್ಕಾರ ರಚಿಸುವ ಅವಕಾಶವಿದೆ. ಇಲ್ಲವೇ ರಾಷ್ಟ್ರಪತಿ ಆಡಳಿತಕ್ಕೆ ಹೋಗುವ ದಾರಿಯಿದೆ. ಇನ್ನೆರೆಡು ದಿನದಲ್ಲಿ ಏನಾಗಲಿದೆ ಕಾದು ನೋಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...